ರಿಷಬ್ ಪಂತ್ 
ಕ್ರಿಕೆಟ್

ಐಪಿಎಲ್ 2023: ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ!

ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ.

ಮುಂಬೈ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ.

ಹೌದು... ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್​ ಪಂತ್ ಚೇತರಿಕೆಗೆ ಸುಮಾರು 9 ತಿಂಗಳು ಸಮಯ ತೆಗೆದುಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್​ ಈ ವರ್ಷ ನಡೆಯುವ ಎಲ್ಲ ಕ್ರಿಕೆಟ್​ ಸರಣಿಯಿಂದ ದೂರ ಉಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈನ ಸದ್ಯ ಪಂತ್​ ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದು, 16ನೇ ಆವೃತ್ತಿಯ ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಐಪಿಎಲ್ 2023ಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪಂತ್​ ಅವರನ್ನು 16 ಕೋ.ರೂ.ಗೆ ತಂಡದಲ್ಲೇ ಉಳಿಸಿಕೊಂಡಿತ್ತು. ಆದರೆ ಇದೀಗ ಪಂತ್​ ಅವರು ಐಪಿಎಲ್​ನಲ್ಲಿ ಆಡದಿದ್ದಲ್ಲಿ ಅವರಿಗೆ ಹಣ ನೀಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಹಣವನ್ನು ಫ್ರಾಂಚೈಸಿ ಬದಲು ಬಿಸಿಸಿಐ ನೀಡುತ್ತದೆ ಎಂದು ವರದಿಯಾಗಿದೆ. ಪಂತ್ ಈ ವರ್ಷ ಐಪಿಎಲ್‌ನಲ್ಲಿ ಆಡದಿದ್ದರೂ, ಬಿಸಿಸಿಐ ಅವರ ಐಪಿಎಲ್ ಸಂಬಳದ 16 ಕೋಟಿ ರೂ.ಗಳನ್ನು ದಿಲ್ಲಿ ಕ್ಯಾಪಿಟಲ್ಸ್‌ ಪರವಾಗಿ ಸಂಪೂರ್ಣವಾಗಿ ಪಾವತಿಸುತ್ತದೆ. ಇದು ಮಾತ್ರವಲ್ಲದೆ, ಕೇಂದ್ರ ಒಪ್ಪಂದದಡಿಯಲ್ಲಿ ಅವರು ಪಡೆದ ವಾರ್ಷಿಕ ರಿಟೈನರ್‌ಶಿಪ್ ಶುಲ್ಕಕ್ಕೆ 5 ಕೋಟಿ ರೂ.ಗಳನ್ನು ನೀಡುತ್ತದೆ ಎಂದು ವರದಿಯಾಗಿದೆ.

ಬಿಸಿಸಿಐ, ಟೀಮ್​ ಇಂಡಿಯಾದ ಎಲ್ಲ ಕೇಂದ್ರೀಯ ಗುತ್ತಿಗೆ ಆಟಗಾರರಿಗೆ ವಿಮೆ ಮಾಡಲಾಗುತ್ತದೆ. ಬಿಸಿಸಿಐ ನಿಯಮಗಳ ಪ್ರಕಾರ, ಈ ಆಟಗಾರರು ಗಾಯದ ಕಾರಣ ಐಪಿಎಲ್‌ನಿಂದ ಹೊರಗುಳಿದಿದ್ದಲ್ಲಿ ಮಂಡಳಿಯಿಂದ ಪೂರ್ಣವಾಗಿ ಅವರಿಗೆ ಮೊತ್ತವನ್ನು ಪಾವತಿಸಲಾಗುತ್ತದೆ. ಈ ಮೊತ್ತವನ್ನು ವಿಮಾ ಕಂಪನಿ ಪಾವತಿಸುತ್ತದೆ. ಆದ್ದರಿಂದ ಫ್ರಾಂಚೈಸಿ ಬದಲು ಆಟಗಾರರಿಗೆ ಬಿಸಿಸಿಐ ಹಣ ಪಾವತಿಸುತ್ತದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT