ಸಂಜು ಸ್ಯಾಮ್ಸನ್ 
ಕ್ರಿಕೆಟ್

ಆಡಿದ್ದು ಒಂದೇ ಪಂದ್ಯ; ಶ್ರೀಲಂಕಾ ವಿರುದ್ಧದ T20 ಸರಣಿಯಿಂದ ಸಂಜು ಸ್ಯಾಮ್ಸನ್ ಔಟ್!

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಉಳಿದ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. 

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಉಳಿದ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. 

ಇಂದು ಪುಣೆಯಲ್ಲಿ ನಡೆಯಲಿರುವ ಪಂದ್ಯಕ್ಕೆ ಮುಂಬೈನಿಂದ ಟೀಂ ಇಂಡಿಯಾ ತಂಡದೊಂದಿಗೆ ಸಂಜು ಸ್ಯಾಮ್ಸನ್ ಹೋಗಿಲ್ಲ. ಬಿಸಿಸಿಐನ ವೈದ್ಯಕೀಯ ತಂಡವು ನಿನ್ನೆ ಮಧ್ಯಾಹ್ನ ಸಂಜು ಸ್ಯಾಮ್ಸನ್ ಅವರನ್ನು ಸ್ಕ್ಯಾನ್ ಮಾಡಿದ್ದು ಇದಾದ ನಂತರ ಸಂಜು ಸ್ಯಾಮ್ಸನ್‌ಗೆ ವಿಶ್ರಾಂತಿ ಮತ್ತು ಪುನರ್ವಸತಿಗೆ ಸಲಹೆ ನೀಡಿದ್ದರು. ಇದೀಗ ಬಿಸಿಸಿಐನ ಆಯ್ಕೆ ಸಮಿತಿಯು ಸಂಜು ಸ್ಯಾಮ್ಸನ್ ಬದಲಿಗೆ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ. 

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕಳೆದ ಮಂಗಳವಾರ ನಡೆದಿದ್ದ ಪಂದ್ಯದಲ್ಲಿ ಮಿಡ್-ಆಫ್‌ನಲ್ಲಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸಂಜು ಸ್ಯಾಮ್ಸನ್ ಗಾಯಗೊಂಡಿದ್ದರು. 3 ಪಂದ್ಯಗಳ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ 1-0 ಮುನ್ನಡೆ ಸಾಧಿಸಿದೆ. ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 2 ರನ್‌ಗಳಿಂದ ಗೆದ್ದುಕೊಂಡಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ, 'ಸಂಜು ಸ್ಯಾಮ್ಸನ್ ಮುಂಬೈನಲ್ಲಿಯೇ ಉಳಿದುಕೊಂಡಿದ್ದಾರೆ. ಅವರನ್ನು ಮುಂಬೈನಲ್ಲಿ ಸ್ಕ್ಯಾನ್ ಮಾಡಲಾಗಿದೆ. ಜಿತೇಶ್ ಶರ್ಮಾ ತಂಡವನ್ನು ಸೇರಿಕೊಂಡಿದ್ದಾರೆ ಎಂದರು. ಭಾರತ ತಂಡ ಶ್ರೀಲಂಕಾ ವಿರುದ್ಧ ಇಂದು ಪುಣೆಯಲ್ಲಿ ಎರಡನೇ T20 ಪಂದ್ಯವನ್ನು ಆಡಲಿದೆ. 

2ನೇ ಟಿ20 ಪಂದ್ಯಕ್ಕೆ ಭಾರತ ತಂಡ: 
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್ , ಅಕ್ಷರ್ ಪಟೇಲ್, ಅರ್ಶ್ದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT