ಮುಂಬೈ ವಿರುದ್ಧ ಲಖ್ನೌ ತಂಡಕ್ಕೆ 5 ರನ್ ಗಳ ರೋಚಕ ಜಯ- 
ಕ್ರಿಕೆಟ್

ಮುಂಬೈ ವಿರುದ್ಧ ಲಖ್ನೌ ತಂಡಕ್ಕೆ 5 ರನ್ ಗಳ ರೋಚಕ ಜಯ- ಆರ್ ಸಿಬಿ ಪ್ಲೇ ಆಫ್ ಕನಸು ಕಮರುವ ಸಾಧ್ಯತೆ! 

ಲಖನೌ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ, ಲಖನೌ ಜೈಂಟ್ಸ್ 5 ವಿಕೆಟ್ ಗಳ ರೋಚಕ ಜಯ ಗಳಿಸಿದೆ.

ಲಖನೌ: ಲಖನೌ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ, ಲಖನೌ ಜೈಂಟ್ಸ್ 5 ವಿಕೆಟ್ ಗಳ ರೋಚಕ ಜಯ ಗಳಿಸಿದೆ.
 
ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಲಖ್ನೌ ತಂಡ ಪ್ಲೇ ಆಫ್ ಹಾದಿ ಸುಗಮವಾಗಿದ್ದರೆ, ರಾಯಲ್ ಚಾಲೆಂಜರ್ಸ್ ತಂಡದ ಪ್ಲೇ ಆಫ್ ಕನಸಿಗೆ ತಣ್ಣೀರು ಬೀಳುವ ಸಾಧ್ಯತೆ ಇದೆ. ಮಾರ್ಕಸ್ ಸ್ಟೋಯ್ನಿಸ್ (Marcus Stoinis) ಅಬ್ಬರದ ಬ್ಯಾಟಿಂಗ್ ಹಾಗೂ ಉತ್ತಮ ಬೌಲಿಂಗ್ ಲೈನ್ ನ ಸಹಕಾರದಿಂದ ಲಖನೌ ತಂಡ ಜಯಗಳಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ 3 ವಿಕೆಟ್‌ ನಷ್ಟಕ್ಕೆ 177 ರನ್‌ ಕಲೆಹಾಕಿತ್ತು.  178 ರನ್‌ ಗುರಿ ಪಡೆದ ಮುಂಬೈ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿ ಸೋಲೊಪ್ಪಿಕೊಂಡಿತು. ರೋಚಕ ಪಂದ್ಯದಲ್ಲಿ ಕೊನೆಯ 2 ಓವರ್ ಗಳಿರುವಾಗ ಮುಂಬೈ ತಂಡಕ್ಕೆ ಗೆಲ್ಲಲು 30 ರನ್ ಗಳು ಅಗತ್ಯವಿತ್ತು. 19 ನೇ ಓವರ್ ನಲ್ಲಿ 19 ರನ್ ಪಡೆಯುವಲ್ಲಿ ಯಶಸ್ವಿಯಾದ ಮುಂಬೈ ತಂಡ ಕೊನೆಯ ಓವರ್‌ನಲ್ಲಿ ಟಿಮ್‌ ಡೇವಿಡ್‌ ಹಾಗೂ ಕ್ಯಾಮರೂನ್‌ ಗ್ರೀನ್‌ ಎಡವಟ್ಟಿನಿಂದಾಗಿ ಕೇವಲ 5 ರನ್ ಮಾತ್ರ ಗಳಿಸಲು ಸಾಧ್ಯವಾಯಿತು. ಕೊನೆಗೆ ಮುಂಬೈ 5 ರನ್‌ಗಳಿಂದ ಸೋಲು ಕಂಡಿತು.

ಲಕ್ನೋ ಪರ ಬೌಲಿಂಗ್‌ ವಿಭಾಗದಲ್ಲಿ ರವಿ ಬಿಷ್ಣೋಯಿ, ಯಶ್‌ ಠಾಕೂರ್‌ ತಲಾ 2 ವಿಕೆಟ್‌ ಪಡೆದರೆ, ಮೊಹ್ಸಿನ್‌ ಖಾನ್‌ 1 ವಿಕೆಟ್‌ ಪಡೆದರು. ಬ್ಯಾಟಿಂಗ್ ವಿಭಾಗದಲ್ಲಿ ಕೃನಾಲ್‌ ಪಾಂಡ್ಯ ಹಾಗೂ ಮಾರ್ಕಸ್‌ ಸ್ಟೋಯ್ನಿಸ್‌ ಜೋಡಿ 59 ಎಸೆತಗಳಲ್ಲಿ 82 ರನ್‌ ಗಳಿಸಿತು. ಮುಂಬೈ ಪರ ಜೇಸನ್‌ ಬೆಹ್ರೆನ್‌ಡ್ರೋಫ್‌ 30 ರನ್‌ ನೀಡಿ 2 ವಿಕೆಟ್‌  ಪಡೆದರೆ, ಪಿಯೂಷ್‌ ಚಾವ್ಲಾ 26 ರನ್‌ ನೀಡಿ 1 ವಿಕೆಟ್‌ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT