ವಿರಾಟ್ ಕೊಹ್ಲಿಯನ್ನು ತಬ್ಬಿ ಸಂತೈಸುತ್ತಿರುವ ಅನುಷ್ಕಾ ಶರ್ಮ 
ಕ್ರಿಕೆಟ್

ಏಕದಿನ ವಿಶ್ವಕಪ್ ಫೈನಲ್ ಸೋಲು: ನೊಂದ ಪತಿ ವಿರಾಟ್ ಕೊಹ್ಲಿಯನ್ನು ತಬ್ಬಿ ಸಂತೈಸಿದ ಅನುಷ್ಕಾ ಶರ್ಮ

ಶತಕೋಟಿ ಭಾರತೀಯರ ಕನಸು ಭಗ್ನಗೊಂಡು ಕ್ರಿಕೆಟ್ ಅಭಿಮಾನಿಗಳು ನಿನ್ನೆ ಭಾನುವಾರ ಭಾರತ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಾಗ ತಂಡದ ಆಟಗಾರ ವಿರಾಟ್ ಕೊಹ್ಲಿ ಕೂಡ ಕಣ್ಣೀರು ಹಾಕಿದ್ದಾರೆ. 

ಅಹಮದಾಬಾದ್: ಶತಕೋಟಿ ಭಾರತೀಯರ ಕನಸು ಭಗ್ನಗೊಂಡು ಕ್ರಿಕೆಟ್ ಅಭಿಮಾನಿಗಳು ನಿನ್ನೆ ಭಾನುವಾರ ಭಾರತ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಾಗ ತಂಡದ ಆಟಗಾರ ವಿರಾಟ್ ಕೊಹ್ಲಿ ಕೂಡ ಕಣ್ಣೀರು ಹಾಕಿದ್ದಾರೆ. 

ತಮ್ಮ ಅದ್ಬುತ ಬ್ಯಾಟಿಂಗ್ ಗೆ ಪಂದ್ಯಾವಳಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರೂ ಕೂಡ ವಿರಾಟ್ ಕೊಹ್ಲಿ ಹಾಗೂ ಅವರ ತಂಡಕ್ಕೆ ನಿನ್ನೆ ಅದೃಷ್ಟ ಕೈಕೊಟ್ಟಿತು. ವಿಶ್ವಕಪ್ ಟ್ರೋಫಿ ಕೈಜಾರಿತು. ಆಸ್ಟ್ರೇಲಿಯಾ ತಂಡದಿಂದ ಟ್ರಾವಿಸ್ ಹೆಡ್ ಶತಕ ಬಾರಿಸುವ ಮೂಲಕ ತಂಡವನ್ನು ವಿಶ್ವಕಪ್ ಗೆಲ್ಲಲು ಸುಲಭವಾಗಿ ದಾರಿ ಮಾಡಿಕೊಟ್ಟರು. ಈ ವೇಳೆಗಾಗಲೇ ಭಾರತ ತಂಡಕ್ಕೆ ತಾನು ಸೋಲುವುದು ಖಚಿತವಾಗಿತ್ತು. ಪ್ರೇಕ್ಷಕರ ಸ್ಟ್ಯಾಂಡ್ ನಲ್ಲಿ ಕುಳಿತಿದ್ದ ಪತ್ನಿ ಅನುಷ್ಕಾ ಶರ್ಮ ಬಳಿ ಬಂದ ವಿರಾಟ್ ಕೊಹ್ಲಿ ಪರಸ್ಪರ ತಬ್ಬಿಕೊಂಡು ಸಂತೈಸಿಕೊಂಡರು.

ಪತ್ನಿ ಅನುಷ್ಕಾರನ್ನು ತಬ್ಬಿಕೊಂಡ ವಿರಾಟ್ ಕೊಹ್ಲಿಗೆ ದುಃಖ ಉಮ್ಮಳಿಸಿ ಬಂತು. ಈ ವೇಳೆ ಅನುಷ್ಕಾ ಶರ್ಮ ವಿರಾಟ್ ರನ್ನು ಸಂತೈಸುತ್ತಿರುವುದು ಭಾವನಾತ್ಮಕ ಸನ್ನಿವೇಶವಾಗಿತ್ತು. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ವಿರಾಟ್ ಕೊಹ್ಲಿ 63 ಎಸೆತಗಳಲ್ಲಿ 54 ರನ್ ಗಳಿಸಿ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಅವರಿಂದ ಔಟಾದರು. ಆ ಸಮಯದಲ್ಲಿ ಕೂಡ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪತ್ನಿ ಅನುಷ್ಕಾ ಸೇರಿದಂತೆ ಪ್ರೇಕ್ಷಕರು ದಿಗ್ಭ್ರಾಂತರಾದರು.

241 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ, ಟ್ರಾವಿಸ್ ಹೆಡ್ ಅವರ 120 ಎಸೆತಗಳಲ್ಲಿ 137 ರನ್ ಗಳಿಸಿ 6ನೇ ಏಕದಿನ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಸಂಸತ್ ನಲ್ಲಿ ಕೋಲಾಹಲ, ಕಲಾಪ ಮುಂದೂಡಿಕೆ

ಔಟಾಗಿ ಹೋಗುತ್ತಿದ್ದ Pak ಆಟಗಾರನ ಕಡೆ ಕೋಪದಿಂದ ನುಗ್ಗಿದ ಸೂರ್ಯವಂಶಿ, ಕೂಡಲೇ ಮಧ್ಯಪ್ರವೇಶಿಸಿದ ವಿಹಾನ್, Video!

BLA ಯಲ್ಲಿ ಸುಶಿಕ್ಷಿತ ಹೆಣ್ಣು ಮಕ್ಕಳು! ಪಾಕ್ ವಿರುದ್ಧ ರಾತ್ರಿಯಿಡೀ ಹೋರಾಡಿ ಪ್ರಾಣತೆತ್ತ ಫಿದಾಯೀನ್': ಅಂತಿಮ ಕ್ಷಣದ Video!

ಸಿಜೆ ರಾಯ್ ಆತ್ಮಹತ್ಯೆ: ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ಒತ್ತಾಯ, ಕೇಂದ್ರಕ್ಕೆ ಪತ್ರ!

'ಮುಖಂಡರ ಮುಂದೆ ಗ್ಲಾಮರಸ್‌ ಆಗಿರಲು ಬಯಸಬೇಡಿ': ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿಕೆ ವೈರಲ್!

SCROLL FOR NEXT