ಶುಭಮನ್ ಗಿಲ್-ಮೊಹಮ್ಮದ್ ಸಿರಾಜ್ 
ಕ್ರಿಕೆಟ್

ODI ICC Ranking: ಬಾಬರ್ ಅಜಂ ಹಿಂದಿಕ್ಕಿದ ಶುಭಮನ್ ಗಿಲ್ ನಂ.1 ಬ್ಯಾಟ್ಸ್‌ಮನ್, ಸಿರಾಜ್ ನಂ.1 ಬೌಲರ್!

ಭಾರತ ತಂಡದ ಭರವಸೆಯ ಯುವ ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಐಸಿಸಿಯ ಇತ್ತೀಚಿನ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ನಂಬರ್-1 ಸ್ಥಾನಕ್ಕೇರಿದೆ. ಶುಭ್‌ಮನ್ ಗಿಲ್ ಪಾಕ್ ನಾಯಕ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿದ್ದಾರೆ.

ನವದೆಹಲಿ: ಭಾರತ ತಂಡದ ಭರವಸೆಯ ಯುವ ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಐಸಿಸಿಯ ಇತ್ತೀಚಿನ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ನಂಬರ್-1 ಸ್ಥಾನಕ್ಕೇರಿದೆ. ಶುಭ್‌ಮನ್ ಗಿಲ್ ಪಾಕ್ ನಾಯಕ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿದ್ದಾರೆ.

ವಿಶ್ವಕಪ್‌ ಆರಂಭಕ್ಕೂ ಮುನ್ನ ಬಾಬರ್‌ ಅಜಂ ನಂಬರ್‌ ಒನ್‌ ಆಗಿದ್ದರೆ, ಶುಭಮನ್‌ ಗಿಲ್‌ ಡೆಂಗ್ಯೂ ಜ್ವರದಿಂದ ತಡವಾಗಿ ಬಂದಿದ್ದರು. ಒಂದೆಡೆ ಯುವ ಆರಂಭಿಕರು ರನ್ ಗಳಿಸಿದರೆ ಮತ್ತೊಂದೆಡೆ ಬಾಬರ್ ಅಜಮ್ ಅವರ ಬ್ಯಾಟ್‌ನಿಂದ ಬಹಳ ಕಷ್ಟಪಟ್ಟು ರನ್ ಗಳಿಸಿದರು. ಇಷ್ಟೇ ಅಲ್ಲ, ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ ಇನ್ನೂ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ನಂಬರ್ ಒನ್ ಸ್ಥಾನದಲ್ಲಿ ಉಳಿದಿದ್ದಾರೆ.

ಗಿಲ್ ಶ್ರೀಲಂಕಾ ವಿರುದ್ಧ 92 ರನ್‌ಗಳ ಇನ್ನಿಂಗ್ಸ್ ಆಡಿದರೆ, ದಕ್ಷಿಣ ಆಫ್ರಿಕಾ ವಿರುದ್ಧ 23 ರನ್ ಗಳಿಸಿದರು. ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ಆಡಿದ ಇನ್ನಿಂಗ್ಸ್ ಅವರು ನಂಬರ್ ಒನ್ ಆಗಲು ಸಹಾಯ ಮಾಡಿತು. ಈಗ ಅವರು 830 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಗಿಲ್ ಗಿಂತ 6 ಅಂಕ ಹಿಂದಿದ್ದಾರೆ. ಈ ಪಟ್ಟಿಯಲ್ಲಿ ಕ್ವಿಂಟನ್ ಡಿ ಕಾಕ್ ಮೂರನೇ ಸ್ಥಾನದಲ್ಲಿದ್ದಾರೆ. ಆದರೆ, ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಆಟಗಾರರ ನಡುವೆ ಸಾಕಷ್ಟು ವ್ಯತ್ಯಾಸವಿದೆ.

ಅಗ್ರ-10ರಲ್ಲಿ ಸ್ಥಾನ ಪಡೆದ ಭಾರತದ ಮೂವರು ಬ್ಯಾಟ್ಸ್‌ಮನ್‌ಗಳು
ವಿಶ್ವಕಪ್‌ನಲ್ಲಿ ರನ್ ಗಳಿಸುತ್ತಿರುವ ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಶುಭಮನ್ ಗಿಲ್ ಅವರೊಂದಿಗೆ ಅಗ್ರ 10 ರ್ಯಾಂಕಿಂಗ್‌ನಲ್ಲಿ ಸೇರಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ ಆರನೇ ಸ್ಥಾನದಲ್ಲಿದ್ದಾರೆ. ಇವರಿಬ್ಬರು ಬ್ಯಾಟಿಂಗ್ ಮಾಡುತ್ತಿರುವ ಶೈಲಿಯನ್ನು ನೋಡಿದರೆ, ಭವಿಷ್ಯದಲ್ಲಿ ಶ್ರೇಯಾಂಕವು ಸುಧಾರಿಸುವ ನಿರೀಕ್ಷೆಯಿದೆ. ಅವರು ಅಗ್ರ ಶ್ರೇಯಾಂಕದಲ್ಲಿ ಸೇರ್ಪಡೆಗೊಂಡಿರುವುದು ಭಾರತೀಯ ಬ್ಯಾಟ್ಸ್‌ಮನ್‌ಗಳು ಯಾವ ಮಟ್ಟದಲ್ಲಿ ಪ್ರದರ್ಶನ ನೀಡುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ 'ಇರಾನ್ ದಾಳಿ' ಬೆದರಿಕೆ: ಕತಾರ್‌ನ ಅಮೆರಿಕ ಸೇನಾ ನೆಲೆಯಿಂದ ಕೆಲವು ಸಿಬ್ಬಂದಿ ಸ್ಥಳಾಂತರ!

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಬಲ ಸ್ಫೋಟ: ಮೂವರು ಸಾವು, ಇಬ್ಬರು ಗಂಭೀರ ಗಾಯ

ರಾಜ್‌ಕೋಟ್​ ಪಂದ್ಯ: ಬೌಲರ್ ಗಳ ಬೆಂಡೆತ್ತಿದ ಕೀವಿಸ್ ಪಡೆ; ಭಾರತಕ್ಕೆ ಹೀನಾಯ ಸೋಲು!

ಕೂಡಲೇ ಇರಾನ್ ತೊರೆಯಿರಿ: ಭಾರತೀಯ ನಾಗರಿಕರಿಗೆ 2ನೇ ಬಾರಿಗೆ ಸಲಹೆ!

ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ?: ಪ್ರಿಯಾಂಕ್ ಖರ್ಗೆ

SCROLL FOR NEXT