ಅಲಂಗೀರ್ ತರೀನ್ 
ಕ್ರಿಕೆಟ್

PSL ಫ್ರಾಂಚೈಸಿ ತಂಡದ ಮಾಲೀಕ ಅಲಂಗೀರ್ ತರೀನ್ ಆತ್ಮಹತ್ಯೆ: ಪಾಕ್ ಕ್ರಿಕೆಟ್‌ನಲ್ಲಿ ಆತಂಕ!

ಪಾಕಿಸ್ತಾನ್ ಸೂಪರ್ ಲೀಗ್(ಪಿಎಸ್‌ಎಲ್) ಫ್ರಾಂಚೈಸಿ ಮುಲ್ತಾನ್ ಸುಲ್ತಾನ್ಸ್‌ನ ಮಾಲೀಕ ಅಲಂಗೀರ್ ತರೀನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಇಸ್ಲಾಮಾಬಾದ್: ಪಾಕಿಸ್ತಾನ್ ಸೂಪರ್ ಲೀಗ್(ಪಿಎಸ್‌ಎಲ್) ಫ್ರಾಂಚೈಸಿ ಮುಲ್ತಾನ್ ಸುಲ್ತಾನ್ಸ್‌ನ ಮಾಲೀಕ ಅಲಂಗೀರ್ ತರೀನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಅಲಂಗೀರ್ ಮೃತದೇಹ ಲಾಹೋರ್‌ನ ಗುಲ್ಬರ್ಗ್ ಪ್ರದೇಶದಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಅವರ ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಮುಲ್ತಾನ್ ಸುಲ್ತಾನ್ಸ್ ಸಿಇಒ ಹೈದರ್ ಅಜರ್ ಅವರೇ ಈ ಸುದ್ದಿಯನ್ನು ದೃಢಪಡಿಸಿದ್ದು ತರೀನ್ ಅವರ ಕುಟುಂಬಕ್ಕೆ ತೀವ್ರ ದುಃಖ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.

ಹೆಸರಾಂತ ಯೇಲ್ ವಿಶ್ವವಿದ್ಯಾನಿಲಯದ ಹಳೆಯ ವಿದ್ಯಾರ್ಥಿ 63 ವರ್ಷದ ಅಲಂಗೀರ್ ಅವರು ಪಾಕಿಸ್ತಾನದ ದಕ್ಷಿಣ ಪಂಜಾಬ್‌ನಲ್ಲಿ ಪ್ರಮುಖ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ದೇಶದ ಅತಿದೊಡ್ಡ ನೀರು ಶುದ್ಧೀಕರಣ ಘಟಕಗಳಲ್ಲಿ ಒಂದನ್ನು ನಿರ್ವಹಿಸುತ್ತಿದ್ದರು. ಅವರು ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಮುಲ್ತಾನ್ ಸುಲ್ತಾನ್ಸ್ ಹೆಸರಿನ ಫ್ರಾಂಚೈಸಿ ಹುಟ್ಟುಹಾಕಿದ್ದರು. 2021ರಲ್ಲಿ ಮುಲ್ತಾನ್ ಸುಲ್ತಾನ್ ಫೈನಲ್‌ನಲ್ಲಿ ಪೇಶಾವರ್ ಝಲ್ಮಿಯನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ PSL ಪ್ರಶಸ್ತಿಯನ್ನು ಗೆದ್ದಿತ್ತು.

It is with deep sadness that we share the news of the passing of our beloved team owner, Alamgir Khan Tareen.

Our thoughts and prayers are with Mr. Tareen’s family. We request you all to kindly respect his family’s privacy.

May his soul rest in… pic.twitter.com/aISUQtAqI5

ಈ ಕಷ್ಟದ ಸಮಯದಲ್ಲಿ ನಾವು ಅಲಂಗೀರ್ ತರೀನ್ ಅವರ ಕುಟುಂಬ ಮತ್ತು ಮುಲ್ತಾನ್ ಸುಲ್ತಾನರೊಂದಿಗೆ ಒಟ್ಟಾಗಿ ನಿಲ್ಲುತ್ತೇವೆ ಎಂದು ಫ್ರಾಂಚೈಸ್ ಹೇಳಿಕೆಯಲ್ಲಿ ತಿಳಿಸಿದೆ. ಮುಲ್ತಾನ್ ಸುಲ್ತಾನ್ಸ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ಅಲಂಗೀರ್ ಕ್ರೀಡಾ ಪ್ರೇಮಿಯಾಗಿದ್ದು, ಅವರು ಮಹತ್ವಾಕಾಂಕ್ಷಿ ಕ್ರೀಡಾಪಟುಗಳಿಗೆ ವೇದಿಕೆಯನ್ನು ಸ್ಥಾಪಿಸಲು ಮತ್ತು ಅವರ ಕೌಶಲ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸಾಧ್ಯವಾದಷ್ಟು ಉತ್ತಮ ಸಂಪನ್ಮೂಲಗಳನ್ನು ಒದಗಿಸಲು ಕೆಲಸ ಮಾಡಲು ಬಯಸಿದ್ದರು.

ಕ್ರಿಕೆಟಿಗರು ಮತ್ತು ಫ್ರಾಂಚೈಸಿಗಳ ಸಂತಾಪ
ಫ್ರಾಂಚೈಸಿ ಸಿಇಒ ಹೈದರ್ ಅಜರ್, 'ಅಲಂಗೀರ್ ತರೀನ್ ನಮ್ಮ ತಂಡದ ಮೌಲ್ಯಯುತ ಸದಸ್ಯ ಮತ್ತು ಗೌರವಾನ್ವಿತ ವ್ಯಕ್ತಿ. ಅವರ ಹಠಾತ್ ಮತ್ತು ಅಕಾಲಿಕ ನಿಧನದಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಈ ನಂಬಲಾಗದಷ್ಟು ಕಷ್ಟದ ಸಮಯದಲ್ಲಿ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇರುತ್ತವೆ. ಪಿಎಸ್ಎಲ್ ಫ್ರಾಂಚೈಸಿ, ಲಾಹೋರ್ ಖಲಂದರ್ಸ್ ಕೂಡ ಆಘಾತಕಾರಿ ಸುದ್ದಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ತರೀನ್ ಅವರ ನಿಧನದ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT