ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ 
ಕ್ರಿಕೆಟ್

ಮಹಾಕಾಳೇಶ್ವರ ದೇವಾಲಯದಲ್ಲಿ ವಿರಾಟ್, ಅನುಷ್ಕಾ ಶರ್ಮಾ ವಿಶೇಷ ಪೂಜೆ!

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಬಾಬಾ ಮಹಾಕಾಳೇಶ್ವರ ದೇವಾಲಯಕ್ಕೆ ಶನಿವಾರ ಭೇಟಿ ನೀಡಿದ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ವಿಶೇಷ ಪೂಜೆ ಸಲ್ಲಿಸಿದರು.

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಬಾಬಾ ಮಹಾಕಾಳೇಶ್ವರ ದೇವಾಲಯಕ್ಕೆ ಶನಿವಾರ ಭೇಟಿ ನೀಡಿದ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಡೆದ ಭಸ್ಮ ಆರತಿಯಲ್ಲಿ ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ಭಾಗವಹಿಸಿದರು.  ಭಸ್ಮ ಆರತಿ ಇಲ್ಲಿನ ಪ್ರಸಿದ್ಧ ಆಚರಣೆಯಾಗಿದ್ದು,  ಬೆಳಿಗ್ಗೆ 4 ರಿಂದ 5:30 ರ ನಡುವೆ ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ.

ಬಳಿಕ ದಂಪತಿಗಳು ದೇವಸ್ಥಾನದ ಗರ್ಭಗುಡಿಗೆ ಆಗಮಿಸಿ ಜಲಾಭಿಷೇಕ ನೆರವೇರಿಸಿದರು. ಪೂಜೆ ಹಿನ್ನೆಲೆಯಲ್ಲಿ ವಿರಾಟ್ ಧೋತಿ ಧರಿಸಿದ್ದರೆ, ಅನುಷ್ಕಾ ಶರ್ಮಾ ಸಾಂಪ್ರದಾಯಿಕ ತೆಳುವಾದ ಸೀರೆ ಧರಿಸಿದ್ದನ್ನು ನೋಡಬಹುದು. ವಿರಾಟ್ ಕೂಡ ಪ್ರಾರ್ಥಿಸುತ್ತಿರುವುದು ಕಂಡುಬಂತು. ಪೂಜೆ ನಂತರ ದಂಪತಿ  ದೇವಸ್ಥಾನದ ಆವರಣದಲ್ಲಿ ಕೆಲಕಾಲ ಕಳೆದರು.

ಈ ಹಿಂದೆ ವಿರಾಟ್ ಮತ್ತು ಅನುಷ್ಕಾ ರಿಷಿಕೇಶಕ್ಕೆ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದರು. ಸ್ವಾಮಿ ದಯಾನಂದ ಗಿರಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ತಾರಾ ಜೋಡಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿರುವುದು ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT