ಕಣ್ಣೀರು ಹಾಕಿದ ರೋಹಿತ್ ಶರ್ಮಾ, ಮಹಮದ್ ಸಿರಾಜ್ 
ಕ್ರಿಕೆಟ್

ICC World Cup 2023 Final: ಸೋಲಿನ ಬೆನ್ನಲ್ಲೇ ಮೈದಾನದಲ್ಲೇ ಕಣ್ಣೀರಿಟ್ಟ ನಾಯಕ ರೋಹಿತ್ ಶರ್ಮಾ, ಮಹಮದ್ ಸಿರಾಜ್

ಭಾರತ ಕ್ರಿಕೆಟ್​ ತಂಡದ ವಿಶ್ವಕಪ್​ (ICC World Cup 2023) ಗೆಲ್ಲುವ ಆಸೆ ಭಗ್ನಗೊಂಡಿದ್ದು, ಫೈನಲ್ ಪಂದ್ಯದಲ್ಲಿ ಭಾರತ ಸೋಲುತ್ತಿದ್ದಂತೆಯೇ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ಮಹಮದ್ ಸಿರಾಜ್ ಮೈದಾನದಲ್ಲೇ ಕಣ್ಣೀರು ಹಾಕಿದರು.

ಅಹ್ಮದಾಬಾದ್​: ಭಾರತ ಕ್ರಿಕೆಟ್​ ತಂಡದ ವಿಶ್ವಕಪ್​ (ICC World Cup 2023) ಗೆಲ್ಲುವ ಆಸೆ ಭಗ್ನಗೊಂಡಿದ್ದು, ಫೈನಲ್ ಪಂದ್ಯದಲ್ಲಿ ಭಾರತ ಸೋಲುತ್ತಿದ್ದಂತೆಯೇ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ಮಹಮದ್ ಸಿರಾಜ್ ಮೈದಾನದಲ್ಲೇ ಕಣ್ಣೀರು ಹಾಕಿದರು.

ಭಾರತ ನೀಡಿದ್ದ 241 ರನ್ ಗಳ ಗುರಿಯನ್ನು ಆಸ್ಟ್ರೇಲಿಯಾ ತಂಡ 43 ಓವರ್ ನಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಗಳಿಸಿ 6 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಟೂರ್ನಿಯುದ್ಧಕ್ಕೂ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ತಂಡದ ಆಟಗಾರರು ಕೊನೆಯ ಫೈನಲ್ ಪಂದ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದರು. ಅಂತೆಯೇ ಪಂದ್ಯ ಮುಕ್ತಾಯಗೊಂಡ ಬಳಿಕ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ವೇಗದ ಬೌಲರ್​ ಮೊಹಮ್ಮದ್ ಸಿರಾಜ್​ ಕಣ್ಣಿರು ಹಾಕಿದರು.

ಪಂದ್ಯದಲ್ಲಿ ಸೋಲುತ್ತಿದ್ದಂತೆ ಭಾರತ ತಂಡದ ಆಟಗಾರರು ನಿರಾಸೆ ಅನುಭವಿಸಿದರು. ಸೋಲಿನ ಸೂಚನೆ ಸಿಕ್ಕಿದ್ದ ಕಾರಣ ಬಹುತೇಕ ಆಸ್ಟ್ರೇಲಿಯಾ ತಂಡ ಗೆಲುವಿನ ರನ್ ಬಾರಿಸುವ ತನಕ ದುಃಖ ಅನುಭವಿಸಿದರು. ಆದರೆ, ಒಂದು ಬಾರಿ ಸೋಲು ಎದುರಾದ ತಕ್ಷಣ ಎಲ್ಲರ ದುಃಖದ ಕಟ್ಟೆಯೊಡೆಯಿತು. ಸಿರಾಜ್ ಅಳಲು ಆರಂಭಿಸಿದರೆ ಜಸ್​ಪ್ರಿತ್ ಬುಮ್ರಾ ಅವರನ್ನು ಸಮಾಧಾನ ಮಾಡಿದರು. ರೋಹಿತ್ ಶರ್ಮಾ ಕಣ್ಣೀರು ಸುರಿಸುತ್ತಾ ಬಗ್ಗಿ ಹೊರನಡೆದರು. ತಂಡದ ಡಗೌಟ್ ನಲ್ಲಿ ಕುರ್ಚಿಮೇಲೆ ಕುಳಿತು ರೋಹಿತ್ ಕಣ್ಣೀರು ಹಾಕಿದ ವಿಡಿಯೋ ವೈರಲ್ ಆಗುತ್ತಿದೆ.

ಅತ್ತ ವಿರಾಟ್​ ಕೊಹ್ಲಿ ಕೂಡ ಟೋಪಿಯನ್ನು ಮುಖಕ್ಕೆ ಮುಚ್ಚಿಕೊಂಡು ಹೊರಕ್ಕೆ ನಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video