ಶುಬ್ಮನ್‌ ಗಿಲ್‌ 
ಕ್ರಿಕೆಟ್

ಐಪಿಎಲ್ ಟೂರ್ನಿಯಿಂದ ಆರ್​ಸಿಬಿ ಹೊರಕ್ಕೆ, ಪ್ಲೇಆಪ್​ಗೆ ಲಗ್ಗೆಯಿಟ್ಟ ಮುಂಬೈ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್ ತಂಡ ಶುಬ್ಮನ್‌ ಗಿಲ್‌ ಅವರ ಶತಕದ ನೆರವಿನಿಂದ ಆರ್ ಸಿಬಿ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್ ತಂಡ ಶುಬ್ಮನ್‌ ಗಿಲ್‌ ಅವರ ಶತಕದ ನೆರವಿನಿಂದ ಆರ್ ಸಿಬಿ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಆರ್‌ಸಿಬಿ ಟೂರ್ನಿಯಿಂದ ಹೊರಬಿದ್ದಿದ್ದು, ಮುಂಬೈ ಪ್ಲೇ ಆಫ್‌ ಪ್ರವೇಶಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ, ವಿರಾಟ್ ಕೊಹ್ಲಿಯ ಶತಕದ ನೆರವಿನೊಂದಿಗೆ ನಿಗದಿತ 20 ಓವರ್​ಗೆ 2 ವಿಕೆಟ್​ ನಷ್ಟಕ್ಕೆ 197 ರನ್ ಗಳ ಬೃಹತ್ ಮೊತ್ತ ಸೇರಿಸಿತು.

ಗೆಲುವಿಗೆ 198 ರನ್ ಗಳ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ನಿಗದಿತ 19.1 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ198 ರನ್​ ಗಳಿಸುವ ಮೂಲಕ 6 ವಿಕೆಟ್​ಗಳ ಜಯ ದಾಖಲಿಸಿತು. ಈ ಮೂಲಕ ಆರ್​ಸಿಬಿ ಪ್ಲೇಆಫ್​ನಿಂದ ಹೊರಬಿದ್ದಿದ್ದು, ಮುಂಬೈ ಇಂಡಿಯನ್ಸ್ ನಾಲ್ಕನೇ ತಂಡವಾಗಿ ಪ್ಲೇಆಫ್​ಗೆ ಲಗ್ಗೆ ಇಟ್ಟಿದೆ.

ಆರಂಭದಲ್ಲೇ ವೃದ್ಧಿಮಾನ್ ಸಾಹಾ ವಿಕೆಟ್‌ ಕಳೆದುಕೊಂಡ ಗುಜರಾತ್‌ ತಂಡಕ್ಕೆ ಶುಬ್ಮನ್ ಗಿಲ್ ಮತ್ತು ವಿಜಯ್‌ ಶಂಕರ್‌ ನಿರಾಸೆ ಮಾಡಲಿಲ್ಲ. ಇವರಿಬ್ಬರೂ ಶತಕದ ಜೊತೆಯಾಟವಾಡಿದರು. ಇದರ ನಡುವೆ ಗಿಲ್‌ ಮತ್ತು ಶಂಕರ್‌ ಇಬ್ಬರೂ ಒಬ್ಬರ ಬಳಿಕ ಮತ್ತೊಬ್ಬರಂತೆ ಅರ್ಧಶತಕದ ಗಡಿ ದಾಟಿದರು.

ಈಗ ಲೀಗ್​ ಹಂತದ ಎಲ್ಲಾ ಪಂದ್ಯಗಳು ಅಂತ್ಯಗೊಂಡಿದ್ದು, ಮೇ 23ರಿಂದ ಐಪಿಎಲ್ 2023 ಪ್ಲೇಆಫ್​ ಪಂದ್ಯಗಳು ಆರಂಭವಾಗಲಿದೆ. ಇದರಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್​ ಟೈಟನ್ಸ್ ಮತ್ತು ಚೆನ್ನೈ ಸೂಪರ್​ ಕಿಂಗ್ಸ್ ತಂಡಗಳು ಮೊದಲ ಪ್ಲೇಆಫ್​ ಪಂದ್ಯದಲ್ಲಿ ಸೆಣಸಾಡಲಿದೆ. ಬಳಿಕ 2ನೇ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿದ್ದು, ಮೊದಲ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಡಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

ಕಾಂಗ್ರೆಸ್ ಸರ್ಕಾರ ಪತನಗೊಂಡರೆ, ಡಿಕೆಶಿಗೆ ಬೆಂಬಲ ಕೊಡಲು BJP ಸಿದ್ಧ: ಡಿ.ವಿ.ಸದಾನಂದ ಗೌಡ

SIR ಒತ್ತಡ: ಮದುವೆಗೆ ಒಂದು ದಿನ ಮೊದಲು ಆತ್ಮಹತ್ಯೆಗೆ ಶರಣಾದ ಯುಪಿ ಸಿಬ್ಬಂದಿ!

SCROLL FOR NEXT