ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಕೆಎಲ್ ರಾಹುಲ್ ತಾಳ್ಮೆಯ ಆಟ: ಲಂಕಾ ವಿರುದ್ಧ ಭಾರತಕ್ಕೆ 4 ವಿಕೆಟ್ ಗಳ ಜಯ, ಸರಣಿ ಕೈವಶ

ಅತಿಥೇಯ ಶ್ರಿಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯ ಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಕೋಲ್ಕತ್ತಾ: ಅತಿಥೇಯ ಶ್ರಿಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್ ಗಳಿಂದ ಜಯ ಗಳಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ. 

ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾವನ್ನು ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಮಾರಕಬೌಲಿಂಗ್ ಮಾಡಿ ತಲಾ 3 ವಿಕೆಟ್ ಪಡೆಯುವ ಮೂಲಕ ಕೇವಲ 215 ರನ್ ಗಳಿಗೆ ಕಟ್ಟಿ ಹಾಕಲಾಯಿತು. 

ಲಂಕಾ ನೀಡಿದ 216 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. ರೋಹಿತ್ ಶರ್ಮಾ 17, ಶುಭ್ಮನ್ ಗಿಲ್ 21, ವಿರಾಟ್ ಕೊಹ್ಲಿ 4 ಮತ್ತು ಶ್ರೇಯಸ್ ಅಯ್ಯರ್ 28 ರನ್ ಗಳಿಗೆ ಆಲೌಟ್ ಆಗಿದ್ದು 86 ರನ್ ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಗಳು ಪತನಗೊಂಡಿತ್ತು. ಈ ವೇಳೆ ತಾಳ್ಮೆಯ ಆಟವಾಡಿದ ಕೆಎಲ್ ರಾಹುಲ್ ಅರ್ಧ ಶತಕ ಸಿಡಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. 

ಇನ್ನುಳಿದಂತೆ ಹಾರ್ದಿಕ್ ಪಾಂಡ್ಯ 36, ಅಕ್ಷರ್ ಪಟೇಲ್ 21 ಹಾಗೂ ಕುಲದೀಪ್ ಯಾದವ್ ಅಜೇಯ 10 ರನ್ ಬಾರಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ಲಹಿರು ಕುಮಾರ, ಚಮಿಕಾ ಕರುಣಾರತ್ನೆ ತಲಾ 2 ವಿಕೆಟ್ ಪಡೆದಿದ್ದಾರೆ.

ಆತಿಥೇಯ ಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-0 ಅಂತರದಿಂದ ಗೆಲುವು ಸಾಧಿಸಿ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇನ್ನು ಮೂರನೇ ಹಾಗೂ ಅಂತಿಮ ಪಂದ್ಯ ಜನವರಿ 15ರಂದು ತಿರುವನಂತಪುರಂದಲ್ಲಿ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT