ಬೌಲರ್ ಮೊಹಮ್ಮದ್ ಸಿರಾಜ್ ಅಭಿನಂದಿಸುತ್ತಿರುವ ಆಸ್ಟ್ರೇಲಿಯಾ ಆಟಗಾರರು 
ಕ್ರಿಕೆಟ್

ಐಸಿಸಿ ವಿಶ್ವ ಟೆಸ್ಟ್  ಚಾಂಪಿಯನ್ ಶಿಪ್ ಫೈನಲ್: ಆಸ್ಟ್ರೇಲಿಯಾಕ್ಕೆ 296 ರನ್ ಗಳ ಮುನ್ನಡೆ

ಲಂಡನ್‌ ನ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೂರನೇ ದಿನವಾದ ಶುಕ್ರವಾರ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 123 ರನ್ ಗಳಿಸುವ ಮೂಲಕ 296 ರನ್ ಗಳಿಂದ ಮುನ್ನಡೆ ಪಡೆದುಕೊಂಡಿದೆ.

ಲಂಡನ್ : ಲಂಡನ್‌ ನ ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಮೂರನೇ ದಿನವಾದ ಶುಕ್ರವಾರ ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 123 ರನ್ ಗಳಿಸುವ ಮೂಲಕ 296 ರನ್ ಗಳಿಂದ ಮುನ್ನಡೆ ಪಡೆದುಕೊಂಡಿದೆ.

ಪಂದ್ಯ ಮುಕ್ತಾಯದ ವೇಳೆಗೆ, ಮಾರ್ನಸ್ ಲ್ಯಾಬುಸ್ಚಾಗ್ನೆ ಮತ್ತು ಕ್ಯಾಮರೂನ್ ಗ್ರೀನ್ ಕ್ರಮವಾಗಿ 41 ಮತ್ತು 7 ರನ್ ಗಳಿಸುವ ಮೂಲಕ ಶನಿವಾರದ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇದಕ್ಕೂ ಮುನ್ನಾ ಬ್ಯಾಟಿಂಗ್ ಪುನರ್ ಆರಂಭಿಸಿದ ಭಾರತ  ಕೆಎಸ್ ಭಾರತ್ ಅವರನ್ನು ಬೇಗನೆ ಕಳೆದುಕೊಂಡಿತು. ಆದರೆ ಅಜಿಂಕ್ಯ ರಹಾನೆ (89) ಮತ್ತು ಶಾರ್ದೂಲ್ ಠಾಕೂರ್ (51) ಏಳನೇ ವಿಕೆಟ್‌ಗೆ 109 ರನ್‌ಗಳನ್ನು ಸೇರಿಸುವ ಮೂಲಕ ತಮ್ಮ ತಂಡವನ್ನು ಫಾಲೋ-ಆನ್ ಭೀತಿಯಿಂದ ತಪ್ಪಿಸಲು ಸಹಾಯ ಮಾಡಿದರು.

ಆದರೆ, ಭೋಜನ ವಿರಾಮದ ನಂತರ ಭಾರತ ಉಳಿದ ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡು 69.4 ಓವರ್‌ಗಳಲ್ಲಿ 296 ರನ್ ಗಳಿಸಿತು. ಆಸ್ಟ್ರೇಲಿಯಾ ಪರ ನಾಯಕ ಪ್ಯಾಟ್ ಕಮ್ಮಿನ್ಸ್ ಮೂರು ವಿಕೆಟುಗಳನ್ನು ಕಬಳಿಸಿದರೆ, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್ ಮತ್ತು ಕ್ಯಾಮರೂನ್ ಗ್ರೀನ್ ತಲಾ ಎರಡು ವಿಕೆಟ್ ಪಡೆದರು.

ಸಂಕ್ಷಿಪ್ತ ಅಂಕಗಳು: ಆಸ್ಟ್ರೇಲಿಯಾ:  ಮೊದಲ ಇನ್ನಿಂಗ್ಸ್ 469, ಎರಡನೇ ಇನ್ನಿಂಗ್ಸ್ : 123/4

ಭಾರತ ಮೊದಲ ಇನಿಂಗ್ಸ್: 69.4 ಓವರ್‌ಗಳಲ್ಲಿ 296 (ಅಜಿಂಕ್ಯ ರಹಾನೆ 89, ಶಾರ್ದೂಲ್ ಠಾಕೂರ್ 51, ರವೀಂದ್ರ ಜಡೇಜಾ 48; ಪ್ಯಾಟ್ ಕಮಿನ್ಸ್ 3/83).
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT