ರಾಹುಲ್ ದ್ರಾವಿಡ್ 
ಕ್ರಿಕೆಟ್

ಶ್ರೀಲಂಕಾ ಸರಣಿ ನಡುವೆಯೇ ಟೀಂ ಇಂಡಿಯಾ ತೊರೆದು ಬೆಂಗಳೂರಿಗೆ ದೌಡಾಯಿಸಿದ ಕೋಚ್ ರಾಹುಲ್ ದ್ರಾವಿಡ್!; 'ಜಾಮಿ'ಗೇನಾಯ್ತು?

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾ ತೊರೆದು ದಿಢೀರ್ ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಟೀಂ ಇಂಡಿಯಾ ತೊರೆದು ದಿಢೀರ್ ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಮೂಲಗಳ ಪ್ರಕಾರ ರಾಹುಲ್ ದ್ರಾವಿಡ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎನ್ನಲಾಗಿದೆ.  

ಮೂಲಗಳ ಪ್ರಕಾರ 2ನೇ ಏಕದಿನ ಪಂದ್ಯದ ವೇಳೆ ದ್ರಾವಿಡ್ ಅವರಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಾಲ್ ಕ್ರಿಕೆಟ್ ಮಂಡಳಿಯ ವೈದ್ಯರು ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದ್ರಾವಿಡ್ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಅವರು ಭಾನುವಾರ ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ವೈದ್ಯರನ್ನು ಭೇಟಿಯಾಗಿ ಕೆಲವು ಮುಂಜಾಗ್ರತಾ ಪರೀಕ್ಷೆಗಳನ್ನು ಮಾಡಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದ್ರಾವಿಡ್ ವಿಮಾನದಲ್ಲಿ ಕುಳಿತಿರುವ ಮತ್ತು ವಿಮಾನ ನಿಲ್ದಾಣದಲ್ಲಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಭಾನುವಾರದ ಪಂದ್ಯದ ವೇಳೆ ದ್ರಾವಿಡ್ ಅನುಪಸ್ಥಿತಿ
ಭಾನುವಾರ ತಿರುವನಂತಪುರದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ ಮತ್ತು ಸಹಾಯಕ ಸಿಬ್ಬಂದಿ ಇಂದು ಸಂಜೆ ಕೋಲ್ಕತ್ತದಿಂದ ತೆರಳಲಿದೆ. ಇದಕ್ಕೂ ಮುನ್ನವೇ ದ್ರಾವಿಡ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ, ಬೆಳಗಿನ ಜಾವದ ವಿಮಾನದಲ್ಲಿ ಕೋಲ್ಕತ್ತದಿಂದ ಬೆಂಗಳೂರಿಗೆ ತೆರಳಿದ್ದಾರೆ.

ಇದೇ ಜನವರಿ 11ಕ್ಕೆ ದ್ರಾವಿಡ್ ಅವರು 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡ 2–0 ಮುನ್ನಡೆ ಪಡೆಯುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ತಿರುವನಂತಪುರದ ಮೂರನೇ ಪಂದ್ಯ ಔಪಚಾರಿಕವಾಗಿ ಉಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NALSAR ವಿದ್ಯಾರ್ಥಿಗಳ ನಿಷೇಧ ಆದೇಶಕ್ಕೆ BCI ಅಧ್ಯಕ್ಷರ ಕ್ಷಮೆ!

ಪಾಕಿಸ್ತಾನ ಶೇ.4 ರಷ್ಟು ಹಿಂದೂಗಳನ್ನು ಸಹಿಸಿಕೊಳ್ತಿದೆ: ಪಾಕ್ ಅಧ್ಯಕ್ಷ 10% Zardari ಉದ್ಧಟತನದ ಹೇಳಿಕೆ

ಹಳದಿ ರೇಷ್ಮೆ ಧೋತಿ: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್ ಕೋಡ್

ತಂದೆ ಎಲ್ಲಿದ್ದಾರೆ ಅಂತ ತಾಯಿನ ಕೇಳಿ; ವಿಧಾನಸಭೆಯಲ್ಲಿ ಹುಡುಕಬೇಡಿ; CM Vijay ಬಗ್ಗೆ ಬಿಜೆಪಿ ಅಧ್ಯಕ್ಷರ ಹೇಳಿಕೆ ವಿವಾದಕ್ಕೆ ಗುರಿ!

‘ರಜಾಕರ್‌ಗಳಿಂದ ನಮ್ಮನ್ನು ರಕ್ಷಿಸಿದ್ದು RSS ಅಲ್ಲ, ಭಾರತೀಯ ಸೇನೆ’: BL ಸಂತೋಷ್ ಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!