ಎಂಎಸ್ ಧೋನಿ 
ಕ್ರಿಕೆಟ್

ಮದುವೆಯ ಮಮತೆಯ ಕರೆಯೋಲೆಯಲ್ಲಿ ಕ್ರಿಕೆಟಿಗ ಎಂಎಸ್ ಧೋನಿ ಫೋಟೊ ಹಾಕಿಸಿದ ಕರ್ನಾಟಕದ ಅಭಿಮಾನಿ!

ಮಹೇಂದ್ರ ಸಿಂಗ್ ಧೋನಿ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಗಳಿಸಿದವರು. ಭಾರತಕ್ಕೆ ಏಕದಿನ ಮತ್ತು ಟಿ20 ವಿಶ್ವಕಪ್ ತಂದುಕೊಟ್ಟ ಈ ಯಶಸ್ವಿ ನಾಯಕನಿಗೆ ಭಾರತವಷ್ಟೇ ಅಲ್ಲ, ಜಗತ್ತಿನಾದ್ಯಂತ ಅಪಾರ ಪ್ರಮಾಣದ ಅಭಿಮಾನಿಗಳಿದ್ದಾರೆ. ತಮ್ಮ ಅಭಿಮಾನಿಗಳ ಕಾರಣದಿಂದಾಗಿಯೇ ಧೋನಿ ಸುದ್ದಿಯಾಗುತ್ತಿರುತ್ತಾರೆ.

ಬೆಂಗಳೂರು: ಮಹೇಂದ್ರ ಸಿಂಗ್ ಧೋನಿ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಗಳಿಸಿದವರು. ಭಾರತಕ್ಕೆ ಏಕದಿನ ಮತ್ತು ಟಿ20 ವಿಶ್ವಕಪ್ ತಂದುಕೊಟ್ಟ ಈ ಯಶಸ್ವಿ ನಾಯಕನಿಗೆ ಭಾರತವಷ್ಟೇ ಅಲ್ಲ, ಜಗತ್ತಿನಾದ್ಯಂತ ಅಪಾರ ಪ್ರಮಾಣದ ಅಭಿಮಾನಿಗಳಿದ್ದಾರೆ. ತಮ್ಮ ಅಭಿಮಾನಿಗಳ ಕಾರಣದಿಂದಾಗಿಯೇ ಧೋನಿ ಸುದ್ದಿಯಾಗುತ್ತಿರುತ್ತಾರೆ.

ಈಗ ಇಂತದ್ದೇ ಅಭಿಮಾನಿಯೊಬ್ಬರು ತಮ್ಮ ಅಭಿಮಾನವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಈ ಅಭಿಮಾನಿ ಕರ್ನಾಟಕದವರು ಎನ್ನುವುದು ವಿಶೇಷ. ಹೌದು, ಅಭಿಮಾನಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಧೋನಿ ಫೋಟೊ ಹಾಕಿಸಿದ್ದು, ಆ ಪತ್ರಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಟ್ವಿಟರ್‌ ಬಳಕೆದಾರರೊಬ್ಬರು ಈ ಫೋಟೊವನ್ನು ಹಂಚಿಕೊಂಡಿದ್ದು, ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಅಭಿಮಾನಿಯೊಬ್ಬರು ಎಂಎಸ್ ಧೋನಿ ಅವರ ಫೋಟೊವನ್ನು ಪ್ರಿಂಟ್ ಮಾಡಿಸಿದ್ದಾರೆ ಎಂದಿದ್ದಾರೆ.

ಈ ಫೋಟೊ ಪ್ರಕಾರ, 'ಇದೇ ಮಾರ್ಚ್ 12ರಂದು ಭಾನುವಾರ ವಿವಾಹ ನಡೆಯಲಿದೆ. ಧೋನಿ ಅವರ ಅಭಿಮಾನಿಯ ಹೆಸರು ಶಮಂತ್ ಕುಮಾರ್ ಪಿ.ಜಿ (ಶಮಂತ್) ಎಂದಿದ್ದರೆ, ವಧುವಿನ ಹೆಸರು ಭವ್ಯಶ್ರೀ (ರಮ್ಯ) ಎಂದಿದೆ'. ಇದರ ಹೊರತಾಗಿ ಪತ್ರಿಕೆಯಲ್ಲಿ ಬೇರೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

41 ವರ್ಷದ ಧೋನಿ ಸದ್ಯ ತಮ್ಮ ಕೊನೆಯ ಐಪಿಎಲ್ ಆವೃತ್ತಿಯನ್ನು ಆಡಲು ಸಜ್ಜಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿರುವ ಧೋನಿ ಬಗ್ಗೆ ಅಭಿಮಾನಿಗಳಿಗೆ ವಿಶೇಷ ಗೌರವ. ತಮಿಳುನಾಡಿನ ಹಲವಾರು ಅಭಿಮಾನಿಗಳು ಈಗಾಗಲೇ ಧೋನಿ ಫೋಟೊವನ್ನು ಮದುವೆ ಪತ್ರಿಕೆಯಲ್ಲಿ ಮುದ್ರಿಸಿ ಅಭಿಮಾನ ಪ್ರದರ್ಶಿಸಿದ್ದಾರೆ.

2020ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಯೊಬ್ಬರು ತಮ್ಮ ಮನೆಗೆ ಪೂರ್ತಿ ಅರಿಶಿಣದ ಬಣ್ಣ ಬಳಿದು, 'ಹೋಮ್ ಆಫ್ ಧೋನಿ ಫ್ಯಾನ್' ಎಂದು ಹೆಸರಿಟ್ಟಿದ್ದರು.  ತಮಿಳುನಾಡಿನ ಅರಂಗೂರ್‌ನಲ್ಲಿರುವ ಗೋಪಿ ಕೃಷ್ಣನ್ ಮತ್ತು ಅವರ ಕುಟುಂಬ ಈ ರೀತಿಯ ಅಭಿಮಾನ ತೋರಿಸಿ ಸಾಕಷ್ಟು ಸುದ್ದಿಯಾಗಿದ್ದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT