ಅಹ್ಮದಾಬಾದ್ ಕ್ರಿಕೆಟ್ ಸ್ಟೇಡಿಯಂನತ್ತ ಆಗಮಿಸಿದ ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಶತಕೋಟಿಗೂ ಅಧಿಕ ಭಾರತೀಯರ ಪ್ರಾರ್ಥನೆ, ಬೇಡಿಕೆ ಇಂದು ನೆರವೇರುತ್ತದೆ ಎಂದು ಭಾವಿಸುತ್ತೇನೆ: ಸಚಿನ್ ತೆಂಡೂಲ್ಕರ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್‌ ಪಂದ್ಯ ವೀಕ್ಷಿಸಲು ಭಾನುವಾರ ಅಹಮದಾಬಾದ್‌ಗೆ ಆಗಮಿಸಿದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್, ಆತಿಥೇಯರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಬಾರಿಗೆ ಟ್ರೋಫಿಯನ್ನು ಎತ್ತುವ ಭರವಸೆ ಹೊಂದಿದ್ದೇವೆ ಎಂದಿದ್ದಾರೆ. 

ಅಹ್ಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್‌ ಪಂದ್ಯ ವೀಕ್ಷಿಸಲು ಭಾನುವಾರ ಅಹಮದಾಬಾದ್‌ಗೆ ಆಗಮಿಸಿದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್, ಆತಿಥೇಯರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಬಾರಿಗೆ ಟ್ರೋಫಿಯನ್ನು ಎತ್ತುವ ಭರವಸೆ ಹೊಂದಿದ್ದೇವೆ ಎಂದಿದ್ದಾರೆ. 

ಎರಡು ಬಾರಿಯ ಚಾಂಪಿಯನ್ ಮತ್ತು ಐದು ಬಾರಿ ವಿಶ್ವಕಪ್ ನಲ್ಲಿ ವಿಜೇತರಾಗಿರುವ ಭಾರತ-ಆಸ್ಟ್ರೇಲಿಯಾ ನಡುವೆ ಫೈನಲ್ ಪಂದ್ಯವು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾನುವಾರ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾತನಾಡಿದ ತೆಂಡೂಲ್ಕರ್, ನನ್ನ ಶುಭಾಶಯಗಳನ್ನು ತಿಳಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಿ ಮೂರನೇ ಬಾರಿಗೆ ವಿಶ್ವಕಪ್ ಎತ್ತಿ ಹಿಡಿಯುತ್ತದೆ ಎಂದು ಭಾವಿಸುತ್ತೇವೆ. ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ದಿನ ಶತಕೋಟಿಗೂ ಅಧಿಕ ನಾಗರಿಕರ ಪ್ರಾರ್ಥನೆಗಳಿಗೆ ಇಂದು ಉತ್ತರಿಸಲಾಗುವುದು ಎಂದು ಬಲವಾಗಿ ಭಾವಿಸುತ್ತೇನೆ ಎಂದರು. 

ದೇಶದಾದ್ಯಂತದ ಅಭಿಮಾನಿಗಳು ಅಖಾಡದ ಹೊರಗೆ ಜಮಾಯಿಸಿದ್ದರಿಂದ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಹಬ್ಬದ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ. ಉತ್ಸುಕರಾದ ಅಭಿಮಾನಿಗಳು, ತಮ್ಮ ಕ್ರಿಕೆಟ್ ಆಟಗಾರರ ಪೋಸ್ಟರ್‌ಗಳು ಮತ್ತು ತ್ರಿವರ್ಣದಲ್ಲಿ ಚಿತ್ರಿಸಿದ ಮುಖಗಳು, ಕ್ರೀಡಾಂಗಣದ ಸುತ್ತಲೂ ಜಮಾಯಿಸುತ್ತಿರುವುದನ್ನು ಕಾಣಬಹುದು. 

ಭಾರತೀಯ ಜೆರ್ಸಿಯನ್ನು ಧರಿಸಿದ ಅಭಿಮಾನಿಯೊಬ್ಬರು, "ನಾವೆಲ್ಲರೂ ಇಂದು ಟೀಮ್ ಇಂಡಿಯಾಗಾಗಿ ಇಲ್ಲಿದ್ದೇವೆ. ನಮ್ಮ ಪ್ರೀತಿಯ ತಂಡವನ್ನು ಪ್ರಶಸ್ತಿಯತ್ತ ಸಾಗುತ್ತಿರುವಾಗ ಅವರನ್ನು ಹುರಿದುಂಬಿಸಲು ನಾವು ಚೆನ್ನೈನಿಂದ ಬಂದಿದ್ದೇವೆ. ಅದು ಯಶಸ್ವಿಯಾಗುತ್ತದೆ ಎಂಬ ವಿಶ್ವಾಸವಿದೆ. ನಾಯಕ ರೋಹಿತ್ ಶರ್ಮಾ ಅವರು ಫೈನಲ್ ಮುಗಿದು  ಟ್ರೋಫಿಯನ್ನು ಮೇಲಕ್ಕೆತ್ತಿ ಫೈನಲ್‌ನಲ್ಲಿ ನಾವು ಇಂದು ನಮ್ಮ ಸೋಲಿಗೆ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಭಾವಿಸುತ್ತೇನೆ ಎಂದರು. 

ದೇಶಾದ್ಯಂತ ದೇವಾಲಯಗಳಲ್ಲಿ ಭಾರತ ತಂಡದ ಗೆಲುವಿಗೆ ವಿಶೇಷ ಪ್ರಾರ್ಥನೆ, ಪೂಜೆಗಳು ನೆರವೇರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ, LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ

ಹೊಸ ವಿತ್ತೀಯ ವರ್ಷದಲ್ಲಿ ಆಗಿರುವ ಬದಲಾವಣೆಗಳೇನು ಗೊತ್ತಾ? (ಹಣಕ್ಲಾಸು)

'13 ರೂ. ಮೌಲ್ಯದ ಚೀಲಗಳನ್ನು 52 ರೂ.ಗೆ ಖರೀದಿ’: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್, ತನಿಖೆಗೆ ಅನುಮತಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

SCROLL FOR NEXT