ಶ್ರೇಯಸ್ ಅಯ್ಯರ್ 
ಕ್ರಿಕೆಟ್

4ನೇ ಟೆಸ್ಟ್: ಟೀಂ ಇಂಡಿಯಾಗೆ ಗಾಯದ ಸಮಸ್ಯೆ: ಬೆನ್ನು ನೋವು ಎಂದ ಶ್ರೇಯಸ್ ಅಯ್ಯರ್!

ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ 4ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು, ತಂಡ ಪ್ರಮುಖ ಬ್ಯಾಟರ್ ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಅಹ್ಮದಾಬಾದ್: ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ 4ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು, ತಂಡ ಪ್ರಮುಖ ಬ್ಯಾಟರ್ ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ನಿನ್ನೆ ಮೂರನೇ ದಿನದಾಟದ ನಡುವೆ ಭಾರತ ತಂಡದ ಬ್ಯಾಟರ್ ಶ್ರೇಯಸ್ ಅಯ್ಯರ್ ಬೆನ್ನು ನೋವಿಗೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಿ ಸ್ಕ್ಯಾನಿಂಗ್ ಮಾಡಿಸಲಾಗಿದೆ. ಇದೇ ಕಾರಣಕ್ಕೆ ಶ್ರೇಯಸ್ ಅಯ್ಯರ್ ಇನ್ನೂ ಬ್ಯಾಟಿಂಗ್ ಗೆ ಬಂದಿಲ್ಲ ಎಂದು ಹೇಳಲಾಗಿದೆ. 

ಪ್ರಸ್ತುತ, ಅಯ್ಯರ್ ಅವರನ್ನು ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಇದರ ಬಗ್ಗೆ ಬಿಸಿಸಿಐ (BCCI) ಕೂಡ ಮಾಹಿತಿ ಹಂಚಿಕೊಂಡಿದೆ. ಅಹ್ಮದಾಬಾದ್ ಟೆಸ್ಟ್‌ನ ಮೂರನೇ ದಿನದಂದು ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದ ಬಳಲುತ್ತಿದ್ದು, ಅವರನ್ನು ಸ್ಕ್ಯಾನ್‌ಗೆ ಕರೆದೊಯ್ಯಲಾಗಿದೆ. ಬಿಸಿಸಿಐನ ವೈದ್ಯಕೀಯ ತಂಡವು ಅಯ್ಯರ್ ಗಾಯದ ಮೇಲೆ ನಿರಂತರವಾಗಿ ನಿಗಾ ಇರಿಸಿದೆ ಎಂದು ಹೇಳಿಕೊಂಡಿದೆ.

ಬೆನ್ನು ನೋವಿನ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ಅಹಮದಾಬಾದ್ ಟೆಸ್ಟ್‌ನಲ್ಲಿ ಇನ್ನೂ ಬ್ಯಾಟಿಂಗ್‌ಗೆ ಬಂದಿಲ್ಲ. ಸಾಮಾನ್ಯವಾಗಿ ಅವರು 4 ನೇ ಕ್ರಮಾಂಕದಲ್ಲಿ ಮಾತ್ರ ಬ್ಯಾಟ್ ಮಾಡುತ್ತಾರೆ. ಆದರೆ ಮೊದಲ ಇನ್ನಿಂಗ್ಸ್​ನಲ್ಲಿ ಅವರ ಸ್ಥಾನದಲ್ಲಿ ರವೀಂದ್ರ ಜಡೇಜಾ ಮೂರನೇ ದಿನ ಬ್ಯಾಟಿಂಗ್‌ಗೆ ಇಳಿದಿದ್ದರು. ನಾಲ್ಕನೇ ದಿನದಂದು ಜಡೇಜಾ ಔಟಾದಾಗಲೂ ಕೂಡ ಶ್ರೇಯಸ್​ ಬ್ಯಾಟಿಂಗ್​ ಬರಲಿಲ್ಲ. ಬದಲಿಗೆ ವಿಕೆಟ್ ಕೀಪರ್ ಕೆ. ಎಸ್. ಭರತ್ ಬ್ಯಾಟಿಂಗ್‌ಗೆ ಬಂದಿದ್ದಾರೆ. ಇದರಿಂದ ಶ್ರೇಯಸ್ ಅಯ್ಯರ್ ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವುದರ ಬಗ್ಗೆ ಅನುಮಾನ ಮೂಡುತ್ತಿದೆ. ಒಂದು ವೇಳೆ ಅಯ್ಯರ್ ಬ್ಯಾಟಿಂಗ್​ಗೆ ಬರದಿದ್ದರೆ, ಭಾರತಕ್ಕೆ ಭಾರಿ ಹಿನ್ನಡೆಯುಂಟಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT