ಸಂಗ್ರಹ ಚಿತ್ರ 
ಕ್ರಿಕೆಟ್

ಇಸ್ಲಾಂ ಸೇರಲು ಮನಸ್ಸು ಮಾಡಿದ್ದರು ಹರ್ಭಜನ್ ಸಿಂಗ್: ಇಂಜಮಾಮ್ ಹೇಳಿಕೆಗೆ ಭಜ್ಜಿ ತೀವ್ರ ಕಿಡಿ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರವಾಗುವ ಹತ್ತಿರವಾಗುತ್ತಿದ್ದರು ಎಂಬ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್‌ ಹೇಳಿಕೆಗೆ ಭಜ್ಜಿ ತೀವ್ರವಾಗಿ ಕಿಡಿಕಾರಿದ್ದಾರೆ.

ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಇಸ್ಲಾಂಗೆ ಮತಾಂತರವಾಗುವ ಹತ್ತಿರವಾಗುತ್ತಿದ್ದರು ಎಂಬ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್‌ ಹೇಳಿಕೆಗೆ ಭಜ್ಜಿ ತೀವ್ರವಾಗಿ ಕಿಡಿಕಾರಿದ್ದಾರೆ.
    
ಸಾಮಾಜಿಕ ಜಾಲತಾಣವಾದ ಎಕ್ಸ್‌(ಟ್ವಿಟರ್‌)ನಲ್ಲಿ ಕಟು ಶಬ್ದಗಳಲ್ಲಿ ಪಾಕಿಸ್ತಾನದ ಮಾಜಿ ಆಯ್ಕೆ ಸಮಿತಿ ಮುಖ್ಯಸ್ಥ ಇಂಜಿಯನ್ನು ಹರ್ಭಜನ್ ಸಿಂಗ್ ಲೇವಡಿ ಮಾಡಿದ್ದಾರೆ.

ಇಂಜಮಾಮ್ ಉಲ್ ಹಕ್ ಅವರು ಮಾತನಾಡಿರುವ ವಿಡಿಯೋಗೆ ಎಕ್ಸ್‌ ಮೂಲಕವೇ ಪ್ರತಿಕ್ರಿಯೆ ನೀಡಿರುವ ಹರ್ಭಜನ್ ಸಿಂಗ್, "ಇವರು ಯಾವ ನಶೆಯಲ್ಲಿ ಮಾತನಾಡುತ್ತಿದ್ದಾರೆ ಅರ್ಥವಾಗುತ್ತಿಲ್ಲ. ನಾನೊಬ್ಬ ಹೆಮ್ಮೆಯ ಭಾರತೀಯ ಹಾಗೂ ಹೆಮ್ಮೆಯ ಸಿಖ್ ಆಗಿದ್ದೇನೆ. ಈ ಕೆಲಸವಿಲ್ಲದವರು (ಅಸಂಬದ್ಧ ಜನ) ಏನು ಬೇಕಾದರೂ ಮಾತನಾಡುತ್ತಾರೆ" ಎಂದು ಕಿಡಿಕಾರಿದ್ದಾರೆ.

ವಿಡಿಯೋದಲ್ಲಿ ಇಂಜಮಾಮ್ ಉಲ್ ಹಕ್, ಪಾಕಿಸ್ತಾನದ ಪ್ರಖ್ಯಾತ ಇಸ್ಲಾಮಿಕ್ ಮೌಲ್ವಿಯಾದ ಮೌಲಾನ ತಾರಿಖ್ ಜಮೀಲ್ ಅವರ ಬಗ್ಗೆ ಮಾತನಾಡುತ್ತಾ, "ನಾವು ಕ್ರಿಕೆಟ್ ಆಡುವ ಸಂದರ್ಭದಲ್ಲಿ ಮೌಲಾನ ತಾರಿಖ್ ಜಮೀಲ್ ನಮ್ಮ ಜತೆ ಮಾತನಾಡುತ್ತಿದ್ದರು. ಸಂಜೆ ವೇಳೆ ಆಟಗಾರರಿಗೆ ಇಸ್ಲಾಮಿನ ಪ್ರವಚನ ನೀಡುತ್ತಿದ್ದರು. ನಾವು ಆ ಸಂದರ್ಭದಲ್ಲಿ ಇರ್ಫಾನ್ ಪಠಾಣ್, ಮೊಹಮ್ಮದ್ ಕೈಫ್ ಹಾಗೂ ಜಹೀರ್ ಖಾನ್ ಅವರಿಗೆ ನಮ್ಮ ಜೊತೆ ನಮಾಜ್ ಮಾಡಲು ಆಹ್ವಾನಿಸುತ್ತಿದ್ದೆವು. ಈ ಸಂದರ್ಭದಲ್ಲಿ ಹರ್ಭಜನ್ ಸಿಂಗ್ ಸೇರಿದಂತೆ ಭಾರತದ ಇತರೇ ಆಟಗಾರರು ಬರುತ್ತಿದ್ದರು. ಅವರು ನಮಾಜ್ ಮಾಡುತ್ತಿರಲಿಲ್ಲ, ಆದರೆ, ತಾರಿಖ್ ಜಮೀಲ್ ಅವರ ಪ್ರವಚನಗಳನ್ನು ಕೇಳುತ್ತಿದ್ದರು.

ಈ ಸಂದರ್ಭದಲ್ಲಿ ಹರ್ಭಜನ್ ಸಿಂಗ್ ನನ್ನ ಬಳಿ ಬಂದು ನಾನೂ ಕೂಡಾ ಮೌಲಾನ ಅವರ ಮಾತುಗಳ ಕೇಳಬೇಕು ಅನಿಸುತ್ತಿದೆ ಎಂದು ಹೇಳಿದ್ದರು ಎಂದು ಇಂಜಮಾಮ್ ಉಲ್ ಹಕ್ ಹೇಳಿದ್ದರು.  ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT