ಜಸ್ಪ್ರೀತ್ ಬೂಮ್ರಾ 
ಕ್ರಿಕೆಟ್

ಬೂಮ್ರಾ ಗಾಯದಿಂದ ಚೇತರಿಕೆ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಸೇರ್ಪಡೆ

ಗಾಯದಿಂದ ಚೇತರಿಸಿಕೊಂಡಿರುವ ವೇಗಿ ಜಸ್ಪ್ರೀತ್ ಬೂಮ್ರಾ ಶ್ರೀಲಂಕಾ ವಿರುದ್ಧದ ಮುಂದಿನ ಏಕದಿನ ಸರಣಿಗಾಗಿ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆನ್ನುನೋವಿನ ಸಮಸ್ಯೆಯಿಂದಾಗಿ ಬೂಮ್ರಾ ಟಿ. 20 ವಿಶ್ವಕಪ್ ನಲ್ಲಿ ಆಡಿರಲಿಲ್ಲ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದ ಟಿ-20 ಪಂದ್ಯವೇ ಅವರ ಕೊನೆಯ ಪಂದ್ಯವಾಗಿತ್ತು.

ನವ ದೆಹಲಿ: ಗಾಯದಿಂದ ಚೇತರಿಸಿಕೊಂಡಿರುವ ವೇಗಿ ಜಸ್ಪ್ರೀತ್ ಬೂಮ್ರಾ ಶ್ರೀಲಂಕಾ ವಿರುದ್ಧದ ಮುಂದಿನ ಏಕದಿನ ಸರಣಿಗಾಗಿ ಟೀಂ ಇಂಡಿಯಾಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆನ್ನುನೋವಿನ ಸಮಸ್ಯೆಯಿಂದಾಗಿ ಬೂಮ್ರಾ ಟಿ. 20 ವಿಶ್ವಕಪ್ ನಲ್ಲಿ ಆಡಿರಲಿಲ್ಲ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದ ಟಿ-20 ಪಂದ್ಯವೇ ಅವರ ಕೊನೆಯ ಪಂದ್ಯವಾಗಿತ್ತು.

 ಬೂಮ್ರಾ ಮರಳುವುದರೊಂದಿಗೆ ಭಾರತದ ಬೌಲಿಂಗ್ ಶಕ್ತಿ ವೃದ್ಧಿಸಲಿದೆ.  ಟೀಂ ಇಂಡಿಯಾಕ್ಕೆ ಬೌಲಿಂಗ್ ಸಮಸ್ಯೆ ಕಾಡುತಿತ್ತು.  ಸ್ವದೇಶದಲ್ಲಿ ನಡೆಯಲಿರುವ 50 ಓವರ್ ಗಳ ವಿಶ್ವಕಪ್ ನಲ್ಲಿ ಬೂಮ್ರಾ ಅವರಿಗೆ ಟೀಂ ಮ್ಯಾನೇಜ್ ಮೆಂಟ್ ಯಾವ ರೀತಿಯ ಪ್ರಾಮುಖ್ಯತೆ ನೀಡಲಿದೆ ಎಂಬುದು ಕುತೂಹಲ ಕೆರಳಿಸಿದೆ. 

ಸೆಪ್ಟೆಂಬರ್ 2022ರಿಂದ ಕ್ರಿಕೆಟ್ ನಿಂದ ಹೊರಗುಳಿದಿದ್ದ ಬೂಮ್ರಾ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಅವರು ಚಿಕಿತ್ಸೆ ಪಡೆದ ಬಳಿಕ ಸದೃಢರಾಗಿದ್ದಾರೆ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಹೇಳಿದ್ದು, ಶೀಘ್ರದಲ್ಲೇ ಅವರು ಟೀಂ ಇಂಡಿಯಾ ಸೇರಲಿದ್ದಾರೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ. 

ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಭಾರತ ತಂಡ ಇಂತಿದೆ:  ರೋಹಿತ್ ಶರ್ಮಾ (ನಾಯಕ) ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್) ಇಶಾನ್ ಕಿಶಾನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಚಹಲ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಶಿರಾಜ್, ಉಮ್ರಾನ್ ಮಲ್ಲಿಕ್, ಅರ್ಶ್ ದೀಪ್ ಸಿಂಗ್ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT