ಸಂಗ್ರಹ ಚಿತ್ರ 
ಕ್ರಿಕೆಟ್

2ನೇ ಏಕದಿನ ಪಂದ್ಯ: ವಿಕೆಟ್ ನಷ್ಟವಿಲ್ಲದೆ ಟೀಂ ಇಂಡಿಯಾ ವಿರುದ್ಧ ಗೆದ್ದ ಆಸ್ಟ್ರೇಲಿಯಾ!

ವಿಶಾಖಪಟ್ಟಣಂ: ಮೂರು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಮಣಿಸಿದೆ.

ವಿಶಾಖಪಟ್ಟಣಂ: ಮೂರು ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಮಣಿಸಿದೆ. 

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 26 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ತಂಡ 11 ಓವರ್‌ಗಳಲ್ಲಿ 121 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಬೀಗಿದೆ. ವಿಶಾಖಪಟ್ಟಣಂನಲ್ಲಿ ಈ ಗೆಲುವಿನೊಂದಿಗೆ ಕಾಂಗರೂ ತಂಡ ಸರಣಿಗೆ ಮರಳಿದೆ. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮುಂಬೈನಲ್ಲಿ ಸೋತಿತ್ತು. ಇದೀಗ ಸರಣಿ 1-1ರಲ್ಲಿ ಸಮಬಲ ಸಾಧಿಸಿದೆ. ಮೂರನೇ ಮತ್ತು ಕೊನೆಯ ಪಂದ್ಯ ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿದೆ.

ಮಿಚೆಲ್ ಮಾರ್ಷ್ ಮತ್ತು ಟ್ರಾವಿಸ್ ಹೆಡ್ ಅವರ ಅರ್ಧಶತಕಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು ಎರಡನೇ ಏಕದಿನ ಪಂದ್ಯದಲ್ಲಿ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಕಾಂಗರೂ ತಂಡ ಸರಣಿಯಲ್ಲಿ ಪುನರಾಗಮನ ಮಾಡಿದೆ.

ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ್ದು ಟೀಂ ಇಂಡಿಯಾ ಪವರ್‌ಪ್ಲೇ (ಆರಂಭಿಕ 10 ಓವರ್‌ಗಳು) ನಲ್ಲಿ ಭಾರತದ ಅರ್ಧದಷ್ಟು ತಂಡದವರು ಪೆವಿಲಿಯನ್‌ಗೆ ಮರಳಿದರು. ರೋಹಿತ್ ಶರ್ಮಾ ಅಥವಾ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ಮಾಡಿಲ್ಲ. ಶುಭಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಖಾತೆ ತೆರೆಯಲೂ ಸಾಧ್ಯವಾಗಲಿಲ್ಲ. 11 ಬ್ಯಾಟ್ಸ್‌ಮನ್‌ಗಳಲ್ಲಿ ನಾಲ್ವರು ಮಾತ್ರ ಎರಡಂಕಿ ದಾಟುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿರಾಟ್ ಕೊಹ್ಲಿ ಗರಿಷ್ಠ 31 ರನ್ ಗಳಿಸಿದರು. ಅದೇ ಸಮಯದಲ್ಲಿ ಅಕ್ಷರ್ ಪಟೇಲ್ ಅಜೇಯ 29 ರನ್ ಗಳಿಸಿ ತಂಡವನ್ನು 100ರ ಗಡಿ ದಾಟಿಸಿದರು. ರವೀಂದ್ರ ಜಡೇಜಾ 16 ಮತ್ತು ರೋಹಿತ್ ಶರ್ಮಾ 13 ರನ್ ಗಳಿಸಿದರು. ಕೆಎಲ್ ರಾಹುಲ್ ಒಂಬತ್ತು ಮತ್ತು ಹಾರ್ದಿಕ್ ಪಾಂಡ್ಯ ಕೇವಲ ಒಂದು ರನ್ ಗಳಿಸಲಷ್ಟೇ ಶಕ್ತರಾದರು. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಐದು ಮತ್ತು ಸೀನ್ ಅಬಾಟ್ ಮೂರು ವಿಕೆಟ್ ಪಡೆದರು. ನಾಥನ್ ಎಲ್ಲಿಸ್ ಎರಡು ವಿಕೆಟ್ ಪಡೆದರು.

117 ರನ್ ಬೆನ್ನಟ್ಟಿದ ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ 36 ಎಸೆತಗಳಲ್ಲಿ 66 ಮತ್ತು ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 51 ರನ್ ಗಳಿಸಿ ಅಜೇಯರಾಗಿ ಉಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT