ಸಂಗ್ರಹ ಚಿತ್ರ 
ಕ್ರಿಕೆಟ್

IPL 2023: ಸಾಲ್ಟ್ ಸ್ಫೋಟಕ ಬ್ಯಾಟಿಂಗ್; RCB ವಿರುದ್ಧ ಡೆಲ್ಲಿಗೆ 7 ವಿಕೆಟ್ ಗಳ ಜಯ

ಐಪಿಎಲ್ 2023ರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ದೆಹಲಿ ತಂಡ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ನವದೆಹಲಿ: ಐಪಿಎಲ್ 2023ರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ದೆಹಲಿ ತಂಡ 7 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ದೆಹಲಿ ಇನ್ನು 20 ಎಸೆತಗಳು ಬಾಕಿ ಇರುವಂತೆ 3 ವಿಕೆಟ್ ನಷ್ಟಕ್ಕೆ 187 ರನ್ ಗಳಿಸುವ ಮೂಲಕ ಪಂದ್ಯ ಗೆದ್ದುಕೊಂಡಿತು.

ದೆಹಲಿ ಸ್ಫೋಟಕ ಆರಂಭ ಪಡೆದಿದ್ದು ತಂಡ 60 ರನ್ ಪೇರಿಸಿದ್ದಾಗ 22 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರನ್ನು ಹ್ಯಾಜಲ್‌ವುಡ್ ಔಟಾದರು. ಎರಡನೇ ವಿಕೆಟ್ ಆಗಿ ಮಿಚೆಲ್ ಮಾರ್ಷ್ 26 ರನ್ ಗಳಿಸಿದ್ದಾಗ ಔಟಾದರು. ನಂತರ ಮೈದಾನಕ್ಕಿಳಿದ ಫಿಲ್ ಸಾಲ್ಟ್ ಮತ್ತು ರಿಲೆ ರುಸ್ಸೋ 31 ಎಸೆತಗಳಲ್ಲಿ 52 ರನ್ ಜೊತೆಯಾಟ ನೀಡಿದರು.

ಫಿಲ್ ಸಾಲ್ಟ್ 87 ರನ್ ಗಳ ಇನಿಂಗ್ಸ್ ಆಡಿ ತಂಡದ ಗೆಲುವಿನ ಪ್ರಮುಖ ಪಾತ್ರವಹಿಸಿದರು. ರಿಲೆ ರುಸ್ಸೋ ಔಟಾಗದೆ 35 ರನ್ ಗಳಿಸಿದರು. ಅಕ್ಷರ್ ಪಟೇಲ್ 8 ರನ್ ಗಳಿಸಿ ಅಜೇಯರಾಗಿ ಉಳಿದರು. ಹೇಜಲ್‌ವುಡ್, ಹರ್ಷಲ್ ಪಟೇಲ್ ಮತ್ತು ಕರ್ಣ್ ಶರ್ಮಾ ತಲಾ ಒಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನ ಟಾಸ್ ಗೆದ್ದ ಆರಂಭಿಕ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಆಕ್ರಮಣಕಾರಿ ಆರಂಭ ನೀಡಿದರು. 10 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 79 ರನ್ ಗಳಿಸಿತು. ಈ ವೇಳೆ ಕೊಹ್ಲಿ 7 ಸಾವಿರ ರನ್ ಪೂರೈಸಿದರು. ಫಾಫ್ ಡು ಪ್ಲೆಸಿಸ್ 45 ರನ್ ಗಳಿಸಿದರು. ಕೊಹ್ಲಿ 55 ರನ್ ಗಳಿಸಿ ಔಟಾದರು. ಮ್ಯಾಕ್ಸ್‌ವೆಲ್ ಶೂನ್ಯಕ್ಕೆ ಔಟಾದರು.

ಲೊಮ್ರೊರ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಅವರು 29 ಎಸೆತಗಳಲ್ಲಿ ಅಜೇಯ 54 ರನ್ ಗಳಿಸಿದರು. ಕಾರ್ತಿಕ್ 11 ರನ್ ಗಳಿಸಿದರು. ಮಿಚೆಲ್ ಮಾರ್ಷ್ ಎರಡು ವಿಕೆಟ್ ಪಡೆದರು. ಮುಖೇಶ್ ಕುಮಾರ್ ಮತ್ತು ಖಲೀಲ್ ಅಹ್ಮದ್ ತಲಾ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT