ರಮೀಜ್ ರಾಜಾ 
ಕ್ರಿಕೆಟ್

ಪಾಕಿಸ್ತಾನ ಕ್ರಿಕೆಟ್ ಈ ಸ್ಥಿತಿಗೆ ಬಿಸಿಸಿಐನ 'ಬಿಜೆಪಿ ಮನಸ್ಥಿತಿ' ಕಾರಣ: ಪಿಸಿಬಿ ಮಾಜಿ ಅಧ್ಯಕ್ಷ ರಮೀಜ್ ರಾಜಾ

ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಇದೀಗ ಮತ್ತೊಮ್ಮೆ ರಮೀಜ್ ರಾಜಾ ಭಾರತ ಮತ್ತು ಬಿಸಿಸಿಐ ವಿರುದ್ಧ ಕಿಡಿಕಾರಿದ್ದಾರೆ.

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಇದೀಗ ಮತ್ತೊಮ್ಮೆ ರಮೀಜ್ ರಾಜಾ ಭಾರತ ಮತ್ತು ಬಿಸಿಸಿಐ ವಿರುದ್ಧ ಕಿಡಿಕಾರಿದ್ದಾರೆ.

ರಮೀಜ್ ರಾಜಾ ಅವರ ಈ ಹೇಳಿಕೆಗೆ ಇದೀಗ ಪಾಕಿಸ್ತಾನದಲ್ಲಿ ಅಲ್ಲ, ಭಾರತದಲ್ಲಿ ಸಂಚಲನ ಉಂಟಾಗಿದೆ. ಭಾರತವನ್ನು ಗುರಿಯಾಗಿಸಿಕೊಂಡು ರಾಜಾ, ಪಾಕಿಸ್ತಾನವನ್ನು ನಾಶಪಡಿಸುವಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ದೊಡ್ಡ ಕೈವಾಡವಿದೆ ಎಂದು ಹೇಳಿದ್ದಾರೆ. ಬಿಸಿಸಿಐ ಒಳಗೆ ಏನೇ ನಡೆದರೂ ಅದರ ಹಿಂದೆ ಬಿಜೆಪಿಯ ಮನಸ್ಥಿತಿ ಇದೆ ಎಂದು ಅವರು ಹೇಳಿದರು.

ಲಾಹೋರ್ ಸರ್ಕಾರಿ ಕಾಲೇಜು ವಿಶ್ವವಿದ್ಯಾಲಯದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ವೇಳೆ ರಾಜಾ ಈ ಹೇಳಿಕೆ ನೀಡಿದ್ದಾರೆ. ದುರದೃಷ್ಟವಶಾತ್ ಭಾರತದಲ್ಲಿ ಏನೇ ಆಗಲಿ, ಅದರ ಹಿಂದೆ ಅಲ್ಲಿನ ಬಿಜೆಪಿಯ ಮನಸ್ಥಿತಿಯೇ ಇದೆ ಎಂದರು. ಇನ್ನು PJL ಆಗಿರಲಿ ಅಥವಾ ಪಾಕಿಸ್ತಾನ್ ಮಹಿಳಾ ಲೀಗ್ ಆಗಿರಲಿ, ನಾವು ನಮ್ಮದೇ ಆದ ಹಣವನ್ನು ಸಂಪಾದಿಸುವ ಸ್ವತ್ತುಗಳನ್ನು ರಚಿಸಬಹುದು. ಅದು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಹಣವನ್ನು ನೀಡುತ್ತದೆ. ಇದರಿಂದ ನಮ್ಮನ್ನು ICC ನಿಧಿಯಿಂದ ದೂರವಿಡುವಂತೆ ಮಾಡುತ್ತದೆ ಎಂದು ಸಲಹೆ ನೀಡಿದ್ದರು.

ಮಾಜಿ ಪಿಸಿಬಿ ಅಧ್ಯಕ್ಷರು, 'ನಮ್ಮ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಏಕೆಂದರೆ ಹೆಚ್ಚಿನ ಐಸಿಸಿ ಸಂಪನ್ಮೂಲಗಳು ಭಾರತದಿಂದ ಸಿಗುತ್ತದೆ. ಇನ್ನು ಪಾಕಿಸ್ತಾನವನ್ನು ಕಡೆಗಣಿಸುವುದೇ ಭಾರತದ ಮನಸ್ಥಿತಿಯಾಗಿರುವುದರಿಂದ ನಾವು ಇಲ್ಲಿಯೂ ಇಲ್ಲ, ಅಲ್ಲಿಯೂ ಇರುವುದಿಲ್ಲ ಎಂದರು.

ಪಿಸಿಬಿ ಮಾಜಿ ಅಧ್ಯಕ್ಷ ರಮೀಜ್ ರಾಜಾ ಅವರ ಈ ಹೇಳಿಕೆಗೆ ಬಿಸಿಸಿಐ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು, ರಮೀಜ್ ರಾಜಾ ಹತಾಶರಾಗಿದ್ದಾರೆ. ಅವರು ಮಾತನಾಡುತ್ತಿರುವುದರಲ್ಲಿ ಯಾವುದೇ ತರ್ಕವಿಲ್ಲ. ಕ್ರಿಕೆಟ್ ಜೊತೆಗೆ ರಾಜಕೀಯ ಬೆರೆಸುವುದು ಸರಿಯಲ್ಲ. ಆದರೆ ಅವರು ಈ ಹಿಂದೆಯೂ ಹಲವು ಬಾರಿ ಇದನ್ನು ಮಾಡಿದ್ದಾರೆ. ಅವರ ಹೇಳಿಕೆಗೆ ನಾವು ಹೆಚ್ಚು ಗಮನ ಕೊಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT