ಸಿಎಸ್ ಕೆ ತಂಡದ ಆಟಗಾರರು 
ಕ್ರಿಕೆಟ್

ಐಪಿಎಲ್ 2023: ಡೆಲ್ಲಿ ವಿರುದ್ಧ 77 ರನ್ ಗಳ ಗೆಲುವು, ಪ್ಲೇ‌‌ಆಫ್‌‌ಗೆ ಅರ್ಹತೆ ಪಡೆದ 2ನೇ ತಂಡ ಸಿಎಸ್ ಕೆ!

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ 67 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 77 ರನ್ ಗಳಿಂದ ಮಣಿಸಿದ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್  ಪ್ಲೇಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಿ ಹೊರಹೊಮ್ಮಿತು. 

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ 67 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 77 ರನ್ ಗಳಿಂದ ಮಣಿಸಿದ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್  ಪ್ಲೇಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಿ ಹೊರಹೊಮ್ಮಿತು. 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿದರು. ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ 79, ಡೇವೊನ್ ಕಾನ್ವೇ 87 ರನ್ ಗಳಿಸುವ ಮೂಲಕ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ನಂತರ ಬಂದ ಶಿವಂ ದುಬೆ 22 ರನ್ ಗಳಿಸಿದರೆ ನಾಯಕ ಎಂಎಸ್ ಧೋನಿ ಅಜೇಯ 5, ರವೀಂದ್ರ ಜಡೇಜಾ ಅಜೇಯ 20 ರನ್ ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಗೆ 224 ರನ್ ಗಳ ಗೆಲುವಿನ ಗುರಿ ನೀಡಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ  ಖಲೀಲ್ ಅಹ್ಮದ್, ಅನ್ರೀಚ್ ನಾರ್ಟೋಜ್, ಚೇತನ್ ಸಕಾರಿಯಾ ತಲಾ ಒಂದೊಂದು ವಿಕೆಟ್ ಪಡೆದರು. 224 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್  ಪರ ಪೃಥ್ವಿ ಶಾ 5 ರನ್ ಗಳಿಗೆ ಔಟಾದರೆ, ಡೇವಿಡ್ ವಾರ್ನರ್ 86, ಯಶ್ ದುಲ್ 13, ಅಕ್ಸರ್ ಪಟೇಲ್ 15 ರನ್ ಗಳಿಸಿದರು.

ಉಳಿದ ಯಾವುದೇ ಆಟಗಾರರು ಎರಡಂಕಿ ದಾಟುವಲ್ಲಿ ವಿಫಲರಾದರು. ಇದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 77 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ  ಪ್ಲೇಆಫ್‌ಗೆ ಅರ್ಹತೆ ಪಡೆಯಿತು. ಗುಜರಾತ್ ಟೈಟಾನ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!