ಶುಬ್ಮನ್‌ ಗಿಲ್‌ 
ಕ್ರಿಕೆಟ್

ಐಪಿಎಲ್ ಟೂರ್ನಿಯಿಂದ ಆರ್​ಸಿಬಿ ಹೊರಕ್ಕೆ, ಪ್ಲೇಆಪ್​ಗೆ ಲಗ್ಗೆಯಿಟ್ಟ ಮುಂಬೈ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್ ತಂಡ ಶುಬ್ಮನ್‌ ಗಿಲ್‌ ಅವರ ಶತಕದ ನೆರವಿನಿಂದ ಆರ್ ಸಿಬಿ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್ ತಂಡ ಶುಬ್ಮನ್‌ ಗಿಲ್‌ ಅವರ ಶತಕದ ನೆರವಿನಿಂದ ಆರ್ ಸಿಬಿ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಆರ್‌ಸಿಬಿ ಟೂರ್ನಿಯಿಂದ ಹೊರಬಿದ್ದಿದ್ದು, ಮುಂಬೈ ಪ್ಲೇ ಆಫ್‌ ಪ್ರವೇಶಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ, ವಿರಾಟ್ ಕೊಹ್ಲಿಯ ಶತಕದ ನೆರವಿನೊಂದಿಗೆ ನಿಗದಿತ 20 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 197 ರನ್ ಗಳ ಬೃಹತ್ ಮೊತ್ತ ಸೇರಿಸಿತು.

ಗೆಲುವಿಗೆ 198 ರನ್ ಗಳ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ನಿಗದಿತ 19.1 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ198 ರನ್​ ಗಳಿಸುವ ಮೂಲಕ 6 ವಿಕೆಟ್​ಗಳ ಜಯ ದಾಖಲಿಸಿತು. ಈ ಮೂಲಕ ಆರ್​ಸಿಬಿ ಪ್ಲೇಆಫ್​ನಿಂದ ಹೊರಬಿದ್ದಿದ್ದು, ಮುಂಬೈ ಇಂಡಿಯನ್ಸ್ ನಾಲ್ಕನೇ ತಂಡವಾಗಿ ಪ್ಲೇಆಫ್​ಗೆ ಲಗ್ಗೆ ಇಟ್ಟಿದೆ.

ಆರಂಭದಲ್ಲೇ ವೃದ್ಧಿಮಾನ್ ಸಾಹಾ ವಿಕೆಟ್‌ ಕಳೆದುಕೊಂಡ ಗುಜರಾತ್‌ ತಂಡಕ್ಕೆ ಶುಬ್ಮನ್ ಗಿಲ್ ಮತ್ತು ವಿಜಯ್‌ ಶಂಕರ್‌ ನಿರಾಸೆ ಮಾಡಲಿಲ್ಲ. ಇವರಿಬ್ಬರೂ ಶತಕದ ಜೊತೆಯಾಟವಾಡಿದರು. ಇದರ ನಡುವೆ ಗಿಲ್‌ ಮತ್ತು ಶಂಕರ್‌ ಇಬ್ಬರೂ ಒಬ್ಬರ ಬಳಿಕ ಮತ್ತೊಬ್ಬರಂತೆ ಅರ್ಧಶತಕದ ಗಡಿ ದಾಟಿದರು.

ಈಗ ಲೀಗ್​ ಹಂತದ ಎಲ್ಲಾ ಪಂದ್ಯಗಳು ಅಂತ್ಯಗೊಂಡಿದ್ದು, ಮೇ 23ರಿಂದ ಐಪಿಎಲ್ 2023 ಪ್ಲೇಆಫ್​ ಪಂದ್ಯಗಳು ಆರಂಭವಾಗಲಿದೆ. ಇದರಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್​ ಟೈಟನ್ಸ್ ಮತ್ತು ಚೆನ್ನೈ ಸೂಪರ್​ ಕಿಂಗ್ಸ್ ತಂಡಗಳು ಮೊದಲ ಪ್ಲೇಆಫ್​ ಪಂದ್ಯದಲ್ಲಿ ಸೆಣಸಾಡಲಿದೆ. ಬಳಿಕ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿದ್ದು, ಮೊದಲ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಡಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT