ವಿಮಾನದಲ್ಲಿ ಧೋನಿ ವಿಡಿಯೋ ವೈರಲ್ 
ಕ್ರಿಕೆಟ್

ವಿಮಾನದಲ್ಲಿ ಧೋನಿ 'Candy Crush' ವಿಡಿಯೋ ವೈರಲ್; ಕೇವಲ 3 ಗಂಟೆಯೊಳಗೆ 36 ಲಕ್ಷ ಮಂದಿಯಿಂದ ಡೌನ್ಲೋಡ್

ಭಾರತ ಕ್ರಿಕೆಟ್ ತಂಡದ ಅತ್ಯಂತ ಯಶಸ್ವೀ ನಾಯಕ, ಭಾರತೀಯ ಕ್ರಿಕೆಟ್ ದಂತಕಥೆಗಳಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಮಾಡಿದ ಒಂದು ಕೆಲಸ ಇದೀಗ ವ್ಯಾಪಕ ವೈರಲ್ ಆಗಿದೆ.

ಮುಂಬೈ: ಭಾರತ ಕ್ರಿಕೆಟ್ ತಂಡದ ಅತ್ಯಂತ ಯಶಸ್ವೀ ನಾಯಕ, ಭಾರತೀಯ ಕ್ರಿಕೆಟ್ ದಂತಕಥೆಗಳಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಮಾಡಿದ ಒಂದು ಕೆಲಸ ಇದೀಗ ವ್ಯಾಪಕ ವೈರಲ್ ಆಗಿದೆ.

ಭಾರತ ಕಂಡ ಹೆಮ್ಮೆಯ ನಾಯಕ, ಆದರೆ ಅವರ ನಿವೃತ್ತಿಯ ಬಳಿಕ ಐಪಿಎಲ್ ನಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತಾರೆ. ಆದರೆ ಅವರ ಜನಪ್ರಿಯತೆ ಇನ್ನೂ ಕುಸಿದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಧೋನಿ ಕ್ಯಾಂಡಿ ಕ್ರಶ್ ಆಡುತ್ತಿರುವ ವಿಡಿಯೋ ವೈರಲ್ ಆಗಿದ ಬೆನ್ನಲ್ಲೇ 3.6 ಮಿಲಿಯನ್ ಬಳಕೆದಾರರು ಕ್ಯಾಂಡಿ ಕ್ರಶ್ ಡೌನ್ ಲೋಡ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಅಲ್ಲದೆ ಧೋನಿ ಜೊತೆಗೆ ಕ್ಯಾಂಡಿಕ್ರಷ್ ಗೇಮ್ ಕೂಡ ಟ್ರೆಂಡಿಂಗ್ ನಲ್ಲಿದೆ.

ಇತ್ತೀಚೆಗೆ ಧೋನಿ ತಮ್ಮ ಪತ್ನಿ ಸಾಕ್ಷಿಯೊಂದಿಗೆ ಇಂಡಿಗೋ ವಿಮಾನದ ಎಕಾನಮಿ ಕ್ಲಾಸ್ ವಿಮಾನದಲ್ಲಿ ಪ್ರಯಾಣ ಬೆಳೆಸುತ್ತಿದ್ದರು. ಎಂಎಸ್ ಧೋನಿ ವಿಂಡೋ ಸೀಟ್ ನಲ್ಲಿ ಕೂತಿದ್ದರು. ಧೋನಿ ಅಭಿಮಾನಿ ಗಗನಸಖಿ ಒಂದು ಟ್ರೇನಲ್ಲಿ ಚಾಕೋಲೇಟ್ ಸೇರಿದಂತೆ ಇನ್ನಿತರ ತಿನಿಸುಗಳೊಂದಿಗೆ ಧೋನಿಯ ಬಳಿ ತೆಗೆದುಕೊಂಡು ಹೋಗುತ್ತಾರೆ. ಧೋನಿ ಗಗನಸಖಿಯಿಂದ ಚಾಕೊಲೇಟ್ ಸ್ವೀಕರಿಸಿ ಥ್ಯಾಂಕ್ಸ್ ಹೇಳುತ್ತಾರೆ.

ಇದೇ ವೇಳೆ ಗಗನ ಸಖಿ ಮತ್ತಷ್ಟು ಚಾಕೊಲೇಟ್ ತೆಗೆದುಕೊಳ್ಳುವಂತೆ ಮನವಿ ಮಾಡುತ್ತಾರೆ. ಆದರೆ ಧೋನಿ ಇಲ್ಲ ನನಗೆ ಒಂದು ಸಾಕು ಎಂದು ವಿನಮ್ರವಾಗಿ ಹೇಳುತ್ತಾರೆ. ಇದರ ಬೆನ್ನಲ್ಲೇ ಅವರ ಟ್ಯಾಬ್ ನಲ್ಲಿ ಧೋನಿ ಕ್ಯಾಂಡಿ ಕ್ರಶ್ ಗೇಮ್ ಆಡಿದ್ದು, ವಿಡಿಯೋ ಭಾರಿ ವೈರಲ್ ಆಗಿದೆ. ಇದನ್ನು ಗಮನಿಸಿದ ಅವರ ಅಭಿಮಾನಿಗಳು ನಾನು ಇನ್ನು ಕ್ಯಾಂಡಿ ಕ್ರಶ್ ಆಡುತ್ತೇನೆ ಎಂದು ಬರೆದು ಕಮೆಂಟ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಹುತೇಕ ಅಭಿಮಾನಿಗಳು ಕ್ಯಾಂಡಿ ಕ್ರಶ್ ಡೌನ್ಲೋಡ್ ಮಾಡಿದ್ದಾರೆ. 

ವಿಡಿಯೋ ವೈರಲ್ ಆದ ಬೆನ್ನಲ್ಲೇ 3.6 ಮಿಲಿಯನ್ ಬಳಕೆದಾರರು ಕ್ಯಾಂಡಿ ಕ್ರಶ್ ಡೌನ್ ಲೋಡ್ ಮಾಡಿದ್ದಾರೆ ಎನ್ನಲಾಗಿದೆ. ಧೋನಿ, ವೀಡಿಯೊ ಗೇಮ್ ಗಳ ಕಟ್ಟಾ ಅಭಿಮಾನಿ ಕೂಡ. ಧೋನಿ ಕಾಲ್ ಆಫ್ ಡ್ಯೂಟಿ, ಫಿಫಾ ಮತ್ತು ಪಬ್ಜಿ ಆಡುವುದಕ್ಕೆ ಇಷ್ಟ ಪಡುತ್ತಾರೆ. ಈ ತಿಂಗಳ ಆರಂಭದಲ್ಲಿ, ಭಾರತದ ಮಾಜಿ ನಾಯಕ ಮುಂಬೈ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?