ಅಂಬಾಟಿ ರಾಯುಡು 
ಕ್ರಿಕೆಟ್

ಐಪಿಎಲ್​ಗೆ ಚೆನ್ನೈ ಸ್ಟಾರ್​ ಪ್ಲೇಯರ್​ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ!

ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 

ಚೆನ್ನೈ: ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 

ಇಂದು ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಪಂದ್ಯವೇ ತಮ್ಮ ಅಂತಿಮ ಪಂದ್ಯ ಎಂದು ಹೇಳಿಕೊಂಡಿದ್ದಾರೆ. 

ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಫೈನಲ್ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ.  ಐಪಿಎಲ್ 2023 ಫೈನಲ್ ಪಂದ್ಯವು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಪಂದ್ಯಕ್ಕೂ ಮುನ್ನ ಸ್ಟಾರ್​ಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

ಆದರೆ ಇದಕ್ಕೂ ಮೊದಲೇ ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ ಮಾಡಿದ್ದು, ತಾವು ಐಪಿಎಲ್‌ಗೆ ನಿವೃತ್ತಿ ಘೋಷಿಸಿ ಇದೇ ತನ್ನ ಅಂತಿಮ ಪಂದ್ಯ ಎಂದು ಹೇಳಿಕೊಂಡಿದ್ದಾರೆ. ಟ್ವಿಟರ್ ಮೂಲಕ ಈ ಕುರಿತು ಮಾಹಿತಿ ನೀಡಿರುವ ಅಂಬಾಟಿ ರಾಯುಡು, '204 ಪಂದ್ಯಗಳು, 14 ಋತುಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಇದು ಸಾಕಷ್ಟು ದೊಡ್ಡ ಪ್ರಯಾಣವಾಗಿದೆ. ಇಂದು ರಾತ್ರಿಯ ಫೈನಲ್ ಐಪಿಎಲ್‌ನಲ್ಲಿ ನನ್ನ ಕೊನೆಯ ಪಂದ್ಯ ಎಂದು ನಾನು ನಿರ್ಧರಿಸಿದ್ದೇನೆ. ಈ ಶ್ರೇಷ್ಠ ಪಂದ್ಯಾವಳಿಯನ್ನು ಆಡುವುದನ್ನು ನಾನು ನಿಜವಾಗಿಯೂ ಆನಂದಿಸುತ್ತೇನೆ. ನಿಮಗೆಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ ನೋ ಯು ಟರ್ನ್ ಎಂದು ಹೇಳುವ ಮೂಲಕ ಈ ಹಿಂದಿನ ಊಹಾಪೋಹಗಳಿಗೂ ರಾಯುಡು ತೆರೆ ಎಳೆದಿದ್ದಾರೆ. ಈ ಹಿಂದೆಯೂ ಕೂಡ ಅಂಬಾಟಿ ರಾಯುಡು ನಿವೃತ್ತಿ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.

ರಾಯುಡು 2010 ರಲ್ಲಿ ಮುಂಬೈ ಇಂಡಿಯನ್ಸ್‌ ಪರ ಆಡುವ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು ಮತ್ತು 2017 ರ ಋತುವಿನವರೆಗೆ ಮುಂಬೈ ತಂಡಕ್ಕಾಗಿ ಆಡಿದರು. ರಾಯುಡು ಅವರು 2018ರ ಋತುವಿಗಾಗಿ ಸಿಎಸ್​ಕೆ ತಂಡ ಸೇರಿಕೊಂಡರು. ಟೀಂ ಇಂಡಿಯಾದ ಮಾಜಿ ಆಟಗಾರ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯರ್​ ಅಂಬಟಿ ರಾಯುಡು ಶೀಘ್ರದಲ್ಲೇ ಆಂಧ್ರಪ್ರದೇಶ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಅವರು ಶೀಘ್ರದಲ್ಲೇ ಎಪಿ ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಕ್ರಿಕೆಟ್ ನಿಂದ ರಾಯುಡು ವಿಮುಖರಾಗಿದ್ದಾರೆ ಎನ್ನುವ ವದಂತಿಗಳು ಕೂಡ ಕೇಳಿಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT