ಯಜುವೇಂದ್ರ ಚಹಾಲ್ 
ಕ್ರಿಕೆಟ್

ಐಪಿಎಲ್‌ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಬರೆದ ಯುಜ್ವೇಂದ್ರ ಚಹಾಲ್!

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. 

ನವದೆಹಲಿ: ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. 

ಐಪಿಎಲ್ ಆವೃತ್ತಿಯ 16ನೇ ಋತುವಿನ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸ್ಪಿನ್ನರ್ ಚಹಾಲ್ ನಾಲ್ಕು ವಿಕೆಟ್ ಪಡೆದರು. ಇದರೊಂದಿಗೆ ಚಹಲ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

32ರ ಹರೆಯದ ಚಹಾಲ್ ಕೆಕೆಆರ್ ನಾಯಕ ನಿತೀಶ್ ರಾಣಾ ಅವರನ್ನು ಔಟ್ ಮಾಡಿದ ತಕ್ಷಣ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದರು. ನಿತೀಶ್ ಸ್ಪಿನ್ನರ್ ಚಹಾಲ್ ಅವರ 184ನೇ ಬಲಿಯಾದರು. ಈ ಮೂಲಕ ಡ್ವೇನ್ ಬ್ರಾವೋ ಅವರನ್ನು ಹಿಂದಿಕ್ಕಿ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಯುಜುವೇಂದ್ರ ಚಹಾಲ್ 143 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಬ್ರಾವೋ 161 ಪಂದ್ಯಗಳಲ್ಲಿ 183 ವಿಕೆಟ್ ಪಡೆದಿದ್ದಾರೆ.

ನಿತೀಶ್ ರಾಣಾ ನಂತರ, ಚಹಾಲ್ ವೆಂಕಟೇಶ್ ಅಯ್ಯರ್, ಶಾರ್ದೂಲ್ ಠಾಕೂರ್ ಮತ್ತು ರಿಂಕು ಸಿಂಗ್ ಅವರನ್ನು ಔಟ್ ಮಾಡಿದರು. ಅವರು ತಮ್ಮ 4 ಓವರ್‌ಗಳಲ್ಲಿ 25 ರನ್‌ಗಳಿಗೆ 4 ವಿಕೆಟ್ ಪಡೆದರು.

ಚಹಾಲ್ ಪ್ರಸಕ್ತ ಐಪಿಎಲ್ ಋತುವಿನಲ್ಲೂ ತಮ್ಮ ಬೌಲಿಂಗ್ ಮೂಲಕ ಆಕ್ರಮಣಕಾರಿಯಾಗಿ ಗುರುತಿಸಿಕೊಂಡಿದ್ದಾರೆ. ಚಹಾಲ್ ಇದುವರೆಗೆ 21 ವಿಕೆಟ್‌ಗಳನ್ನು ತಮ್ಮ ಹೆಸರಿನಲ್ಲಿ ಪಡೆದಿದ್ದಾರೆ. ಈ ಋತುವಿನಲ್ಲಿ ಗರಿಷ್ಠ ವಿಕೆಟ್ ಪಡೆಯುವಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ. ಅವರು ಮೊಹಮ್ಮದ್ ಶಮಿ, ರಶೀದ್ ಖಾನ್ ಮತ್ತು ತುಷಾರ್ ದೇಶಪಾಂಡೆ ಅವರನ್ನು ಹಿಂದಿಕ್ಕಿದ್ದಾರೆ. ಈ ಮೂವರ ತಲಾ 19-19 ವಿಕೆಟ್ ಪಡೆದಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್
187 - ಯುಜ್ವೇಂದ್ರ ಚಹಾಲ್ (143 ಪಂದ್ಯಗಳು)
183 – ಡ್ವೇನ್ ಬ್ರಾವೋ (161)
174 – ಪಿಯೂಷ್ ಚಾವ್ಲಾ (176)
172 – ಅಮಿತ್ ಮಿಶ್ರಾ (160)
171 – ರವಿಚಂದ್ರನ್ ಅಶ್ವಿನ್ (196)
171  - ಲಸಿತ್ ಮಾಲಿಂಗ (122)

ಐಪಿಎಲ್ 2023ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ
ಯುಜ್ವೇಂದ್ರ ಚಹಾಲ್ (ರಾಜಸ್ಥಾನ್ ರಾಯಲ್ಸ್) - 21 ವಿಕೆಟ್
ಮೊಹಮ್ಮದ್ ಶಮಿ (ಗುಜರಾತ್ ಟೈಟಾನ್ಸ್) - 19 ವಿಕೆಟ್
ರಶೀದ್ ಖಾನ್ (ಗುಜರಾತ್ ಟೈಟಾನ್ಸ್) - 19 ವಿಕೆಟ್
ತುಷಾರ್ ದೇಶಪಾಂಡೆ (ಚೆನ್ನೈ ಸೂಪರ್ ಕಿಂಗ್ಸ್) - 19 ವಿಕೆಟ್
ಪಿಯೂಷ್ ಚಾವ್ಲಾ (ಮುಂಬೈ ಇಂಡಿಯನ್ಸ್) - 17 ವಿಕೆಟ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT