ಪಾಕಿಸ್ತಾನ ತಂಡ 
ಕ್ರಿಕೆಟ್

ಏಕದಿನ ವಿಶ್ವಕಪ್ 2023: ಬೆಂಗಳೂರು, ಚೆನ್ನೈ ಪಂದ್ಯ ಬದಲಾವಣೆಗೆ ಪಾಕಿಸ್ತಾನ ಪಟ್ಟು! ಕಾರಣ ಏನು ಗೊತ್ತಾ?

ಏಷ್ಯಾಕಪ್‌  ಬಿಕ್ಕಟ್ಟು ಕೊನೆಗೊಂಡಿದ್ದು, ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ 2023 ಟೂರ್ನಿಯಾಗಿ ಪಾಕಿಸ್ತಾನ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

ನವದೆಹಲಿ: ಏಷ್ಯಾಕಪ್‌  ಬಿಕ್ಕಟ್ಟು ಕೊನೆಗೊಂಡಿದ್ದು, ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ 2023 ಟೂರ್ನಿಯಾಗಿ ಪಾಕಿಸ್ತಾನ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ. ಕರಡು ವೇಳಾಪಟ್ಟಿ ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವಿನ ಬಹು ನಿರೀಕ್ಷಿತ ಸ್ಪರ್ಧೆ ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

ಆದರೆ, ಇದೀಗ ಪಾಕಿಸ್ತಾನ ತಂಡ ಬೆಂಗಳೂರು ಮತ್ತು ಚೆನ್ನೈನಲ್ಲಿ ಪಂದ್ಯವನ್ನಾಡಲು ಇಷ್ಟಪಡುತ್ತಿಲ್ಲ. ಇಲ್ಲಿ ನಿಗದಿ ಮಾಡಿರುವ ಪಂದ್ಯಗಳಲ್ಲಿ ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿದೆ. 

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯ ಹಾಗೂ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನ ಆಡಬೇಕಾಗಿದೆ. ಚೆನ್ನೈನ ಪಿಚ್ ಹೆಚ್ಚು ಸ್ಪಿನ್ ಬೌಲರ್‌ಗಳಿಗೆ ನೆರವಾಗುತ್ತದೆ. ಅಫ್ಘಾನಿಸ್ತಾನ ತಂಡ ರಶೀದ್ ಖಾನ್, ನೂರ್ ಅಹ್ಮದ್ ಸೇರಿದಂತೆ ಕೆಲವು ಗುಣಮಟ್ಟದ ಸ್ಪಿನ್ನರ್​ಗಳನ್ನು ಹೊಂದಿದೆ. ಹೀಗಾಗಿ ಚೆನ್ನೈನಲ್ಲಿ ನಿಗದಿಪಡಿಸಿರುವ ಅಫ್ಘಾನಿಸ್ತಾನ ವಿರುದ್ಧದ ಪಂದ್ಯವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವಂತೆ ಪಾಕ್ ಕ್ರಿಕೆಟ್ ಮಂಡಳಿ ಒತ್ತಾಯಿಸಿದೆ ಎಂದು ಮೂಲಗಳು ತಿಳಿಸಿವೆ. 

ಬೆಂಗಳೂರು ಪಿಚ್ ಬ್ಯಾಟ್ಸ್​ಮನ್​ಗಳಿಗೆ ಹೇಳಿ ಮಾಡಿಸಿದಂತಾಗಿದೆ.ಹಾಗಾಗೀ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯಗಳ ಸ್ಥಳ ಬದಲಾವಣೆಗೆ ಪಿಸಿಬಿ ವಿನಂತಿಸಿರುವುದಾಗಿ ತಿಳಿದುಬಂದಿದೆ. ಆದಾಗ್ಯೂ ಐಸಿಸಿ ಶಿಷ್ಟಾಚಾರದ ಭಾಗವಾಗಿ ಸದಸ್ಯ ಮಂಡಳಿಗಳಿಂದ ಪಿಸಿಸಿಐ ಸಲಹೆ ಕೇಳಿದೆ ಆದರೆ, ಸ್ಥಳಗಳನ್ನು ಬದಲಾಯಿಸಲು ಬಲವಾದ ಕಾರಣವಿರಬೇಕು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT