ಭಾರತ ಕ್ರಿಕೆಟ್ ತಂಡ (ಸಂಗ್ರಹ ಚಿತ್ರ) 
ಕ್ರಿಕೆಟ್

ಲಂಕಾ ವಿರುದ್ಧ 302 ರನ್ ಗಳ ಜಯ: ವಿಶ್ವಕಪ್-2023 ಸೆಮಿಫೈನಲ್ಸ್ ಪ್ರವೇಶಿಸಿದ ಭಾರತ

ಮುಂಬೈ ನಲ್ಲಿ ನಡೆದ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಎದುರಾಳಿ ತಂಡ ಶ್ರೀಲಂಕಾ ವಿರುದ್ಧ ಬರೊಬ್ಬರಿ 302 ರನ್ ಗಳ ಜಯ ಗಳಿಸಿದೆ. 

ಮುಂಬೈ: ಮುಂಬೈ ನಲ್ಲಿ ನಡೆದ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಎದುರಾಳಿ ತಂಡ ಶ್ರೀಲಂಕಾ ವಿರುದ್ಧ ಬರೊಬ್ಬರಿ 302 ರನ್ ಗಳ ಜಯ ಗಳಿಸಿದೆ. 

ಈ ಗೆಲುವಿನ ಮೂಲಕ ಟೂರ್ನಿಯಲ್ಲಿ ಭಾರತ ತಂಡ ಸೆಮಿಫೈನಲ್ಸ್ ಪ್ರವೇಶಿಸಿದೆ. ಟಾಸ್ ನಂತರ ಶ್ರೀಲಂಕಾ, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ನಿಗದಿತ 50 ಓವರ್ ಗಳಲ್ಲಿ ಭಾರತ ಕ್ರಿಕೆಟ್ ತಂಡ 7 ವಿಕೆಟ್ ನಷ್ಟಕ್ಕೆ 357 ರನ್ ಗಳಿಸಿತು. 

ರನ್ ಚೇಸಿಂಗ್ ಗೆ ಇಳಿದ ಲಂಕಾ ತಂಡಕ್ಕೆ ಭಾರತದ ಬೌಲರ್ ಗಳಾದ ಮೊಹಮ್ಮದ್ ಸಿರಾ, ಮೊಹಮ್ಮದ್ ಶಮಿ ಮಾರಕವಾದರು. 

ಶ್ರೀಲಂಕಾ ತಂಡದ ಬ್ಯಾಟ್ಸ್ಮನ್ ಗಳು ಭಾರತದ ಬೌಲರ್ ಗಳನ್ನು ಎದುರಿಸಲು ಸಾಧ್ಯವಾಗದೇ ಕೇವಲ 19.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 55 ರನ್ ಗಳಿಗೆ ಸೋಲೊಪ್ಪಿಕೊಂಡಿತು. 

ಮೊಹಮ್ಮದ್ ಸಿರಾಜ್ 16 ರನ್ ನೀಡಿ 3 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 5 ವಿಕೆಟ್ ಪಡೆದು 18 ರನ್ ನೀಡಿ ಅತ್ಯುತ್ತಮ ಬೌಲರ್ ಗಳೆನಿಸಿದರು. ಎಲ್ಲಾ 7 ಪಂದ್ಯಗಳಲ್ಲೂ ಜಯಗಳಿಸಿರುವ ಭಾರತ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ತಂಡ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT