ಕ್ರಿಕೆಟ್ 
ಕ್ರಿಕೆಟ್

WTC Final: ಗಾಯದ ಮೇಲೆ ಬರೆ; ಟೀಂ ಇಂಡಿಯಾ ಸ್ಟಾರ್ ಆಟಗಾರನಿಗೆ ಐಸಿಸಿ ದುಬಾರಿ ದಂಡ!

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಸೋಲಿನ ಹತಾಶೆಯಲ್ಲಿರುವ ಟೀಂ ಇಂಡಿಯಾಗೆ ಐಸಿಸಿ ಗಾಯದ ಮೇಲೆ ಬರೆ ಎಳೆದಿದ್ದು, ತಂಡದ ಸ್ಟಾರ್ ಆಟಗಾರನಿಗೆ ದುಬಾರಿ ದಂಡ ಹೇರಿದೆ.

ನವದೆಹಲಿ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಸೋಲಿನ ಹತಾಶೆಯಲ್ಲಿರುವ ಟೀಂ ಇಂಡಿಯಾಗೆ ಐಸಿಸಿ ಗಾಯದ ಮೇಲೆ ಬರೆ ಎಳೆದಿದ್ದು, ತಂಡದ ಸ್ಟಾರ್ ಆಟಗಾರನಿಗೆ ದುಬಾರಿ ದಂಡ ಹೇರಿದೆ.

ಹೌದು.. ಓವಲ್‌ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ದಂಡ ಹೇರಿದೆ. ಆಸ್ಟ್ರೇಲಿಯಾ ಮತ್ತು ಭಾರತ ಎರಡೂ ತಂಡಳಿಗೆ ದಂಡ ಹೇರಲಾಗಿದ್ದು, ಈ ಪೈಕಿ ಭಾರತಕ್ಕೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ಮತ್ತು ಆಸ್ಟ್ರೇಲಿಯಾ ತಂಡಕ್ಕೆ ಶೇ.80ರಷ್ಟು ದಂಡ ಹೇರಲಾಗಿದೆ.

ಐಸಿಸಿ ನಿಯಮಗಳ ಪ್ರಕಾರ ಭಾರತ ಸರಾಸರಿ ಐದು ಓವರ್ ಗಳ ಕೊರತೆ ಎದುರಿಸಿದ್ದು, ಆಸ್ಟ್ರೇಲಿಯಾ ತಂಡ 4 ಓವರ್ ಗಳ ಕೊರತೆ ಎದುರಿಸಿತ್ತು. ಹೀಗಾಗಿ ಆಟಗಾರರು ಮತ್ತು ಆಟಗಾರರ ಸಹಾಯಕ ಸಿಬ್ಬಂದಿಗಳಿಗೆ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ವಿಫಲವಾದ ಪ್ರತಿ ಓವರ್‌ಗೆ ಆಟಗಾರರಿಗೆ ಅವರ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ.

ಗಿಲ್ ಗೆ ಎಚ್ಚರಿಕೆಯೊಂದಿಗೆ ದಂಡ
ಇನ್ನು ಟೆಸ್ಟ್‌ನ ನಾಲ್ಕನೇ ದಿನದಂದು ಗಿಲ್ ಔಟ್ ಆದ ಬಳಿಕ ಅಂಪೈರ್ ಗಳ ತೀರ್ಪಿಗೆ ಮೈದಾನದಲ್ಲೇ ಅಸಮಾಧಾನ ವ್ಯಕ್ತಪಡಿಸಿದ ಗಿಲ್ ಗೂ ಐಸಿಸಿ ಎಚ್ಚರಿಕೆ ನೀಡಿದ್ದು, ಗಿಲ್ ಆರ್ಟಿಕಲ್ 2.7 ಅನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಅವರಿಗೂ ಪಂದ್ಯದ ಸಂಭಾವನೆಯ ಶೇ.115% ದಂಡ ವಿಧಿಸಲಾಗಿದೆ. ದಂಡದ ರೂಪವಾಗಿ ಗಿಲ್ ಇದೀಗ ತನ್ನ ಸಂಭಾವನೆಯ ಶೇ.115ರಷ್ಟು ಹಣವನ್ನು ಐಸಿಸಿಗೆ ನೀಡಬೇಕಿದೆ.

ಇನ್ನು ತಾವು ವಿವಾದಾಸ್ಪದ ರೀತಿಯಲ್ಲಿ ಔಟಾದ ಬಳಿಕ ಮೈದಾನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.  
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT