ಐಶ್ವರ್ಯಾ ರೈ ಮತ್ತು ಅಬ್ದುಲ್ ರಜಾಕ್ (ಸಂಗ್ರಹ ಚಿತ್ರ) 
ಕ್ರಿಕೆಟ್

ಐಶ್ವರ್ಯಾ ರೈ ಕುರಿತು ಆಕ್ಷೇಪಾರ್ಹ ಹೇಳಿಕೆ: ವಿವಾದ ಬೆನ್ನಲ್ಲೇ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಕ್ಷಮೆಯಾಚನೆ!

ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್‌ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್‌ ರಜಾಕ್‌ ಅವರು ಇದೀಗ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.

ಇಸ್ಲಾಮಾಬಾದ್:‌ ಬಾಲಿವುಡ್‌ ನಟಿ ಐಶ್ವರ್ಯಾ ರೈ ಬಚ್ಚನ್‌ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್‌ ರಜಾಕ್‌ ಅವರು ಇದೀಗ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯನ್ನು ಟೀಕಿಸುವ ಭರದಲ್ಲಿ ಅನಗತ್ಯವಾಗಿ ಐಶ್ವರ್ಯ ರೈ ಅವರ ಹೆಸರು ಪ್ರಸ್ತಾಪ ಮಾಡಿದ ಅಬ್ದುಲ್‌ ರಜಾಕ್‌ ವಿರುದ್ಧ ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ, ವಿಡಿಯೊ ಪೋಸ್ಟ್‌ ಮಾಡಿ, ಕ್ಷಮೆಯಾಚಿಸಿದ್ದಾರೆ.

“ನಾನು ಅಬ್ದುಲ್‌ ರಜಾಕ್.‌ ಸುದ್ದಿಗೋಷ್ಠಿ ವೇಳೆ ಪಾಕಿಸ್ತಾನ ಕ್ರಿಕೆಟ್‌ ತರಬೇತಿ ಹಾಗೂ ಉದ್ದೇಶದ ಕುರಿತು ಮಾತನಾಡುತ್ತಿದ್ದೆ. ಆಗ ನಾನು ಬಾಯಿತಪ್ಪಿನಿಂದಾಗಿ ಐಶ್ವರ್ಯಾ ರೈ ಅವರ ಹೆಸರು ಪ್ರಸ್ತಾಪಿಸಿದೆ. ನಾನು ವೈಯಕ್ತಿಕವಾಗಿ ಅವರ ಕ್ಷಮೆ ಕೇಳುತ್ತೇನೆ. ನಾನು ಯಾರ ಭಾವನೆಗಳಿಗೂ ಧಕ್ಕೆ ತರುವ, ನೋವುಂಟು ಮಾಡುವ ಉದ್ದೇಶ ಹೊಂದಿಲ್ಲ. ನಾನು ಬೇರೆ ಉದಾಹರಣೆ ಕೊಡಬೇಕಿತ್ತು. ಆದರೆ, ಅಚಾತುರ್ಯದಿಂದ ನಟಿಯ ಹೆಸರು ಪ್ರಸ್ತಾಪವಾಯಿತು” ಎಂದು 27 ಸೆಕೆಂಡ್‌ಗಳ ವೀಡಿಯೊವನ್ನು ಅಬ್ದುಲ್‌ ರಜಾಕ್‌ ಪೋಸ್ಟ್‌ ಮಾಡಿದ್ದಾರೆ.

ಪಿಸಿಬಿಯ ಆಡಳಿತ ಮಂಡಳಿಯನ್ನು ಟೀಕಿಸುವಾಗ, ಅಬ್ದುಲ್ ರಜಾಕ್ ಅವರು, ಐಶ್ವರ್ಯಾ ರೈ ಅವರನ್ನು ಉದಾಹರಣೆಯಾಗಿ ಬಳಸಿದ್ದರು.

ನಾನು ಐಶ್ವರ್ಯಾ ರೈಯನ್ನು ಮದುವೆಯಾಗುವುದರಿಂದ ಉತ್ತಮ ನಡತೆ ಮತ್ತು ಸದ್ಗುಣಶೀಲ ಮಕ್ಕಳು ಹುಟ್ಟುತ್ತವೆ ಎಂಬ ನಿರೀಕ್ಷೆ ಸುಳ್ಳು ಎಂಬ ಅಧಿಕಪ್ರಸಂಗದ ಮಾತನ್ನು ಹೇಳಿದ್ದರು. ಪಾಕಿಸ್ತಾನ ಕ್ರಿಕೆಟ್​ ಮಂಡಳಿಯೂ ಇದೇ ರೀತಿ ಒಳ್ಳೆಯ ಮಕ್ಕಳನ್ನು ಹುಟ್ಟಿಸುವ ಹುಸಿ ನಿರೀಕ್ಷೆಯಲ್ಲಿದೆ. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT