ಅಜ್ಜಿ ಮನೆಗೆ ಬಂದ ಕಿವೀಸ್ ಸ್ಟಾರ್ ಬ್ಯಾಟರ್ Rachin Ravindra 
ಕ್ರಿಕೆಟ್

ಬೆಂಗಳೂರು: ಅಜ್ಜಿ ಮನೆಗೆ ಬಂದ ಕಿವೀಸ್ ಸ್ಟಾರ್ ಬ್ಯಾಟರ್ Rachin Ravindra, ದೃಷ್ಟಿ ತೆಗೆದ ಹಿರಿಯ ಜೀವ! ವಿಡಿಯೋ ವೈರಲ್

ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ನ್ಯೂಜಿಲೆಂಡ್ ಸ್ಟಾರ್ ಬ್ಯಾಟರ್ ರಚಿನ್ ರವೀಂದ್ರ ಬೆಂಗಳೂರಿನಲ್ಲಿರುವ ಅವರ ಅಜ್ಜಿ ಮನೆಗೂ ಭೇಟಿ ನೀಡಿದ್ದು, ಈ ವೇಳೆ ಅವರ ಅಜ್ಜಿ ದೃಷ್ಟಿ ತೆಗೆಯುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರು: ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ನ್ಯೂಜಿಲೆಂಡ್ ಸ್ಟಾರ್ ಬ್ಯಾಟರ್ ರಚಿನ್ ರವೀಂದ್ರ ಬೆಂಗಳೂರಿನಲ್ಲಿರುವ ಅವರ ಅಜ್ಜಿ ಮನೆಗೂ ಭೇಟಿ ನೀಡಿದ್ದು, ಈ ವೇಳೆ ಅವರ ಅಜ್ಜಿ ದೃಷ್ಟಿ ತೆಗೆಯುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ನ್ಯೂಜಿಲೆಂಡ್​ಗೆ ಗುರುವಾರ ಬೆಂಗಳೂರಿನಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯವಿತ್ತು. ಇದಕ್ಕೂ ಮುನ್ನ ರಚಿನ್ ರವೀಂದ್ರ ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿಯ ಮನೆಗೆ ಭೇಟಿ ನೀಡಿದ್ದಾರೆ. ಇಲ್ಲಿ ಅವರ ಅಜ್ಜಿ ರಚಿನ್ ರನ್ನು ಕೂರಿಸಿ ದೃಷ್ಟಿ ತೆಗೆದಿದ್ದಾರೆ. ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯಲ್ಲಿ ಅವರ ಅಜ್ಜಿ ದೃಷ್ಟಿ ತೆಗೆದಿದ್ದು, ಈ ವೇಳೆ ರಚಿನ್ ಕೂಡ ಅಜ್ಜಿ ಮಾತಿಗೆ ಎದುರಾಡದೇ ಸುಮ್ಮನೇ ಕುಳಿತಿರುವ ವಿಡಿಯೋ ವೈರಲ್ ಆಗುತ್ತಿದೆ.

ಇನ್ನು ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ನ್ಯೂಜಿಲೆಂಡ್ ತಂಡದ ಪರ ಆಡುತ್ತಿರುವ ರಚಿನ್ ರವೀಂದ್ರ (Rachin Ravindra) ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಇವರು ಮೂಲತಃ ಭಾರತದವರು, ಅದರಲ್ಲೂ ಕನ್ನಡಿಗರು ಎಂಬುದು ಹೆಮ್ಮೆಯ ವಿಷಯ. ಈ ಬಾರಿಯ ವಿಶ್ವಕಪ್​ನಲ್ಲಿ ದಾಖಲೆ ಮೇಲೆ ದಾಖಲೆ ಬರೆದು ಮಿಂಚಿತ್ತಿರುವ ರಚಿನ್ ಅವರ ಕುಟುಂಬ ಈಗಲೂ ಬೆಂಗಳೂರಿನಲ್ಲೇ ಇದೆ. ರಚಿನ್ ಅವರು ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ ಅವರು 1990ರಲ್ಲಿ ನ್ಯೂಜಿಲೆಂಡ್​​ಗೆ ತೆರಳಿದ್ದರು. ಆ ಬಳಿಕ ಅಲ್ಲಿಯೇ ನೆಲೆಸಿದ್ದರು. 

ಇದೀಗ ರಚಿನ್ ರವೀಂದ್ರ ಕೂಡ ಅದೇ ನ್ಯೂಜಿಲೆಂಡ್ ಕ್ರಿಕೆಟ್ ತಂಡದಲ್ಲಿ ತಮ್ಮ ಭವಿಷ್ಯ ಕಟ್ಟಿಕೊಂಡಿದ್ದು, ಮಾತ್ರವಲ್ಲದೇ ತಂಡ ಸೇರಿಕೊಂಡ ಕೆಲವೇ ವರ್ಷಗಳಲ್ಲಿ ತಂಡದ ಸ್ಟಾರ್ ಬ್ಯಾಟರ್ ಆಗಿದ್ದಾರೆ. ಹಾಲಿ ವಿಶ್ವಕಪ್ ಟೂರ್ನಿಯಲ್ಲೂ ಭರ್ಜರಿ ಪ್ರದರ್ಶನ ತೋರುತ್ತಿರುವ ರಚಿನ್ ಈ ವರೆಗೂ 560 ರನ್ ಗಳ ಮೂಲಕ ಟೂರ್ನಿ ಗರಿಷ್ಠ ಸ್ಕೋರರ್ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT