ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡ 
ಕ್ರಿಕೆಟ್

ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 5 ಕೋಟಿ ರೂ ಬಹುಮಾನ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇಡೀ ತಂಡಕ್ಕೆ 5 ಕೋಟಿ ರೂ ಬಹುಮಾನ ಘೋಷಣೆ ಮಾಡಿದೆ.

ನವದೆಹಲಿ: ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇಡೀ ತಂಡಕ್ಕೆ 5 ಕೋಟಿ ರೂ ಬಹುಮಾನ ಘೋಷಣೆ ಮಾಡಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶೆಫಾಲಿ ವರ್ಮಾ ನೇತೃತ್ವದ ಟಿ20 ತಂಡ 7 ವಿಕೆಟ್ ಅಂತರದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಚೊಚ್ಚಲ ಮಹಿಳೆಯರ ಅಂಡರ್ 19 ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದಿದೆ. ಪ್ರಶಸ್ತಿ ಗೆದ್ದ ಭಾರತ ಮಹಿಳಾ ಯುವ ತಂಡವನ್ನು ಬಿಸಿಸಿಐ ಭರ್ಜರಿಯಾಗಿಯೇ ಅಭಿನಂದಿಸಿದ್ದು, ಇಡೀ ತಂಡಕ್ಕೆ 5 ಕೋಟಿ ರೂ ಬಹುಮಾನ ಘೋಷಣೆ ಮಾಡಿದೆ.

ಈ ಬಗ್ಗೆ ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸರಣಿ ಟ್ವೀಟ್ ಮಾಡಿದ್ದು, 'ಭಾರತದಲ್ಲಿ ಮಹಿಳಾ ಕ್ರಿಕೆಟ್ ಏರುಗತಿಯಲ್ಲಿದೆ.. ವಿಶ್ವಕಪ್ ವಿಜಯೋತ್ಸವವು ಮಹಿಳಾ ಕ್ರಿಕೆಟ್‌ನ ಸ್ಥಾನಮಾನವನ್ನು ಹಲವಾರು ಹಂತಗಳಲ್ಲಿ ಏರಿಸಿದೆ. ಪ್ರಶಸ್ತಿ ಗೆದ್ದ ತಂಡಕ್ಕೆ ಬಹುಮಾನದ ಮೊತ್ತವಾಗಿ ಇಡೀ ತಂಡ ಮತ್ತು ಸಹಾಯಕ ಸಿಬ್ಬಂದಿಗೆ 5 ಕೋಟಿ ರೂಪಾಯಿಯನ್ನು ಘೋಷಿಸಲು ನನಗೆ ಸಂತೋಷವಾಗಿದೆ. ಇದು ಖಂಡಿತವಾಗಿಯೂ ಭಾರತ ಮಹಿಳಾ ಕ್ರಿಕೆಟ್ ನ ಮೈಲುಗಲ್ಲಿನ ವರ್ಷವಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಮತ್ತೊಂದು ಟ್ವೀಟ್ ನಲ್ಲಿ ನಾನು ನಾಯಕಿ ಶೆಫಾಲಿ ವರ್ಮಾ ಮತ್ತು ಅವರ ವಿಜಯಶಾಲಿ ತಂಡವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೆಬ್ರವರಿ 1 ರಂದು ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಮೂರನೇ T20I ಪಂದ್ಯವನ್ನು ವೀಕ್ಷಿಸಲು ಆಹ್ವಾನಿಸುತ್ತೇನೆ. ಈ ಬಹುದೊಡ್ಡ ಸಾಧನೆಯು ಖಂಡಿತವಾಗಿಯೂ ಸಂಭ್ರಮಾಚರಣೆಗೆ ಕರೆ ನೀಡುತ್ತದೆ. U19T20WorldCup ಗೆದ್ದ ಭಾರತ U19 ತಂಡಕ್ಕೆ ಅಭಿನಂದನೆಗಳು. ಇದು ನಮ್ಮ ಯುವ ಕ್ರಿಕೆಟಿಗರು ದೇಶವನ್ನು ಹೆಮ್ಮೆ ಪಡುವಂತೆ ಮಾಡಿರುವ ಅದ್ಭುತ ಸಾಧನೆಯಾಗಿದೆ. ಯುವ ಆಟಗಾರರು ದೊಡ್ಡ ಸಂದರ್ಭದಿಂದ ವಿಚಲಿತರಾಗಲಿಲ್ಲ ಎಂಬುದು ಅವರ ಉಕ್ಕಿನ ಪಾತ್ರಗಳು ಮತ್ತು ಮನೋಧರ್ಮದ ಬಗ್ಗೆ ಪರಿಮಾಣವನ್ನು ಹೇಳುತ್ತದೆ ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT