ಕೆಎಲ್ ರಾಹುಲ್, ರಾಹುಲ್ ದ್ರಾವಿಡ್, ವೆಂಕಟೇಶ್ ಪ್ರಸಾದ್ ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ವಿಫಲವಾದರೂ ರಾಹುಲ್ ಗೆ ಮಣೆ: ಆಯ್ಕೆದಾರರ ನಡೆ ಟೀಕಿಸಿದ ಕರ್ನಾಟಕದ ಮಾಜಿ ವೇಗಿ ವೆಂಕಿ

ಸ್ಥಿರ ಪ್ರದರ್ಶನ ತೋರುವಲ್ಲಿ ವಿಫಲವಾಗುತ್ತಿದ್ದರೂ ನಿರಂತರವಾಗಿ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಟೀಂ ಇಂಡಿಯಾ ಆಯ್ಕೆದಾರರು ಮಣೆ ಹಾಕುತ್ತಿರುವುದಕ್ಕೆ  ಕನ್ನಡಿಗರೇ ಆದ ವೇಗಿ ವೆಂಕಟೇಶ್ ಪ್ರಸಾದ್ ಕಿಡಿಕಾರಿದ್ದಾರೆ. 

ನವದೆಹಲಿ: ಸ್ಥಿರ ಪ್ರದರ್ಶನ ತೋರುವಲ್ಲಿ ವಿಫಲವಾಗುತ್ತಿದ್ದರೂ ನಿರಂತರವಾಗಿ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಟೀಂ ಇಂಡಿಯಾ ಆಯ್ಕೆದಾರರು ಮಣೆ ಹಾಕುತ್ತಿರುವುದಕ್ಕೆ ಕನ್ನಡಿಗರೇ ಆದ ವೇಗಿ ವೆಂಕಟೇಶ್ ಪ್ರಸಾದ್ ಕಿಡಿಕಾರಿದ್ದಾರೆ. ಅಲ್ಲದೇ  ಇಶಾನ್ ಕಿಶಾನ್ ಗಿಂತ ಶುಭ್ ಮನ್ ಗಿಲ್ ಗೆ ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದಕ್ಕೂ ಪ್ರಸಾದ್ ಟೀಕಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಪ್ರಸಾದ್, ನಿಗದಿತ ಓವರ್ ಗಳ ಪಂದ್ಯದಲ್ಲಿ ಭಾರತದ ಪ್ರದರ್ಶನಕ್ಕೆ ನೋವುಂಟು ಮಾಡುತ್ತಿರುವವರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ಏಕದಿನ ಸರಣಿಯಲ್ಲಿ ದ್ವಿಶತಕ ಭಾರಿಸಿದ ಆಟಗಾರನಿಗೆ ನ್ಯಾಯಯುತವಾಗಿ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ.

ಟೀಂ ಇಂಡಿಯಾ ಪರ 33 ಟೆಸ್ಟ್ ಹಾಗೂ 161 ಏಕದಿನ ಪಂದ್ಯಗಳನ್ನಾಡಿರುವ ವೆಂಕಟೇಶ್ ಪ್ರಸಾದ್, ಪ್ರಸ್ತುತ ಟೀಂ ಇಂಡಿಯಾದಲ್ಲಿ ಪ್ರದರ್ಶನ ತೋರುವವರಿಗೆ ಅವಕಾಶ ನೀಡುವಂತೆ ಆಯ್ಕೆದಾರರನ್ನು ಒತ್ತಾಯಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕೆಎಲ್ ರಾಹುಲ್, ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹಾಗೂ ವೆಂಕಟೇಶ್ ಪ್ರಸಾದ್ ಮೂವರು ಕನ್ನಡಿಗರೇ ಆಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್‌ನಲ್ಲಿ ಕೊನೆಯ ಓವರ್‌ನಲ್ಲಿ ಸೋತ Gujarat Titans

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

SCROLL FOR NEXT