ಟೀಂ ಇಂಡಿಯಾ 
ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ, ಸರಣಿ ಸಮಬಲ 

ಭಾರತ-ನ್ಯೂಜಿಲ್ಯಾಂಡ್ ನಡುವಿನ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ರೋಚಕ ಜಯ ದಾಖಲಿಸಿ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. 

ಲಖನೌ: ಭಾರತ-ನ್ಯೂಜಿಲ್ಯಾಂಡ್ ನಡುವಿನ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ ಗಳ ರೋಚಕ ಜಯ ದಾಖಲಿಸಿ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. 

ಟಾಸ್‌ ಗೆದ್ದು ಮೊದಲ ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ 8 ವಿಕೆಟ್‌ ನಷ್ಟಕ್ಕೆ 99 ರನ್‌ ಗಳಿಸಿ ಅಲ್ಪ ಮೊತ್ತದ ಟಾರ್ಗೆಟ್ ನೀಡಿತ್ತು.  ಗುರಿ ಬೆನ್ನಟ್ಟಿದ ಭಾರತ ಇನ್ನೂ ಒಂದು ಎಸೆತ ಇರುವಂತೆಯೇ ನ್ಯೂಜಿಲೆಂಡ್‌ ವಿರುದ್ಧ ತಿಣುಕಾಡಿ ರೋಚಕ 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಮೂರು T20 ಪಂದ್ಯಗಳ ಸರಣಿ ಭಾರತ 1-1 ಅಂತದಿಂದ ಸಮಬಲ ಸಾಧಿಸಿದೆ.   

ರೋಚಕ ಪಂದ್ಯದಲ್ಲಿ 18 ಎಸೆತಗಳಲ್ಲಿ ಭಾರತಕ್ಕೆ 18 ರನ್ ಗಳ ಅಗತ್ಯವಿತ್ತು. 18ನೇ ಓವರ್‌ನಲ್ಲಿ ಭಾರತ 5 ರನ್‌ ಗಳಿಸಿದರೆ, ಕೊನೆಯ ಓವರ್‌ನಲ್ಲಿ 6 ರನ್‌ ಅಗತ್ಯವಿತ್ತು.

ಕೊನೆಯ ಓವರ್ ನ ಮೂರನೇ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಕ್ಯಾಚ್ ಇತ್ತು ಔಟ್ ಆಗುವ ಸಾಧ್ಯತೆ ಇತ್ತು. ಆದರೆ ಕ್ಯಾಚ್ ಹಿಡಿಯುವಲ್ಲಿ ಟಿಕ್ನರ್ ವಿಫಲರಾದರು. ಒಂದು ಎಸೆತ ಬಾಕಿ ಇರುವಾಗ, ಸೂರ್ಯಕುಮಾರ್ ಬೌಂಡರಿ ದಾಖಲಿಸಿ ತಂಡ ಜಯಗಳಿಸಲು ಕಾರಣರಾದರು. 

ಈ ಪಂದ್ಯದಲ್ಲಿ ಭಾರತದ ಪರ ಒಂದೂ ಸಿಕ್ಸ್ ದಾಖಲಾಗದೇ ಇರುವುದು ವಿಶೇಷವೆನಿಸಿದೆ. ಅರ್ಶ್‌ದೀಪ್‌ ಸಿಂಗ್ 2 ವಿಕೆಟ್‌ ಪಡೆದರೆ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಹಲ್‌, ದೀಪಕ್‌ ಹೂಡಾ, ಕುಲದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT