ತಮೀಮ್ ಇಕ್ಬಾಲ್ 
ಕ್ರಿಕೆಟ್

ವಿಶ್ವಕಪ್‌ಗೆ 3 ತಿಂಗಳ ಮೊದಲೇ ಬಾಂಗ್ಲಾಗೆ ಆಘಾತ: ಕಣ್ಣೀರಿಡುತ್ತಾ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಏಕದಿನ ನಾಯಕ!

ಬಾಂಗ್ಲಾದೇಶದ ODI ನಾಯಕ ತಮೀಮ್ ಇಕ್ಬಾಲ್ 2023ರ ವಿಶ್ವಕಪ್‌ಗೆ ಮೂರು ತಿಂಗಳ ಮೊದಲು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಮೂಲಕ ತಮೀಮ್ ಇಕ್ಬಾಲ್ ಅವರ 16 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಂಡಿದೆ. 

ಢಾಕಾ: ಬಾಂಗ್ಲಾದೇಶದ ODI ನಾಯಕ ತಮೀಮ್ ಇಕ್ಬಾಲ್ 2023ರ ವಿಶ್ವಕಪ್‌ಗೆ ಮೂರು ತಿಂಗಳ ಮೊದಲು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಮೂಲಕ ತಮೀಮ್ ಇಕ್ಬಾಲ್ ಅವರ 16 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಂಡಿದೆ. 

ಚಟ್ಟೋಗ್ರಾಮ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಮೀಮ್ ಇಕ್ಬಾಲ್ ನಿವೃತ್ತಿ ಘೋಷಿಸಿದರು. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ತಮೀಮ್ ಇಕ್ಬಾಲ್ ಬದಲಿಗೆ ಏಕದಿನ ನಾಯಕನ ಹೆಸರನ್ನು ಪ್ರಕಟಿಸಿಲ್ಲ. ಶಕೀಬ್ ಅಲ್ ಹಸನ್ ಬಾಂಗ್ಲಾದೇಶದ ಟಿ20 ತಂಡದ ನಾಯಕರಾಗಿದ್ದರೆ, ಲಿಟನ್ ದಾಸ್ ಟೆಸ್ಟ್‌ ತಂಡದ ಉಸ್ತುವಾರಿ ವಹಿಸಿದ್ದಾರೆ.

34 ವರ್ಷದ ತಮೀಮ್ ಇಕ್ಬಾಲ್ ಕಳೆದ ವರ್ಷ ಇದೇ ಸಮಯದಲ್ಲಿ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು. ಇಕ್ಬಾಲ್ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಏಪ್ರಿಲ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಆಡಿದ್ದರು. ತಮೀಮ್ ಇಕ್ಬಾಲ್ 2007ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 2007ರ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶದ ಐತಿಹಾಸಿಕ ವಿಜಯದಲ್ಲಿ ಅವರು ಅರ್ಧಶತಕವನ್ನು ಗಳಿಸಿದರು.

ತಮೀಮ್ ಇಕ್ಬಾಲ್ ಬಾಂಗ್ಲಾದೇಶ ಪರ ಏಕದಿನದಲ್ಲಿ ಅತಿ ಹೆಚ್ಚು ರನ್ (8313) ಮತ್ತು ಶತಕ (14) ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರ ಸಕ್ರಿಯ ಕ್ರಿಕೆಟಿಗರಲ್ಲಿ ಮೂರನೇ ಅತಿ ಹೆಚ್ಚು ODI ರನ್ ಗಳಿಸಿದ ಆಟಗಾರರಾಗಿದ್ದಾರೆ. ಅದೇ ಸಮಯದಲ್ಲಿ ಟೆಸ್ಟ್‌ಗಳಲ್ಲಿ ತಮೀಮ್ ಇಕ್ಬಾಲ್ 70 ಪಂದ್ಯಗಳಲ್ಲಿ 10 ಶತಕಗಳು ಸೇರಿದಂತೆ 38.89 ಸರಾಸರಿಯಲ್ಲಿ 5134 ರನ್ ಗಳಿಸಿದರು. ಅವರು ಬಾಂಗ್ಲಾದೇಶ ಪರ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಎರಡನೇ ಆಟಗಾರರಾಗಿದ್ದಾರೆ.

ODI ನಾಯಕತ್ವದಲ್ಲಿ ತಮೀಮ್ ಇಕ್ಬಾಲ್ ಮಶ್ರಫೆ ಮೊರ್ತಾಜಾಗಿಂತ ಉತ್ತಮ ಗೆಲುವಿನ ಶೇಕಡಾವಾರು ಹೊಂದಿದ್ದಾರೆ. ತಮೀಮ್ 37 ODIಗಳಲ್ಲಿ ಬಾಂಗ್ಲಾದೇಶದ ನಾಯಕರಾಗಿದ್ದರು. ಅದರಲ್ಲಿ ಬಾಂಗ್ಲಾದೇಶವು 21 ಪಂದ್ಯಗಳನ್ನು ಗೆದ್ದಿದೆ. ತಮೀಮ್ ಇಕ್ಬಾಲ್ ನೇತೃತ್ವದ ಬಾಂಗ್ಲಾದೇಶ ODI ಸೂಪರ್ ಲೀಗ್‌ನಲ್ಲಿ ಮೂರನೇ ಸ್ಥಾನಕ್ಕೆ ಮತ್ತು ವಿಶ್ವಕಪ್‌ಗೆ ನೇರ ಅರ್ಹತೆ ಗಳಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT