ವಿರಾಟ್ ಕೊಹ್ಲಿ 
ಕ್ರಿಕೆಟ್

ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು; ಆರ್‌ಸಿಬಿ ಪ್ಲೇಆಫ್ ಕನಸು ಭಗ್ನ, ಹತಾಶೆಯಿಂದ ಕಿಂಗ್ ಕೊಹ್ಲಿ ಮಾಡಿದ್ದೇನು? 

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ಆರು ವಿಕೆಟ್‌ಗಳ ಸೋಲು ಕಂಡ ಆರ್‌ಸಿಬಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರಿಂದ ಹೊರಬಿದ್ದಿದ್ದಿದೆ. 

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ ಆರು ವಿಕೆಟ್‌ಗಳ ಸೋಲು ಕಂಡ ಆರ್‌ಸಿಬಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರಿಂದ ಹೊರಬಿದ್ದಿದ್ದಿದೆ. 

ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದ ಆರ್‌ಸಿಬಿ ಜಿಟಿ ಎದುರಿಗೆ ಮುಗ್ಗರಿಸಿದ್ದು, ಐದು ಬಾರಿ ಐಪಿಎಲ್ ಕಪ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಪ್ಲೇಆಫ್‌ಗೆ ಲಗ್ಗೆ ಇಡಲು ಅವಕಾಶ ಮಾಡಿಕೊಟ್ಟಿತು. ಒಂದು ವೇಳೆ ಆರ್‌ಸಿಬಿ ಗೆದ್ದಿದ್ದರೆ ಉತ್ತಮ ರನ್‌ ರೇಟ್ ಹೊಂದಿದ್ದ ಕಾರಣ ಪ್ಲೇಆಫ್‌ಗೆ ಹೋಗುವ ಅವಕಾಶ ಸಿಗುತ್ತಿತ್ತು.

ಆರ್‌ಸಿಬಿಯ ಸೋಲಿನ ನಂತರ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ತೀವ್ರ ನಿರಾಶೆಯಲ್ಲಿ ಮುಳುಗಿದ್ದಾರೆ. ಜಿಟಿ ಬ್ಯಾಟರ್ ವಿಜಯ್ ಶಂಕರ್ ಅವರ ಬಾಲನ್ನು ಕ್ಯಾಚ್ ಹಿಡಿಯುವ ವೇಳೆ ಗಾಯಗೊಂಡು ಡಗೌಟ್‌ನಲ್ಲಿ ಕುಳಿತಿದ್ದರು. ಆರ್‌ಸಿಬಿ 6 ವಿಕೆಟ್ ಸೋಲು ಕಂಡ ಬಳಿಕ ಹತಾಶೆ ಮತ್ತು ನಿರಾಶೆಯಲ್ಲಿ ಮುಳುಗಿದ ಕೊಹ್ಲಿ, ಪೆವಿಲಿಯನ್‌ನಲ್ಲಿ ನೀರಿನ ಬಾಟಲಿಯನ್ನು ಎಸೆಯುವ ಮೂಲಕ ತಮ್ಮ ಭಾವನೆಗಳನ್ನು ಹೊರಹಾಕಿದರು.

ಈಮಧ್ಯೆ, ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ಅಬ್ಬರದ ಆಟವಾಡಿದರು. ಸತತ ಎರಡನೇ ಬಾರಿಗೆ ಶತಕ ಗಳಿಸುವ ಮೂಲಕ ಆರ್‌ಸಿಬಿಗೆ ನೆರವಾದರು. ಆರ್‌ಸಿಬಿ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 197 ರನ್ ಕಲೆಹಾಕಿತು. ಕಿಂಗ್ ಕೊಹ್ಲಿ ಕೇವಲ 61 ಎಸೆತಗಳಲ್ಲಿ 101 ರನ್‌ಗಳನ್ನು ಪೇರಿಸಿ ಅಜೇಯರಾಗಿ ಉಳಿದರು. ಅವರ ಬ್ಯಾಟಿನಿಂದ 13 ಬೌಂಡರಿಗಳು ಮತ್ತು ಒಂದು ಸಿಕ್ಸರ್‌ ಸಿಡಿಯಿತು.

ಕೊಹ್ಲಿ ಅವರ ಈ ಶತಕವು ಈ ಐಪಿಎಲ್‌ ಆವೃತ್ತಿಯಲ್ಲಿ ದಾಖಲೆ ಬರೆದಿದ್ದು, ಅವರ ಮಾಜಿ ಸಹ ಆಟಗಾರ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮೀರಿಸಿದೆ. ಈ ಸಾಧನೆಯೊಂದಿಗೆ ಕೊಹ್ಲಿ ಇದೀಗ ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ಶತಕ (7) ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆದಾಗ್ಯೂ, ಕೊಹ್ಲಿಯ ವಿರೋಚಿತ ಪ್ರಯತ್ನದ ಹೊರತಾಗಿಯೂ, ಅಂತಿಮವಾಗಿ ಕೇವಲ 52 ಎಸೆತಗಳಲ್ಲಿ ಶುಭಮನ್ ಗಿಲ್ ಅವರ ಶತಕ ಗಮನ ಸೆಳೆಯಿತು. ಗಮನಾರ್ಹವಾಗಿ, ಇದು ಪಂದ್ಯಾವಳಿಯಲ್ಲಿ ಗಿಲ್ ಅವರ ಸತತ ಎರಡನೇ ಶತಕವಾಗಿದ್ದು, ಅವರ ಸಾಧನೆ ಶ್ಲಾಘನೆಗೆ ಕಾರಣವಾಯಿತು. ಓಪನರ್‌ನ ಅದ್ಭುತ ಇನಿಂಗ್ಸ್ ಜಿಟಿಯನ್ನು ಸಮಗ್ರ ಗೆಲುವಿನತ್ತ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಕೊಹ್ಲಿಯ ಶತಕವನ್ನು ಮರೆಮಾಚಿತು ಮತ್ತು ಆರ್‌ಸಿಬಿಯನ್ನು ಐಪಿಎಲ್‌ ಟೂರ್ನಿಯಿದ ಹೊರಹಾಕಲು ಕಾರಣವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT