ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಕೆಎಲ್ ರಾಹುಲ್ ತಾಳ್ಮೆಯ ಆಟ: ಲಂಕಾ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಜಯ, ಸರಣಿ ಕೈವಶ

ಅತಿಥೇಯ ಶ್ರಿಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯ ಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಕೋಲ್ಕತ್ತಾ: ಅತಿಥೇಯ ಶ್ರಿಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯ ಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ. 

ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾವನ್ನು ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಮಾರಕಬೌಲಿಂಗ್ ಮಾಡಿ ತಲಾ 3 ವಿಕೆಟ್ ಪಡೆಯುವ ಮೂಲಕ ಕೇವಲ 215 ರನ್ ಗಳಿಗೆ ಕಟ್ಟಿ ಹಾಕಲಾಯಿತು. 

ಲಂಕಾ ನೀಡಿದ 216 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. ರೋಹಿತ್ ಶರ್ಮಾ 17, ಶುಭ್ಮನ್ ಗಿಲ್ 21, ವಿರಾಟ್ ಕೊಹ್ಲಿ 4 ಮತ್ತು ಶ್ರೇಯಸ್ ಅಯ್ಯರ್ 28 ರನ್ ಗಳಿಗೆ ಆಲೌಟ್ ಆಗಿದ್ದು 86 ರನ್ ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಗಳು ಪತನಗೊಂಡಿತ್ತು. ಈ ವೇಳೆ ತಾಳ್ಮೆಯ ಆಟವಾಡಿದ ಕೆಎಲ್ ರಾಹುಲ್ ಅರ್ಧ ಶತಕ ಸಿಡಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. 

ಇನ್ನುಳಿದಂತೆ ಹಾರ್ದಿಕ್ ಪಾಂಡ್ಯ 36, ಅಕ್ಷರ್ ಪಟೇಲ್ 21 ಹಾಗೂ ಕುಲದೀಪ್ ಯಾದವ್ ಅಜೇಯ 10 ರನ್ ಬಾರಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ಲಹಿರು ಕುಮಾರ, ಚಮಿಕಾ ಕರುಣಾರತ್ನೆ ತಲಾ 2 ವಿಕೆಟ್ ಪಡೆದಿದ್ದಾರೆ.

ಆತಿಥೇಯ ಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-0 ಅಂತರದಿಂದ ಗೆಲುವು ಸಾಧಿಸಿ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇನ್ನು ಮೂರನೇ ಹಾಗೂ ಅಂತಿಮ ಪಂದ್ಯ ಜನವರಿ 15ರಂದು ತಿರುವನಂತಪುರಂದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT