ಪಾಕಿಸ್ತಾನ ತಂಡ 
ಕ್ರಿಕೆಟ್

ಏಕದಿನ ವಿಶ್ವಕಪ್ 2023: ಬೆಂಗಳೂರು, ಚೆನ್ನೈ ಪಂದ್ಯ ಬದಲಾವಣೆಗೆ ಪಾಕಿಸ್ತಾನ ಪಟ್ಟು! ಕಾರಣ ಏನು ಗೊತ್ತಾ?

ಏಷ್ಯಾಕಪ್‌  ಬಿಕ್ಕಟ್ಟು ಕೊನೆಗೊಂಡಿದ್ದು, ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ 2023 ಟೂರ್ನಿಯಾಗಿ ಪಾಕಿಸ್ತಾನ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

ನವದೆಹಲಿ: ಏಷ್ಯಾಕಪ್‌  ಬಿಕ್ಕಟ್ಟು ಕೊನೆಗೊಂಡಿದ್ದು, ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ 2023 ಟೂರ್ನಿಯಾಗಿ ಪಾಕಿಸ್ತಾನ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ. ಕರಡು ವೇಳಾಪಟ್ಟಿ ಪ್ರಕಾರ ಭಾರತ ಮತ್ತು ಪಾಕಿಸ್ತಾನ ನಡುವಿನ ಬಹು ನಿರೀಕ್ಷಿತ ಸ್ಪರ್ಧೆ ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

ಆದರೆ, ಇದೀಗ ಪಾಕಿಸ್ತಾನ ತಂಡ ಬೆಂಗಳೂರು ಮತ್ತು ಚೆನ್ನೈನಲ್ಲಿ ಪಂದ್ಯವನ್ನಾಡಲು ಇಷ್ಟಪಡುತ್ತಿಲ್ಲ. ಇಲ್ಲಿ ನಿಗದಿ ಮಾಡಿರುವ ಪಂದ್ಯಗಳಲ್ಲಿ ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿದೆ. 

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯ ಹಾಗೂ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನ ಆಡಬೇಕಾಗಿದೆ. ಚೆನ್ನೈನ ಪಿಚ್ ಹೆಚ್ಚು ಸ್ಪಿನ್ ಬೌಲರ್‌ಗಳಿಗೆ ನೆರವಾಗುತ್ತದೆ. ಅಫ್ಘಾನಿಸ್ತಾನ ತಂಡ ರಶೀದ್ ಖಾನ್, ನೂರ್ ಅಹ್ಮದ್ ಸೇರಿದಂತೆ ಕೆಲವು ಗುಣಮಟ್ಟದ ಸ್ಪಿನ್ನರ್​ಗಳನ್ನು ಹೊಂದಿದೆ. ಹೀಗಾಗಿ ಚೆನ್ನೈನಲ್ಲಿ ನಿಗದಿಪಡಿಸಿರುವ ಅಫ್ಘಾನಿಸ್ತಾನ ವಿರುದ್ಧದ ಪಂದ್ಯವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವಂತೆ ಪಾಕ್ ಕ್ರಿಕೆಟ್ ಮಂಡಳಿ ಒತ್ತಾಯಿಸಿದೆ ಎಂದು ಮೂಲಗಳು ತಿಳಿಸಿವೆ. 

ಬೆಂಗಳೂರು ಪಿಚ್ ಬ್ಯಾಟ್ಸ್​ಮನ್​ಗಳಿಗೆ ಹೇಳಿ ಮಾಡಿಸಿದಂತಾಗಿದೆ.ಹಾಗಾಗೀ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯಗಳ ಸ್ಥಳ ಬದಲಾವಣೆಗೆ ಪಿಸಿಬಿ ವಿನಂತಿಸಿರುವುದಾಗಿ ತಿಳಿದುಬಂದಿದೆ. ಆದಾಗ್ಯೂ ಐಸಿಸಿ ಶಿಷ್ಟಾಚಾರದ ಭಾಗವಾಗಿ ಸದಸ್ಯ ಮಂಡಳಿಗಳಿಂದ ಪಿಸಿಸಿಐ ಸಲಹೆ ಕೇಳಿದೆ ಆದರೆ, ಸ್ಥಳಗಳನ್ನು ಬದಲಾಯಿಸಲು ಬಲವಾದ ಕಾರಣವಿರಬೇಕು ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT