ಟೀಂ ಇಂಡಿಯಾಗೆ ಜಯ 
ಕ್ರಿಕೆಟ್

ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್ ಮತ್ತು 141 ರನ್ ಭರ್ಜರಿ ಜಯ

ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿಯಾಗಿ ಜಯಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಡೊಮೆನಿಕಾ: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿಯಾಗಿ ಜಯಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 271 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ ತಂಡ 2ನೇ ಇನ್ನಿಂಗ್ಸ್ ನಲ್ಲೂ ಆರ್ ಅಶ್ವಿನ್ ಸ್ಪಿನ್ ದಾಳಿಗೆ ತತ್ತರಿಸಿ ಕೇವಲ 130 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ  ಇನ್ನಿಂಗ್ಸ್ ಮತ್ತು 141 ರನ್ ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಎರಡು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಭಾರತ ತಂಡ 1–0 ಅಂತರದ ಮುನ್ನಡೆ ಸಾಧಿಸಿದೆ.

ಪದಾರ್ಪಣೆ ಪಂದ್ಯವಾಡಿದ ಯಶಸ್ವಿ ಜೈಸ್ವಾಲ್ (171), ನಾಯಕ ರೋಹಿತ್ ಶರ್ಮಾ (103) ಶತಕ ಹಾಗೂ ಅನುಭವಿ ವಿರಾಟ್‌ ಕೊಹ್ಲಿ 76 ರನ್‌ ಕಲೆಹಾಕಿ ಟೀಂ ಇಂಡಿಯಾ ಇನಿಂಗ್ಸ್‌ಗೆ ಬಲ ತುಂಬಿದ್ದರು.

ಆರ್‌.ಅಶ್ವಿನ್‌ ಕೈಚಳಕ
270 ರನ್ ಹಿನ್ನಡೆಯೊಂದಿಗೆ ಕಣಕ್ಕಿಳಿದ ವಿಂಡೀಸ್ ತಂಡದ ಬ್ಯಾಟಿಂಗ್‌, ಆರ್‌.ಅಶ್ವಿನ್‌ ಕೈಚಳಕದ ಎದುರು ಎರಡನೇ ಇನಿಂಗ್ಸ್‌ನಲ್ಲೂ ಸುಧಾರಿಸಲಿಲ್ಲ. ಸ್ಪಿನ್‌ ಬಲೆಗೆ ಬಿದ್ದ ಆತಿಥೇಯ ತಂಡದ ಬ್ಯಾಟರ್‌ಗಳು ರನ್‌ ಗಳಿಸಲು ಪರದಾಡಿದರು. ಅಲಿಕ್ ಅತಾಂಜೆ 27 ರನ್‌ ಗಳಿಸಿದ್ದೇ, ಈ ತಂಡದ ಪರ ವೈಯಕ್ತಿಕ ಗರಿಷ್ಠ ಮೊತ್ತ ಎನಿಸಿತು. ಹೀಗಾಗಿ, ವಿಂಡೀಸ್‌ ಬಳಗ 130 ರನ್ ಗಳಿಗೆ ಸರ್ವ ಪತನ ಕಂಡು, ಹೀನಾಯ ಸೋಲೊಪ್ಪಿಕೊಳ್ಳಬೇಕಾಯಿತು.

ಭಾರತ ಪರ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದಿದ್ದ ಅಶ್ವಿನ್, ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ ಕಬಳಿಸಿದರು. ಯಶಸ್ವಿ ಜೈಸ್ವಾಲ್ ಪಂದ್ಯಶ್ರೇಷ್ಠ ಎನಿಸಿಕೊಂಡರು.

ಎರಡನೇ ಪಂದ್ಯ ಟ್ರಿನಿಡಾಡ್‌ನ ಕ್ವೀನ್ಸ್‌ ಪಾರ್ಕ್‌ನಲ್ಲಿ ಜುಲೈ 20ರಿಂದ ಜುಲೈ 24ರ ವರೆಗೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT