ಭಾರತ ತಂಡ 
ಕ್ರಿಕೆಟ್

2ನೇ ಏಕದಿನ: ಭಾರತದ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ತತ್ತರ, 108 ರನ್ ಗಳಿಗೆ ಆಲೌಟ್!

ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳ ದಾಳಿಗೆ ನ್ಯೂಜಿಲೆಂಡ್ ತಂಡ ಸಂಪೂರ್ಣ ಜರ್ಜರಿತವಾಗಿದ್ದು ಪ್ರವಾಸಿ ತಂಡ 108 ರನ್‌ಗಳಿಗೆ ಆಲೌಟ್ ಆಗಿದೆ. 

ರಾಯ್ ಪುರ: ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳ ದಾಳಿಗೆ ನ್ಯೂಜಿಲೆಂಡ್ ತಂಡ ಸಂಪೂರ್ಣ ಜರ್ಜರಿತವಾಗಿದ್ದು ಪ್ರವಾಸಿ ತಂಡ 108 ರನ್‌ಗಳಿಗೆ ಆಲೌಟ್ ಆಗಿದೆ. 

ಮೊದಲ ಓವರ್‌ನಿಂದಲೇ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳ ಮೇಲೆ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದರು. ಅಂತಿಮವಾಗಿ ಇಡೀ ತಂಡವು 34.2 ಓವರ್‌ಗಳಲ್ಲಿ 108 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಭಾರತಕ್ಕೆ 109 ರನ್‌ಗಳ ಗುರಿ ಸಿಕ್ಕಿತು.

ಮೊಹಮ್ಮದ್ ಶಮಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದು. 6 ಓವರ್ ಗಳಲ್ಲಿ 18 ರನ್ ನೀಡಿ ಮೂರು ವಿಕೆಟ್ ಪಡೆದರು. ನ್ಯೂಜಿಲೆಂಡ್‌ಗೆ ಶಮಿ ಮೊದಲ ಹೊಡೆತ ನೀಡಿದರು. ಈ ಹಿನ್ನಡೆ ಬಳಿಕ ಕಿವೀಸ್ ತಂಡಕ್ಕೆ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಪಡೆದರು. ಅದೇ ಸಮಯದಲ್ಲಿ ಎಲ್ಲಾ ಮೂರು ಬೌಲರ್‌ಗಳಾದ ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಮತ್ತೊಂದೆಡೆ, ನ್ಯೂಜಿಲೆಂಡ್‌ನ ಬ್ಯಾಟಿಂಗ್ ಪಡೆ ಸ್ಥಿತಿ ತುಂಬಾ ಕೆಟ್ಟದಾಗಿತ್ತು. ಟಾಪ್-5 ಬ್ಯಾಟ್ಸ್‌ಮನ್‌ಗಳಲ್ಲಿ ಯಾರೂ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ. ನ್ಯೂಜಿಲೆಂಡ್ ಪರ ಗ್ಲೆನ್ ಫಿಲಿಪ್ಸ್ 36 ಅತಿ ಹೆಚ್ಚು ರನ್ ಗಳಿಸಿದ್ದಾರೆ.

ಭಾರತ ತಂಡ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್‌ಪುರದಲ್ಲಿ ನಡೆಯುತ್ತಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಳ್ಳಲಿದೆ.

ಈ ಸರಣಿಯ ಮೊದಲ ಏಕದಿನ ಪಂದ್ಯ ಹೈದರಾಬಾದ್‌ನಲ್ಲಿ ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 12 ರನ್‌ಗಳ ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಶುಭಮನ್ ಗಿಲ್ 208 ರನ್‌ಗಳ ದ್ವಿಶತಕ ಇನಿಂಗ್ಸ್‌ ಆಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT