ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ 
ಕ್ರಿಕೆಟ್

ಅಕ್ಟೋಬರ್ 5ರಿಂದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭ; ನವೆಂಬರ್ 19ರಂದು ಅಹ್ಮದಾಬಾದ್ ನಲ್ಲಿ ಫೈನಲ್ ಪಂದ್ಯ

ಭಾರತ ಆತಿಥ್ಯ ವಹಿಸಿರುವ ಐಸಿಸಿ ಏಕದಿನ ಕ್ರಿಕೆಟ್​ ವಿಶ್ವ ಕಪ್​ (World Cup 2023) ಟೂರ್ನಿ ಮುಂಬರುವ ಅಕ್ಟೋಬರ್​ 5ರಿಂದ ಆರಂಭಗೊಂಡು ನವೆಂಬರ್​ 19ರವರೆಗೆ ನಡೆಯಲಿದ್ದು, ಅಹ್ಮದಾಬಾದ್ ನಲ್ಲಿ ನವೆಂಬರ್ 19ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಇಎಸ್​ಪಿಎನ್​ ಕ್ರಿಕ್​ ಇನ್ಫೋ ವರದಿ ಮಾಡಿದೆ.

ಮುಂಬೈ: ಭಾರತ ಆತಿಥ್ಯ ವಹಿಸಿರುವ ಐಸಿಸಿ ಏಕದಿನ ಕ್ರಿಕೆಟ್​ ವಿಶ್ವ ಕಪ್​ (World Cup 2023) ಟೂರ್ನಿ ಮುಂಬರುವ ಅಕ್ಟೋಬರ್​ 5ರಿಂದ ಆರಂಭಗೊಂಡು ನವೆಂಬರ್​ 19ರವರೆಗೆ ನಡೆಯಲಿದ್ದು, ಅಹ್ಮದಾಬಾದ್ ನಲ್ಲಿ ನವೆಂಬರ್ 19ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಇಎಸ್​ಪಿಎನ್​ ಕ್ರಿಕ್​ ಇನ್ಫೋ ವರದಿ ಮಾಡಿದೆ.

ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕ ದಿನ ಕ್ರಿಕೆಟ್​ ವಿಶ್ವ ಕಪ್​ (World Cup 2023) ಅಕ್ಟೋಬರ್​ 2ರಿಂದ ಆರಂಭಗೊಂಡು ನವೆಂಬರ್​ 19ರವರೆಗೆ ನಡೆಯಲಿದೆ. ಬಿಸಿಸಿಐ ಪಂದ್ಯಗಳಿಗೆ ಆತಿಥ್ಯ ವಹಿಸಲಿರುವ 12 ನಗರಗಳ ಪಟ್ಟಿ ಸಿದ್ಧಗೊಳಿಸಿದ್ದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಫೈನಲ್ ಪಂದ್ಯ ನವೆಂಬರ್ 19ರಂದು ನಡೆಯಲಿದೆ. 

ಟೂರ್ನಿಯಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿದ್ದು ಒಟ್ಟು 46 ದಿನಗಳ ಕಾಲ ವಿಶ್ವ ಕಪ್ ಆಯೋಜನೆಗೊಳ್ಳಲಿದೆ. ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈ ಪಂದ್ಯಗಳು ಆಯೋಜನೆಗೊಳ್ಳಲಿರುವ ಇತರ ನಗರಗಳಾಗಿವೆ.  ಆದರೆ, ಯಾವ ಪಂದ್ಯಗಳು ಎಲ್ಲಿ ನಡೆಯುತ್ತವೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಅದೇ ರೀತಿ ಕೆಲವು ನಗರಗಳಲ್ಲಿ ಅಭ್ಯಾಸ ಪಂದ್ಯಗಳನ್ನೂ ಆಯೋಜಿಸಲಾಗಿದೆ. ಭಾರತದ ನಾನಾ ನಗರಗಳಲ್ಲಿ ಮಳೆ ಬರುವ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ವೇಳಾಪಟ್ಟಿಯನ್ನು ಸಿದ್ಧಪಡಿಸುವುದು ಬಿಸಿಸಿಐ ಉದ್ದೇಶವಾಗಿದೆ.

ಸಾಮಾನ್ಯವಾಗಿ ಐಸಿಸಿ ವಿಶ್ವಕಪ್ ವೇಳಾಪಟ್ಟಿಯನ್ನು ಕನಿಷ್ಠ ಒಂದು ವರ್ಷ ಮುಂಚಿತವಾಗಿ ಪ್ರಕಟಿಸುತ್ತದೆ. ಆದರೆ ಈ ಬಾರಿ ಬಿಸಿಸಿಐ ಭಾರತ ಸರ್ಕಾರದಿಂದ ಅಗತ್ಯ ಅನುಮತಿಗಳನ್ನು ಪಡೆಯಬೇಕಾಗಿದೆ. ಪಂದ್ಯಾವಳಿಗೆ ತೆರಿಗೆ ವಿನಾಯಿತಿ ನೀಡುವುದು ಮತ್ತು ಪಾಕಿಸ್ತಾನ ತಂಡಕ್ಕೆ ವೀಸಾ ಕ್ಲಿಯರೆನ್ಸ್ ನೀಡುವುದು ಬಾಕಿ ಉಳಿದಿರುವ ಸಮಸ್ಯೆಗಳಾಗಿವೆ. ಕಳೆದ ವಾರಾಂತ್ಯದಲ್ಲಿ ದುಬೈನಲ್ಲಿ ನಡೆದ ಐಸಿಸಿಯ ತ್ರೈಮಾಸಿಕ ಸಭೆ ನಡೆದಿದೆ. ಅದರಲ್ಲಿ ಪಾಕಿಸ್ತಾನ ತಂಡಕ್ಕೆ ಭಾರತ ಸರ್ಕಾರದಿಂದ ವೀಸಾ ಕೊಡಿಸುವ ಭರವಸೆಯನ್ನು ಬಿಸಿಸಿಐ ಕೊಟ್ಟಿದೆ.

2016ರ ಟಿ20 ವಿಶ್ವ ಕಪ್​ ಹಾಗೂ 2018ರ ಚಾಂಪಿಯನ್ಸ್ ಟ್ರೋಫಿ ಭಾರತದಲ್ಲಿ ಆತಿಥ್ಯದಲ್ಲಿ ನಡೆದಿತ್ತು. 2021ರ ಟಿ20 ವಿಶ್ವ ಕಪ್​ ಭಾರತಕ್ಕೆ ಸಿಕ್ಕಿದ್ದರೂ ಕೊರೊನಾ ಕಾರಣಕ್ಕೆ ಅದನ್ನು ಯುಎಇನಲ್ಲಿ ನಡೆಸಲಾಗಿತ್ತು.

ಏನಿದು ಟ್ಯಾಕ್ಸ್ ಸಮಸ್ಯೆ?
ಐಸಿಸಿ ಆತಿಥ್ಯದ ಒಪ್ಪಂದದ ಪ್ರಕಾರ ಆತಿಥೇಯ ಕ್ರಿಕೆಟ್ ಸಂಸ್ಥೆ ಅಲ್ಲಿನ ಸರಕಾರದಿಂದ ತೆರಿಗೆ ವಿನಾಯಿತಿಯನ್ನು ಕೊಡಿಸಬೇಕು. ಅದರಂತೆ ಹಾಲಿ ಆವೃತ್ತಿಯ ವಿಶ್ವ ಕಪ್​ನಲ್ಲಿ ಐಸಿಸಿ 43 ಕೋಟಿ ರೂಪಾಯಿ ಆದಾಯ ಪಡೆಯಲಿದೆ. ಅದಕ್ಕೆ ಭಾರತದಲ್ಲಿ ಸುಮಾರು ಶೇಕಡಾ 20ರಷ್ಟು ತೆರಿಗೆಯಿದೆ. ಆ ವಿನಾಯಿತಿಯನ್ನು ಬಿಸಿಸಿಐ ಕೊಡಿಸಬೇಕಾಗಿದೆ. ಒಂದು ವೇಳೆ ಕೊಡದೇ ಹೋದರೆ ಆತಿಥೇಯರಿಗೆ ನೀಡಬೇಕಾದ ಲಾಭಾಂಶದಲ್ಲಿ ಕಡಿತ ಮಾಡಲಾಗುತ್ತದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT