ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ 
ಕ್ರಿಕೆಟ್

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಗೆ 44 ಲಕ್ಷ ರೂ. ವಂಚನೆ!

ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮುಂಬೈ: ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಜಮೀನು ಖರೀದಿಸುವ ನೆಪದಲ್ಲಿ ತನ್ನ ಸ್ನೇಹಿತನಿಂದಲೇ ವಂಚನೆಗೊಳಗಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ತನ್ನ ಮ್ಯಾನೇಜರ್ ಕೂಡಾ ಆಗಿದ್ದ ಸ್ನೇಹಿತನಿಂದ 44 ಲಕ್ಷ ರೂಪಾಯಿಯನ್ನು ಉಮೇಶ್ ಯಾದವ್ ಕಳೆದುಕೊಂಡಿದ್ದಾರೆ.

ಈ ಸಂಬಂಧ ಶೈಲೇಸ್ ಠಾಕ್ರೆ ವಿರುದ್ಧ ಉಮೇಶ್ ಯಾದವ್ ನೀಡಿದ ದೂರಿನ ವಂಚನೆ ದೂರಿನ ಆಧಾರದ ಮೇಲೆ  ಕೇಸ್ ದಾಖಲಿಸಿರುವುದಾಗಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆದರೆ, ಇನ್ನೂ ಯಾವುದೇ ಬಂಧನವಾಗಿಲ್ಲ. ಜುಲೈ 15, 2014 ರಂದು ಉಮೇಶ್ ಯಾದವ್ ಟೀಂ ಇಂಡಿಯಾ ಸದಸ್ಯರಾಗಿ ಆಯ್ಕೆಯಾದ ನಂತರ ನಿರುದ್ಯೋಗಿಯಾಗಿದ್ದ ತನ್ನ ಸ್ನೇಹಿತ ಠಾಕ್ರೆಯನ್ನು ಮ್ಯಾನೇಜರ್ ಆಗಿ ನೇಮಿಸಿಕೊಂಡಿದ್ದಾಗಿ ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಕಾಲಕ್ರಮೇಣ ಯಾದವ್ ವಿಶ್ವಾಸ ಗಳಿಸಿದ್ದು, ಉಮೇಶ್ ಯಾದವ್ ಅವರ ಎಲ್ಲಾ ಹಣಕಾಸಿನ ವ್ಯವಹಾರಗಳನ್ನು ನಿಭಾಯಿಸಲು ಪ್ರಾರಂಭಿಸಿದ್ದು, ಬ್ಯಾಂಕ್ ಖಾತೆ, ಆದಾಯ ತೆರಿಗೆ ಮತ್ತು ಇತರ ಹಣಕಾಸು ಕಾರ್ಯಗಳನ್ನು ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಉಮೇಶ್ ಯಾದವ್ ಅವರ ಎಲ್ಲ ವ್ಯವಹಾರ ನೋಡಿಕೊಳ್ಳುತ್ತಿದ್ದ ಶೈಲೇಶ್ ಠಾಕ್ರೆ ನಾಗ್ಪುರದಲ್ಲಿ ಒಂದು ಖಾಲಿ ಜಮೀನು ಮಾರಾಟಕ್ಕಿದ್ದು, 44 ಲಕ್ಷ ರೂ.ಗೆ ಸಿಗುತ್ತದೆ ಎಂದು ಉಮೇಶ್ ಯಾದವ್ ಅವರಿಗೆ ತಿಳಿಸಿದ್ದು, ಅವರ ಖಾತೆಗೆ ಹಣ ವರ್ಗಾಯಿಸಿಕೊಂಡಿದ್ದಾರೆ.

ನಂತರ ಶೈಲೇಶ್ ಠಾಕ್ರೆ ನಿವೇಶನವನ್ನು ತನ್ನ ಹೆಸರಿಗೆ ಮಾಡಿಕೊಂಡಿದ್ದಾರೆ. ಬಳಿಕ ನಿವೇಶನ ಹಿಂತಿರುಗಿಸಲು ನಿರಾಕರಿಸಿದ್ದಾರೆ. ಹೀಗಾಗಿ ಉಮೇಶ್ ಯಾದವ್ ಠಾಕ್ರೆ ವಿರುದ್ಧ ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT