ಅಹ್ಮದಾಬಾದ್ ಕ್ರಿಕೆಟ್ ಸ್ಟೇಡಿಯಂನತ್ತ ಆಗಮಿಸಿದ ಸಚಿನ್ ತೆಂಡೂಲ್ಕರ್ 
ಕ್ರಿಕೆಟ್

ಶತಕೋಟಿಗೂ ಅಧಿಕ ಭಾರತೀಯರ ಪ್ರಾರ್ಥನೆ, ಬೇಡಿಕೆ ಇಂದು ನೆರವೇರುತ್ತದೆ ಎಂದು ಭಾವಿಸುತ್ತೇನೆ: ಸಚಿನ್ ತೆಂಡೂಲ್ಕರ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್‌ ಪಂದ್ಯ ವೀಕ್ಷಿಸಲು ಭಾನುವಾರ ಅಹಮದಾಬಾದ್‌ಗೆ ಆಗಮಿಸಿದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್, ಆತಿಥೇಯರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಬಾರಿಗೆ ಟ್ರೋಫಿಯನ್ನು ಎತ್ತುವ ಭರವಸೆ ಹೊಂದಿದ್ದೇವೆ ಎಂದಿದ್ದಾರೆ. 

ಅಹ್ಮದಾಬಾದ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್‌ ಪಂದ್ಯ ವೀಕ್ಷಿಸಲು ಭಾನುವಾರ ಅಹಮದಾಬಾದ್‌ಗೆ ಆಗಮಿಸಿದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್, ಆತಿಥೇಯರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಬಾರಿಗೆ ಟ್ರೋಫಿಯನ್ನು ಎತ್ತುವ ಭರವಸೆ ಹೊಂದಿದ್ದೇವೆ ಎಂದಿದ್ದಾರೆ. 

ಎರಡು ಬಾರಿಯ ಚಾಂಪಿಯನ್ ಮತ್ತು ಐದು ಬಾರಿ ವಿಶ್ವಕಪ್ ನಲ್ಲಿ ವಿಜೇತರಾಗಿರುವ ಭಾರತ-ಆಸ್ಟ್ರೇಲಿಯಾ ನಡುವೆ ಫೈನಲ್ ಪಂದ್ಯವು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾನುವಾರ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾತನಾಡಿದ ತೆಂಡೂಲ್ಕರ್, ನನ್ನ ಶುಭಾಶಯಗಳನ್ನು ತಿಳಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸಿ ಮೂರನೇ ಬಾರಿಗೆ ವಿಶ್ವಕಪ್ ಎತ್ತಿ ಹಿಡಿಯುತ್ತದೆ ಎಂದು ಭಾವಿಸುತ್ತೇವೆ. ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ದಿನ ಶತಕೋಟಿಗೂ ಅಧಿಕ ನಾಗರಿಕರ ಪ್ರಾರ್ಥನೆಗಳಿಗೆ ಇಂದು ಉತ್ತರಿಸಲಾಗುವುದು ಎಂದು ಬಲವಾಗಿ ಭಾವಿಸುತ್ತೇನೆ ಎಂದರು. 

ದೇಶದಾದ್ಯಂತದ ಅಭಿಮಾನಿಗಳು ಅಖಾಡದ ಹೊರಗೆ ಜಮಾಯಿಸಿದ್ದರಿಂದ ನರೇಂದ್ರ ಮೋದಿ ಕ್ರೀಡಾಂಗಣದ ಸುತ್ತಲೂ ಹಬ್ಬದ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ. ಉತ್ಸುಕರಾದ ಅಭಿಮಾನಿಗಳು, ತಮ್ಮ ಕ್ರಿಕೆಟ್ ಆಟಗಾರರ ಪೋಸ್ಟರ್‌ಗಳು ಮತ್ತು ತ್ರಿವರ್ಣದಲ್ಲಿ ಚಿತ್ರಿಸಿದ ಮುಖಗಳು, ಕ್ರೀಡಾಂಗಣದ ಸುತ್ತಲೂ ಜಮಾಯಿಸುತ್ತಿರುವುದನ್ನು ಕಾಣಬಹುದು. 

ಭಾರತೀಯ ಜೆರ್ಸಿಯನ್ನು ಧರಿಸಿದ ಅಭಿಮಾನಿಯೊಬ್ಬರು, "ನಾವೆಲ್ಲರೂ ಇಂದು ಟೀಮ್ ಇಂಡಿಯಾಗಾಗಿ ಇಲ್ಲಿದ್ದೇವೆ. ನಮ್ಮ ಪ್ರೀತಿಯ ತಂಡವನ್ನು ಪ್ರಶಸ್ತಿಯತ್ತ ಸಾಗುತ್ತಿರುವಾಗ ಅವರನ್ನು ಹುರಿದುಂಬಿಸಲು ನಾವು ಚೆನ್ನೈನಿಂದ ಬಂದಿದ್ದೇವೆ. ಅದು ಯಶಸ್ವಿಯಾಗುತ್ತದೆ ಎಂಬ ವಿಶ್ವಾಸವಿದೆ. ನಾಯಕ ರೋಹಿತ್ ಶರ್ಮಾ ಅವರು ಫೈನಲ್ ಮುಗಿದು  ಟ್ರೋಫಿಯನ್ನು ಮೇಲಕ್ಕೆತ್ತಿ ಫೈನಲ್‌ನಲ್ಲಿ ನಾವು ಇಂದು ನಮ್ಮ ಸೋಲಿಗೆ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಭಾವಿಸುತ್ತೇನೆ ಎಂದರು. 

ದೇಶಾದ್ಯಂತ ದೇವಾಲಯಗಳಲ್ಲಿ ಭಾರತ ತಂಡದ ಗೆಲುವಿಗೆ ವಿಶೇಷ ಪ್ರಾರ್ಥನೆ, ಪೂಜೆಗಳು ನೆರವೇರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT