ಏಷ್ಯಾಕಪ್ 2023 
ಕ್ರಿಕೆಟ್

ಏಷ್ಯಾ ಕಪ್ 2023: ಹೈಬ್ರಿಡ್ ಮಾಡೆಲ್ ವೇಳಾಪಟ್ಟಿ ಪ್ರಕಟ; ಪಾಕ್ ನಲ್ಲಿ 4, ಲಂಕಾ ನೆಲದಲ್ಲಿ 9 ಪಂದ್ಯ ಆಯೋಜನೆ

ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಕೊನೆಗೂ ಅಂತಿಮವಾಗಿದ್ದು, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ  ಹೈಬ್ರಿಡ್ ಮಾದರಿ ವೇಳಾಪಟ್ಟಿ ಪ್ರಕಟ ಮಾಡಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಏಷ್ಯಾಕಪ್ 2023 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಕೊನೆಗೂ ಅಂತಿಮವಾಗಿದ್ದು, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ ಹೈಬ್ರಿಡ್ ಮಾದರಿ ವೇಳಾಪಟ್ಟಿ ಪ್ರಕಟ ಮಾಡಿದೆ.

ಟೂರ್ನಿಯ ಒಟ್ಟು 13 ಪಂದ್ಯಗಳ ಪೈಕಿ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಬಾಕಿ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ತಂಡಗಳು ಟ್ರೋಫಿಗಾಗಿ ಸೆಣಸಾಡಲಿದ್ದು, ಆಗಸ್ಟ್ 31 ರಿಂದ ಸೆಪ್ಟೆಂಬರ್ 17, 2023 ರವರೆಗೆ ಈ 13 ರೋಚಕ ODI ಪಂದ್ಯಗಳು ನಡೆಯಲಿವೆ.  

ಟೂರ್ನಿ ಒಟ್ಟು 2 ಗುಂಪುಗಳಲ್ಲಿ ಟೂರ್ನಿ ಆಯೋಜನೆ ಮಾಡಲಾಗಿದ್ದು, ಪ್ರತಿ ಗುಂಪಿನಿಂದ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆಯುತ್ತವೆ. ಸೂಪರ್ ಫೋರ್ ಹಂತದಿಂದ ಅಗ್ರ ಎರಡು ತಂಡಗಳು ನಂತರ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಎಸಿಸಿ, "2023 ರ ಏಷ್ಯಾ ಕಪ್ 2023 ರ ಸೆಪ್ಟೆಂಬರ್ 31 ರಿಂದ 17 ರವರೆಗೆ ನಡೆಯಲಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳದ ಗಣ್ಯ ತಂಡಗಳು ಒಟ್ಟು 13 ರೋಚಕ ODI ಪಂದ್ಯಗಳಲ್ಲಿ ಸ್ಪರ್ಧಿಸಲಿವೆ. ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುವುದು, ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಉಳಿದ ಒಂಬತ್ತು ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಾಗುತ್ತದೆ" ಎಂದು ಹೇಳಿದೆ.

"2023 ರ ಆವೃತ್ತಿಯು ಎರಡು ಗುಂಪುಗಳನ್ನು ಒಳಗೊಂಡಿರುತ್ತದೆ, ಪ್ರತಿ ಗುಂಪಿನಿಂದ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆಯುತ್ತವೆ. ಸೂಪರ್ ಫೋರ್ ಹಂತದಿಂದ ಅಗ್ರ ಎರಡು ತಂಡಗಳು ನಂತರ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತವೆ. ಕ್ರಿಕೆಟ್‌ನ ಈ ಆಚರಣೆಯನ್ನು ಅತ್ಯುತ್ತಮವಾಗಿ ವೀಕ್ಷಿಸಲು ವಿಶ್ವದಾದ್ಯಂತದ ಅಭಿಮಾನಿಗಳನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ" ಎಂದು ಎಸಿಸಿ ತಿಳಿಸಿದೆ.

ಅದರೆ ಪಂದ್ಯ ನಡೆಯುವ ಸ್ಥಳ ಮತ್ತು ದಿನಾಂಕಗಳನ್ನು ಎಸಿಸಿ ಇನ್ನೂ ಬಹಿರಂಗಪಡಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT