ಟೀಂ ಇಂಡಿಯಾ 
ಕ್ರಿಕೆಟ್

ಭಾರತ ತಂಡದ ದಾಖಲೆ ಸಂಖ್ಯೆಯ ನೋ ಬಾಲ್‌ಗೆ ಕೋಚ್ ರಾಹುಲ್ ದ್ರಾವಿಡ್ ಕೊಟ್ಟ ಉತ್ತರವಿದು!

ಪುಣೆಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತದ ಬೌಲರ್‌ಗಳು ಬೌಲಿಂಗ್ ಮಾಡಿದ ರೀತಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ದೊಡ್ಡ ಪ್ರತಿಕ್ರಿಯೆ ನೀಡಿದ್ದಾರೆ.

ಪುಣೆಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತದ ಬೌಲರ್‌ಗಳು ಬೌಲಿಂಗ್ ಮಾಡಿದ ರೀತಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ದೊಡ್ಡ ಪ್ರತಿಕ್ರಿಯೆ ನೀಡಿದ್ದಾರೆ. 

ಈ ಆಟಗಾರರು ಇನ್ನೂ ಚಿಕ್ಕವರಾಗಿದ್ದು, ಅವರ ತಪ್ಪುಗಳಿಂದ ಕಲಿಯುತ್ತಾರೆ ಎಂದು ಅವರು ಹೇಳಿದ್ದಾರೆ. ರಾಹುಲ್ ದ್ರಾವಿಡ್ ತಂಡದ ಬೌಲರ್‌ಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಎಷ್ಟು ಉತ್ತಮವಾಗಿ ಬೌಲಿಂಗ್ ಮಾಡಿತು. ಅದಕ್ಕೆ ತದ್ವಿರುದ್ಧ ಎಂಬಂತೆ ಎರಡನೇ ಪಂದ್ಯದಲ್ಲಿ ಕೆಟ್ಟ ಬೌಲಿಂಗ್ ಪ್ರದರ್ಶನ ನೀಡಿತ್ತು. ಶಿವಂ ಮಾವಿ ಮತ್ತು ಅರ್ಷದೀಪ್ ಸಿಂಗ್ ಅವರು ಅತ್ಯಂತ ದುಬಾರಿ ಬೌಲರ್ ಗಳಾದರು. 

ಈ ಕಾರಣದಿಂದಾಗಿ ಪಂದ್ಯದಲ್ಲಿ ಶ್ರೀಲಂಕಾ 206 ರನ್ ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಶಿವಂ ಮಾವಿ ನಾಲ್ಕು ಓವರ್‌ಗಳಲ್ಲಿ 53 ರನ್ ನೀಡಿದ್ದರೆ ಅರ್ಷದೀಪ್ ಸಿಂಗ್ ಕೇವಲ ಎರಡು ಓವರ್‌ಗಳಲ್ಲಿ 37 ರನ್ ನೀಡಿದ್ದರು. ಈ ವೇಳೆ ಅರ್ಷದೀಪ್ ಹಲವು ನೋ ಬಾಲ್‌ಗಳನ್ನೂ ಎಸೆದರು. ಅವರು ಒಟ್ಟು ಐದು ನೋ ಬಾಲ್‌ಗಳನ್ನು ಎಸೆದಿದ್ದು ಈ ಮೂಲಕ ಭಾರತೀಯ ಬೌಲರ್‌ಗಳಲ್ಲಿ ಅತಿ ಹೆಚ್ಚು ನೋ ಬಾಲ್‌ಗಳನ್ನು ಎಸೆದ ಕೆಟ್ಟ ದಾಖಲೆ ಬರೆದಿದ್ದಾರೆ.

ಬೌಲರ್‌ಗಳನ್ನು ಸಮರ್ಥಿಸಿಕೊಂಡ ಮುಖ್ಯ ಕೋಚ್ ರಾಹುಲ್ ದ್ರಾವಿಡ್!
ಯಾರೂ ಯಾವುದೇ ಸ್ವರೂಪದಲ್ಲಿ ವೈಡ್ (ನೋ ಬಾಲ್) ಬೌಲ್ ಮಾಡಲು ಬಯಸುವುದಿಲ್ಲ. ಅದರಲ್ಲೂ ಟಿ20ಯಲ್ಲಿ ಅವರು ನಿಮ್ಮನ್ನು ತುಂಬಾ ನೋಯಿಸುತ್ತಾರೆ. ಈ ಆಟಗಾರರು ಇನ್ನೂ ಚಿಕ್ಕವರಾಗಿರುವುದರಿಂದ ನಾವು ತಾಳ್ಮೆಯಿಂದಿರಬೇಕು. ಅದರಲ್ಲೂ ನಮ್ಮ ಬೌಲಿಂಗ್ ದಾಳಿಯಲ್ಲಿ ಸಾಕಷ್ಟು ಯುವ ಆಟಗಾರರಿದ್ದಾರೆ. ಈ ರೀತಿಯ ಪಂದ್ಯಗಳು ಅವರಿಂದ ಬರುತ್ತವೆ. ನಾವೆಲ್ಲರೂ ತಂಡದೊಂದಿಗೆ ತಾಳ್ಮೆಯಿಂದಿರಬೇಕು. ನಿಸ್ಸಂಶಯವಾಗಿ ಅವರು ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ನಾವು ಅವರಿಗೆ ಸಹಾಯ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತೇವೆ. ಅವರ ಕೌಶಲ್ಯದ ಸಂಪೂರ್ಣ ಲಾಭವನ್ನು ಪಡೆಯಲು ಅವರಿಗೆ ಉತ್ತಮ ವಾತಾವರಣವನ್ನು ನಿರ್ಮಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT