ವಿಶ್ವಕಪ್ ಟೂರ್ನಿಯಲ್ಲಿ ಸಿಡಿಮದ್ದು ಪ್ರದರ್ಶನ (ಸಂಗ್ರಹ ಚಿತ್ರ) 
ಕ್ರಿಕೆಟ್

ICC Cricket World Cup 2023: ವಾಯು ಮಾಲಿನ್ಯ ಎಫೆಕ್ಟ್: ದೆಹಲಿ, ಮುಂಬೈ ಪಂದ್ಯದ ವೇಳೆ ಪಟಾಕಿ ಸಿಡಿಸುವಂತಿಲ್ಲ!

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತದತ್ತ ಸಾಗಿದ್ದು, ಈ ನಡುವೆ ಪಂದ್ಯಾವಳಿಯಲ್ಲಿ ಸಿಡಿಮದ್ದು ಸಿಡಿಸುವಿಕೆಗೆ ಬ್ರೇಕ್ ಹಾಕಲಾಗಿದೆ.

ನವದೆಹಲಿ: ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತದತ್ತ ಸಾಗಿದ್ದು, ಈ ನಡುವೆ ಪಂದ್ಯಾವಳಿಯಲ್ಲಿ ಸಿಡಿಮದ್ದು ಸಿಡಿಸುವಿಕೆಗೆ ಬ್ರೇಕ್ ಹಾಕಲಾಗಿದೆ.

ಹೌದು.. ದೆಹಲಿ ಮತ್ತು ಮುಂಬೈ ನಗರಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಆ ಎರಡು ಮಹಾನಗರಗಳಲ್ಲಿ ನಡೆಯಲಿರುವ ವಿಶ್ವಕಪ್‍ನ ಬಾಕಿ ಉಳಿದ ಪಂದ್ಯಗಳಲ್ಲಿ ಪಟಾಕಿ ಸಿಡಿಸುವುದನ್ನು ಬಿಸಿಸಿಐ ನಿಷೇಧಿಸಿದೆ. ನ 6 ರಂದು ಬಾಂಗ್ಲಾದೇಶ-ಶ್ರೀಲಂಕಾ ಪಂದ್ಯವನ್ನು ಆಯೋಜಿಸಲು ದೆಹಲಿಯು ಕೇವಲ ಒಂದು ಪಂದ್ಯವನ್ನು ಮಾತ್ರ ಹೊಂದಿದೆ. ಆದರೆ ಮುಂಬೈನಲ್ಲಿ ನವೆಂಬರ್ 2 ಮತ್ತು 7 ರಂದು ಇನ್ನೂ ಎರಡು ಲೀಗ್ ಪಂದ್ಯಗಳು ಹಾಗು ನವೆಂಬರ್ 15 ರಂದು ಸೆಮಿಫೈನಲ್ ಅನ್ನು ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳಲ್ಲಿ ಪಟಾಕಿ ಅಥವಾ ಸಿಡಿಮದ್ದುಗಳನ್ನು ಬಳಕೆ ಮಾಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, 'ಬಿಸಿಸಿಐ ಪರಿಸರ ಕಾಳಜಿಗೆ ಸಂವೇದನಾಶೀಲವಾಗಿದೆ. ನಾನು ಈ ವಿಷಯವನ್ನು ಐಸಿಸಿಯೊಂದಿಗೆ ಔಪಚಾರಿಕವಾಗಿ ಮಾತನಾಡಿದ್ದೇವೆ ಮತ್ತು ಮುಂಬೈನಲ್ಲಿ ಯಾವುದೇ ಪಟಾಕಿ ಪ್ರದರ್ಶನವಿರುವುದಿಲ್ಲ, ಇದು ಮಾಲಿನ್ಯದ ಮಟ್ಟವನ್ನು ಹೆಚ್ಚಿಸಬಹುದು ಎಂದು ಹೇಳಿದ್ದಾರೆ.

ಮಂಡಳಿಯು ಪರಿಸರ ಸಮಸ್ಯೆಗಳನ್ನು ಎದುರಿಸಲು ಬದ್ಧವಾಗಿದೆ ಮತ್ತು ಯಾವಾಗಲೂ ನಮ್ಮ ಅಭಿಮಾನಿಗಳು ಮತ್ತು ಮಧ್ಯಸ್ಥಗಾರರ ಹಿತಾಸಕ್ತಿಗಳನ್ನು ಮುಂಚೂಣಿಯಲ್ಲಿ ಇರಿಸುತ್ತದೆ. ಮುಂಬೈ ಮತ್ತು ನವದೆಹಲಿ ಎರಡರಲ್ಲೂ ಗಾಳಿಯ ಗುಣಮಟ್ಟದ ಸುತ್ತಲಿನ ತುರ್ತು ಕಾಳಜಿಯನ್ನು ಬಿಸಿಸಿಐ ಒಪ್ಪಿಕೊಂಡಿದೆ. ಕ್ರಿಕೆಟ್‍ನ ಆಚರಣೆಗೆ ಸೂಕ್ತವಾದ ರೀತಿಯಲ್ಲಿ ನಾವು ಐಸಿಸಿ ವಿಶ್ವಕಪ್ ಅನ್ನು ಆಯೋಜಿಸಲು ಪ್ರಯತ್ನಿಸುತ್ತಿರುವಾಗ, ನಮ್ಮ ಎಲ್ಲಾ ಪಾಲುದಾರರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ನಮ್ಮ ಬದ್ಧತೆಯಲ್ಲಿ ನಾವು ದೃಢವಾಗಿರುತ್ತೇವೆ ಎಂದು ಹೇಳಿದೆ.

ದೆಹಲಿಯ ಗಾಳಿಯ ಗುಣಮಟ್ಟವು ವಾಯು ಗುಣಮಟ್ಟ ಸೂಚ್ಯಂಕದಲ್ಲಿ 372ರಷ್ಟಿದ್ದು, ಇದು ಅತ್ಯಂತ ಕಳಪೆ ವಿಭಾಗದಲ್ಲಿ ಉಳಿದಿದೆ. ದೆಹಲಿಯಲ್ಲಿ ಸತತ ಐದನೇ ದಿನವೂ ಗಾಳಿ ಗುಣಮಟ್ಟ ಅತ್ಯಂತ ಕಳಪೆ ವಿಭಾಗದಲ್ಲಿ ಮುಂದುವರೆದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT