ಉಮ್ರಾನ್ ಮಲ್ಲಿಕ್ ಮತ್ತು ಶೊಯೆಬ್ ಅಖ್ತರ್ 
ಕ್ರಿಕೆಟ್

ಗಂಟೆಗೆ 161 ಕಿ.ಮಿ ವೇಗದಲ್ಲಿ ಬೌಲಿಂಗ್‌?; ಶೊಯೆಬ್ ಅಖ್ತರ್ ದಾಖಲೆ ಮುರಿಯುವ ಕುರಿತು ಭಾರತದ ವೇಗಿ ಉಮ್ರಾನ್ ಮಲ್ಲಿಕ್ ಹೇಳಿದ್ದೇನು?

ಭಾರತದ ವೇಗದ ಬೌಲಿಂಗ್ ಸೆನ್ಸೇಷನ್ ಉಮ್ರಾನ್ ಮಲ್ಲಿಕ್ ಪಾಕಿಸ್ತಾನದ ವೇಗಿ ರಾವಲ್ಪಿಂಡಿ ಎಕ್ಸ್ ಪ್ರೆಸ್ ಶೊಯೆಬ್ ಅಖ್ತರ್ ಅವರ ವೇಗದ ಬೌಲಿಂಗ್ ದಾಖಲೆ ಮುರಿಯುವ ಕುರಿತು ಮಾತನಾಡಿದ್ದಾರೆ.

ನವದೆಹಲಿ: ಭಾರತದ ವೇಗದ ಬೌಲಿಂಗ್ ಸೆನ್ಸೇಷನ್ ಉಮ್ರಾನ್ ಮಲ್ಲಿಕ್ ಪಾಕಿಸ್ತಾನದ ವೇಗಿ ರಾವಲ್ಪಿಂಡಿ ಎಕ್ಸ್ ಪ್ರೆಸ್ ಶೊಯೆಬ್ ಅಖ್ತರ್ ಅವರ ವೇಗದ ಬೌಲಿಂಗ್ ದಾಖಲೆ ಮುರಿಯುವ ಕುರಿತು ಮಾತನಾಡಿದ್ದಾರೆ.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಮಾಜಿ ವೇಗದ ಬೌಲರ್‌ ಶೋಯಬ್‌ ಅಖ್ತರ್‌ ಅವರ 161 ಕಿ.ಮಿ ವೇಗದ ಎಸೆತದ ದಾಖಲೆಯನ್ನು ನೀವು ಮುರಿಯಲಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಸದ್ಯ ದೇಶಕ್ಕಾಗಿ ಉತ್ತಮವಾಗಿ ಆಟವಾಡುವುದರ ಬಗ್ಗೆಯಷ್ಟೇ ನಾನು ಗಮನಹರಿಸಿದ್ದೇನೆ. ಒಂದು ವೇಳೆ ನಾನು ಉತ್ತಮ ಪ್ರದರ್ಶನ ನೀಡಿದರೆ ಅಥವಾ ನಾನು ಅದೃಷ್ಟವಂತನಾಗಿದ್ದಾರೆ, ಆ ದಾಖಲೆಯನ್ನು ಮುರಿಯುತ್ತೇನೆ. ಆದರೆ ಆ ಬಗ್ಗೆ ನಾನು ಯೋಚನೆ ಮಾಡಿಲ್ಲ ಎಂದು ಹೇಳಿದ್ದಾರೆ.

ಪಂದ್ಯದ ವೇಳೆಯಲ್ಲಿ ನೀವು ಎಷ್ಟು ವೇಗವಾಗಿ ಬೌಲಿಂಗ್‌ ಮಾಡುತ್ತೀರಿ ಎನ್ನುವುದು ನಿಮಗೆ ತಿಳಿಯುವುದಿಲ್ಲ. ಎಷ್ಟು ವೇಗವಾಗಿ ಬೌಲಿಂಗ್‌ ಮಾಡಿದೆ ಎಂದು ಪಂದ್ಯದ ಬಳಿಕವಷ್ಟೇ ಗೊತ್ತಾಗುತ್ತದೆ. ಪಂದ್ಯದ ವೇಳೆ, ಸರಿಯಾದ ಸ್ಥಳದಲ್ಲಿ ಬೌಲಿಂಗ್‌ ಮಾಡಿ ವಿಕೆಟ್‌ ಪಡೆಯುವುದರ ಮೇಲಷ್ಟೇ ನನ್ನ ಗಮನ ಇರುತ್ತದೆ‘ ಎಂದು ಅವರು ಹೇಳಿದ್ದಾರೆ.

ಐಪಿಎಲ್‌ ಟೂರ್ನಿಯಲ್ಲಿ ಸನ್‌ ರೈಸರ್ಸ್ ಹೈದರಾಬಾದ್‌ ಪರ ಆಡುತ್ತಿರುವ ಉಮ್ರಾನ್‌ ಮಲಿಕ್, ತನ್ನ ವೇಗದ ಬೌಲಿಂಗ್‌ ಮೂಲಕ ಗಮನ ಸೆಳೆದಿದ್ದರು. ಗಂಟೆಗೆ 150 ಕಿ.ಮಿ ಗೂ ಹೆಚ್ಚಿನ ವೇಗದಲ್ಲಿ ಚೆಂಡು ಎಸೆಯುವ ಸಾಮರ್ಥ್ಯ ಹೊಂದಿರುವ ಅವರು, 2022ರ ಐಪಿಎಲ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಫಲವಾಗಿ ಅವರಿಗೆ ಭಾರತ ತಂಡದ ಬಾಗಿಲು ಕೂಡ ತೆರೆದಿತ್ತು.

ಈವರೆಗೆ ಐದು ಏಕದಿನ ಹಾಗೂ ಮೂರು ಟಿ–20 ಪಂದ್ಯಗಳನ್ನು ಆಡಿರುವ ಉಮ್ರಾನ್‌ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಮಂಗಳವಾರದಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧ ಟಿ–20 ಸರಣಿಗೂ ಅವರಿಗೆ ಅವಕಾಶ ಲಭಿಸಿದೆ. 2023ರ ಏಕದಿನ ವಿಶ್ವಕಪ್‌ ದೃಷ್ಠಿಯಲ್ಲಿ ಅವರಿಗೆ ಈ ಅವಕಾಶಗಳು ಮಹತ್ವದ್ದು ಎನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT