ವೀರೇಂದ್ರ ಸೆಹ್ವಾಗ್ 
ಕ್ರಿಕೆಟ್

ಐಸಿಸಿ ಹಾಲ್ ಆಫ್ ಫೇಮ್ ಗೆ, ವೀರೇಂದ್ರ ಸೆಹ್ವಾಗ್, ಡಯಾನಾ ಎಡುಲ್ಜಿ, ಅರವಿಂದ ಡಿಸಿಲ್ವ ಸೇರ್ಪಡೆ

ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ನಿಂದಲೇ ಖ್ಯಾತಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಅಂತಾರಾಷ್ಟ್ಕೀಯ ಕ್ರಿಕೆಟ್ ಸಮಿತಿಯ  ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.

ನವದೆಹಲಿ: ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ನಿಂದಲೇ ಖ್ಯಾತಿಯಾಗಿದ್ದ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಅಂತಾರಾಷ್ಟ್ಕೀಯ ಕ್ರಿಕೆಟ್ ಸಮಿತಿಯ  ಹಾಲ್ ಆಫ್ ಫೇಮ್ ಗೌರವಕ್ಕೆ ಪಾತ್ರರಾಗಿದ್ದಾರೆ.

ಹೌದು.. ಶ್ರೀಲಂಕಾದ ಮಾಜಿ ಆಟಗಾರ ಅರವಿಂದ ಡಿಸಿಲ್ವ ಅವರೊಂದಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ವೀರೇಂದ್ರ ಸೆಹ್ವಾಗ್ ಹಾಗೂ ಡಯಾನಾ ಎಡುಲ್ಜಿ ಐಸಿಸಿ ಹಾಲ್ ಆಫ್ ಫೇಮ್ ಗೆ ಸೇರ್ಪಡೆಯಾಗಿದ್ದಾರೆ. ಡಯಾನಾ ಎಡುಲ್ಜಿ ಅವರು ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವೀರೇಂದ್ರ ಸೆಹ್ವಾಗ್ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ನಿಂದ ಎದುರಾಳಿ ಬೌಲರ್ ಗಳ ಪಾಲಿಗೆ ಸಿಂಹಸ್ವಪ್ನರಾಗಿದ್ದರು. ಏಕದಿನ, ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ನಿಂದ ಭಾರತ ತಂಡಕ್ಕೆ ಅವರು ಬಿರುಸಿನ ಆರಂಭ ನೀಡುತ್ತಿದ್ದರು. 

ಐಸಿಸಿಗೆ ಸೆಹ್ವಾಗ್ ಧನ್ಯವಾದ
ಐಸಿಸಿ ನಿರ್ಧಾರಕ್ಕೆ ಧನ್ಯವಾದ ಹೇಳಿರುವ ಸೆಹ್ವಾಗ್, ನನ್ನನ್ನು ಈ ಗೌರವಕ್ಕೆ ಸೇರ್ಪಡೆ ಮಾಡಿದ್ದಕ್ಕೆ ಐಸಿಸಿ ಹಾಗೂ ತೀರ್ಪುಗಾರರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ಸೆಹ್ವಾಗ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸೆಹ್ವಾಗ್, “ನನ್ನ ಜೀವನದ ಬಹು ದೊಡ್ಡ ಭಾಗವನ್ನು ನಾನು ಹೆಚ್ಚು ಇಷ್ಟಪಟ್ಟಿದ್ದ ಕ್ರಿಕೆಟ್ ಬಾಲನ್ನು ಹೊಡೆಯುವ ಕೆಲಸದಲ್ಲಿ ಕಳೆದಿದ್ದಕ್ಕೆ ನಾನು ಭಾರಿ ಆಭಾರಿಯಾಗಿದ್ದೇನೆ” ಎಂದು ಹೇಳಿದ್ದಾರೆ. 

ಎಡುಲ್ಜಿ ಸಂತಸ
ಇನ್ನು ತಮ್ಮನ್ನು ಐಸಿಸಿ ಹಾಲ್ ಆಫ್ ಫೇಮ್ ಗೌರವಕ್ಕೆ ಪರಿಗಣಿಸಿದ್ದಕ್ಕೆ ಭಾರತ ತಂಡದ ಪರವಾಗಿ 100ಕ್ಕಿಂತ ಹೆಚ್ಚು ವಿಕೆಟ್ ಗಳನ್ನು ಪಡೆದಿರುವ ಎಡಗೈ ಸಾಂಪ್ರದಾಯಿಕ ಬೌಲರ್ ಎಡುಲ್ಜಿ ಅವರೂ ಸಂತಸ ವ್ಯಕ್ತಪಡಿಸಿದ್ದಾರೆ.   “ಮೊದಲಿಗೆ ನನ್ನನ್ನು ಐಸಿಸಿ ಹಾಲ್ ಆಫ್ ಫೇಮ್ 2023 ಗೌರವಕ್ಕೆ ಸೇರ್ಪಡೆ ಮಾಡಿದ ಐಸಿಸಿ ಹಾಗೂ ತೀರ್ಪುಗಾರರಿಗೆ ನನ್ನ ಧನ್ಯವಾದ ಸಲ್ಲಿಸಲು ಬಯಸುತ್ತೇನೆ” ಎಂದು ಎಡುಲ್ಜಿ ಪ್ರತಿಕ್ರಿಯಿಸಿದ್ದಾರೆ.

“ವಿಶ್ವದಾದ್ಯಂತದ ಪುರುಷ ಮತ್ತು ಮಹಿಳಾ ಕ್ರಿಕೆಟ್ ಪಟುಗಳ ತಾರಾಪುಂಜಕ್ಕೆ ಪ್ರಪ್ರಥಮ ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರಳಾಗಿ ಸೇರ್ಪಡೆಯಾಗುತ್ತಿರುವುದು ನಿಜಕ್ಕೂ ನನ್ನ ಪಾಲಿಗೆ ದೊಡ್ಡ ಗೌರವವಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯಂತಹ ಸಂಘಟಿತ ಅಪರಾಧ ಜಾಲಗಳ ಮೇಲೆ '360 ಡಿಗ್ರಿ ದಾಳಿ': ಅಮಿತ್ ಶಾ

ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಯ ಯಶಸ್ಸು ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಕ್ರೋಶಕ್ಕೆ ಸಾಕ್ಷಿ: ಬಿ.ವೈ. ವಿಜಯೇಂದ್ರ

'ಕಠಿಣ ಶಿಕ್ಷೆಯಾಗಲಿ.. ಇಂತಹುದನ್ನು ಭಾರತ ನಿರ್ಲಕ್ಷಿಸಲ್ಲ': ಹಿಂದೂಗಳ ಹತ್ಯೆ ಕುರಿತು ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ!

ನಾಗ್ಪುರದಲ್ಲಿ ಕ್ರಿಸ್‌ಮಸ್ ಆಚರಣೆಯ ವೇಳೆ ಘರ್ಷಣೆ: ಒಬ್ಬ ಸಾವು

ನಮ್ಮ ಸಾಧನೆಗಳ ಕ್ರೆಡಿಟ್ ತೆಗೆದುಕೊಳ್ಳುವ ಮೂಲಕ ವೈಷ್ಣವ್ ಕರ್ನಾಟಕದ ಯಶಸ್ಸನ್ನು ಕದಿಯುತ್ತಿದ್ದಾರೆ: ಸಿದ್ದರಾಮಯ್ಯ

SCROLL FOR NEXT