ಮೊಹಮ್ಮದ್ ಹಫೀಜ್ 
ಕ್ರಿಕೆಟ್

ಪಾಕ್ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಮನೆಯಲ್ಲಿ ಕಳ್ಳತನ; ಲಕ್ಷಾಂತರ ನಗದು, ಚಿನ್ನಾಭರಣ ಕಳವು!

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಪ್ರಸ್ತುತ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದಾರೆ. ಈ ನಡುವೆ ಕಳೆದ ಮಂಗಳವಾರ ಲಾಹೋರ್‌ನಲ್ಲಿರುವ ಅವರ ಮನೆಯಲ್ಲಿ ಕಳ್ಳತನವಾಗಿದೆ. 

ಲಾಹೋರ್: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಪ್ರಸ್ತುತ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದಾರೆ. ಈ ನಡುವೆ ಕಳೆದ ಮಂಗಳವಾರ ಲಾಹೋರ್‌ನಲ್ಲಿರುವ ಅವರ ಮನೆಯಲ್ಲಿ ಕಳ್ಳತನವಾಗಿದೆ. 

ಹಫೀಜ್ ಮನೆಯಲ್ಲಿದ್ದ ನಗದು ಹಣ, ವಿದೇಶಿ ಕರೆನ್ಸಿ ಹಾಗೂ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ವರದಿಯ ಪ್ರಕಾರ, ಕಳ್ಳರು $ 20,000, 5000 UAE ದಿರ್ಹಾಮ್‌ಗಳು, 4000 ಪೌಂಡ್‌ಗಳು ಮತ್ತು 3000 ಯೂರೋಗಳನ್ನು ಕದ್ದಿದ್ದಾರೆ.

ಕಳ್ಳತನ ದೂರು ದಾಖಲು
ಮೊಹಮ್ಮದ್ ಹಫೀಜ್ ಅವರ ಪತ್ನಿಯ ಚಿಕ್ಕಪ್ಪ ಕಳ್ಳತನದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ನಂತರ ಎಸ್‌ಎಚ್‌ಒ ರಕ್ಷಣಾ ಪೊಲೀಸ್ ಮತ್ತು ವಿಧಿ ವಿಜ್ಞಾನ ಸಂಸ್ಥೆ ತಂಡವು ಕ್ರಿಕೆಟಿಗನ ಮನೆಗೆ ತೆರಳಿ ತನಿಖೆ ನಡೆಸಿತು. ಕಳ್ಳತನದ ಸಮಯದಲ್ಲಿ ಅವರ ಮನೆಯಲ್ಲಿ ಯಾರೂ ಇರಲಿಲ್ಲ. ಅವರ ಪತ್ನಿ ಯಾವುದೋ ಕೆಲಸದ ನಿಮಿತ್ತ ಇಸ್ಲಾಮಾಬಾದ್‌ಗೆ ತೆರಳಿದ್ದರು. ಇದರ ಲಾಭ ಪಡೆದ ಕಳ್ಳರು ಕಳ್ಳತನ ಕೃತ್ಯ ಎಸಗಿದ್ದಾರೆ.

18 ವರ್ಷಗಳ ವೃತ್ತಿಜೀವನಕ್ಕೆ ವಿದಾಯ
ಪಾಕಿಸ್ತಾನಕ್ಕಾಗಿ 55 ಟೆಸ್ಟ್, 218 ಏಕದಿನ ಮತ್ತು 119 ಟಿ20 ಪಂದ್ಯಗಳನ್ನು ಆಡಿದ ಆಲ್ ರೌಂಡರ್ ಮೊಹಮ್ಮದ್ ಹಫೀಜ್, 2022ರಂದು ಜನವರಿ 3ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಸಂಪೂರ್ಣವಾಗಿ ನಿವೃತ್ತಿ ಹೊಂದಲು ನಿರ್ಧರಿಸಿದರು. ಮೊಹಮ್ಮದ್ ಹಫೀಜ್ 2018 ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಹಫೀಜ್ ಎಲ್ಲಾ ಮೂರು ಮಾದರಿಗಳಲ್ಲಿ ಪಾಕಿಸ್ತಾನ ತಂಡವನ್ನು ಮುನ್ನಡೆಸಿದರು. ಹಫೀಜ್ 3 ಏಪ್ರಿಲ್ 2003ರಂದು ಶಾರ್ಜಾದಲ್ಲಿ ಜಿಂಬಾಬ್ವೆ ವಿರುದ್ಧ ತಮ್ಮ ಟೆಸ್ಟ್ ಚೊಚ್ಚಲ ಪಂದ್ಯವನ್ನು ಆಡಿದ್ದರು. ಅವರು ಪಾಕಿಸ್ತಾನಕ್ಕಾಗಿ ಮೂರು ಐಸಿಸಿ ವಿಶ್ವಕಪ್ ಮತ್ತು ಆರು ಟಿ 20 ವಿಶ್ವಕಪ್‌ಗಳನ್ನು ಆಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT