ರಿಷಭ್ ಪಂತ್, ಗಂಗೂಲಿ ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಐಎಪಿಲ್ 2023: ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್ ಕೀಪರ್ ಪಂತ್ ಸ್ಥಾನಕ್ಕೆ ಬದಲಿ ಆಟಗಾರ ಯಾರು?

ಇತ್ತೀಚಿಗೆ ಭಯಾನಕ ಅಪಘಾತದಲ್ಲಿ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಅಲಭ್ಯತೆಯಿಂದಾಗಿ ಆ ಜಾಗಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬುದು ಡೆಲ್ಲಿ ಕ್ಯಾಪಿಟಲ್ಸ್ ನಿರ್ದೇಶಕ ಸೌರವ್ ಗಂಗೂಲಿ ಅವರಿಗೆ ಭಾರೀ ಸವಾಲು ಆಗಿದೆ. 

ಕೊಲ್ಕತ್ತಾ: ಇತ್ತೀಚಿಗೆ ಭಯಾನಕ ಅಪಘಾತದಲ್ಲಿ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಅಲಭ್ಯತೆಯಿಂದಾಗಿ ಆ ಜಾಗಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬುದು ಡೆಲ್ಲಿ ಕ್ಯಾಪಿಟಲ್ಸ್ ನಿರ್ದೇಶಕ ಸೌರವ್ ಗಂಗೂಲಿ ಅವರಿಗೆ ಭಾರೀ ಸವಾಲು ಆಗಿದೆ. 

'ರಿಷಭ್ ಪಂತ್ ಜೊತೆಗೆ ಒಂದೆರಡು ಬಾರಿ ಮಾತನಾಡಿದ್ದೇನೆ. ಗಾಯಗಳು ಮತ್ತು ಶಸ್ತ್ರ ಚಿಕಿತ್ಸೆಯಿಂದ ಅವರು ಕಠಿಣ ಅವಧಿಯನ್ನು ಎದುರಿಸುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. ಒಂದು ವರ್ಷ ಅಥವಾ ಕೆಲವು ವರ್ಷದೊಳಗೆ ಅವರು ಭಾರತ ತಂಡಕ್ಕೆ ಮರಳಲಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ. ಐಪಿಎಲ್ ಸಮಯದಲ್ಲಿ ಪಂತ್ ತಂಡದೊಂದಿಗೆ ಸ್ವಲ್ಪ ಸಮಯ ಇರುವುದನ್ನು ಇಷ್ಟಪಡಬಹುದು, ಅದು ಅವರ ಚೇತರಿಕೆಗೆ ಸಹಾಯ ಮಾಡುತ್ತದೆ. "ಗೊತ್ತಿಲ್ಲ. ನಾವು ಮುಂದೆ ನೋಡುವುದಾಗಿ  ಗಂಗೂಲಿ ಹೇಳಿದರು.

ಪಂತ್ ಅವರ ಸ್ಥಾನಕ್ಕೆ ಬೇರೊಬ್ಬ ಆಟಗಾರರನ್ನು ದೆಹಲಿ ಕ್ಯಾಪಿಟಲ್ಸ್ ಘೋಷಿಸಿಲ್ಲ.  ಯುವ ಟರ್ಕಿಯ ಅಭಿಷೇಕ್ ಪೊರೆಲ್ ಮತ್ತು ದೇಶೀಯ ಅನುಭವಿ ಶೆಲ್ಡನ್ ಜಾಕ್ಸನ್ ನಡುವೆ ಯಾರು ಉತ್ತಮರು ಎಂಬುದರ ಕುರಿತು ಗಂಗೂಲಿ ಇನ್ನೂ ನಿರ್ಧರಿಸಿಲ್ಲ. ಇದನ್ನು ತೀರ್ಮಾನಿಸಲು ಇನ್ನೂ ಸ್ವಲ್ಪ ಸಮಯಾವಕಾಶ ಬೇಕು, ಐಪಿಎಲ್ ಗಿಂತ ಮುನ್ನ ಅಭ್ಯಾಸಗಳು ಆರಂಭವಾಗಲಿದೆ.  ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದು, ಅಕ್ಸರ್ ಪಟೇಲ್ ಉಪ ನಾಯಕರಾಗಲಿದ್ದಾರೆ. 

ಕೊಲ್ಕತ್ತಾದಲ್ಲಿ  ಪೃಥ್ವಿ ಶಾ, ಇಶಾಂತ್ ಶರ್ಮಾ, ಚೇತನ್ ಸಕರಿಯಾ, ಮನೀಶ್ ಪಾಂಡೆ ಮತ್ತಿತರರು ಇತರ ದೇಶಿಯ ಆಟಗಾರರೊಂದಿಗೆ ಪಾಲ್ಗೊಂಡಿದ್ದ ಮೂರು ದಿನಗಳ ಶಿಬಿರವನ್ನು ಗಂಗೂಲಿ ಮೇಲ್ವಿಚಾರಣೆ ಮಾಡಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

New year 2026: ನಗರದಾದ್ಯಂತ ಸಂಭ್ರಮಾಚರಣೆ: ಸಂಭ್ರಮದ ಮಧ್ಯೆ ಯುವಕರ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ!

UP: 2025 ರಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್‌; 48 ಸಾವು, 8 ವರ್ಷಗಳಲ್ಲಿ ಅತಿ ಹೆಚ್ಚು

ಭಾರತ-ಬಾಂಗ್ಲಾದೇಶ ಸಂಬಂಧಗಳಿಗೆ ಖಲೀದಾ ಜಿಯಾ ಕೊಡುಗೆ ನೀಡಿದ್ದಾರೆ: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಪತ್ರ

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

SCROLL FOR NEXT