ಉದಯ್ ಸಹರಾನ್ 
ಕ್ರಿಕೆಟ್

ಅಂಡರ್-19 ಏಷ್ಯಾಕಪ್‌: ಭಾರತ ತಂಡ ಪ್ರಕಟ, ಉದಯ್ ಸಹರಾನ್ ನಾಯಕ

ಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ನಲ್ಲಿ ಭರವಸೆಯ ಬ್ಯಾಟ್ಸ್‌ಮನ್ ಉದಯ್ ಸಹರಾನ್ ಅವರು ಹಾಲಿ ಚಾಂಪಿಯನ್ ಭಾರತವನ್ನು ಮುನ್ನಡೆಸಲಿದ್ದಾರೆ.

ನವದೆಹಲಿ: ಡಿಸೆಂಬರ್ 8 ರಿಂದ ಯುಎಇಯಲ್ಲಿ ನಡೆಯಲಿರುವ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ನಲ್ಲಿ ಭರವಸೆಯ ಬ್ಯಾಟ್ಸ್‌ಮನ್ ಉದಯ್ ಸಹರಾನ್ ಅವರು ಹಾಲಿ ಚಾಂಪಿಯನ್ ಭಾರತವನ್ನು ಮುನ್ನಡೆಸಲಿದ್ದಾರೆ. ಸೌಮಿ ಕುಮಾರ್ ಪಾಂಡೆ ಅವರನ್ನು 15 ಸದಸ್ಯರ ತಂಡಕ್ಕೆ ಉಪನಾಯಕರನ್ನಾಗಿ ನೇಮಿಸಲಾಗಿದೆ. ಅಂಡರ್ -19  ಏಷ್ಯಾಕಪ್‌ನಲ್ಲಿ ಎಂಟು ಬಾರಿ ಪ್ರಶಸ್ತಿ ಗೆದ್ದಿರುವ ಭಾರತ ಅತ್ಯಂತ ಯಶಸ್ವಿ ತಂಡವಾಗಿದೆ.

ಟೂರ್ನಿಯಲ್ಲಿ ಭಾರತವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೇಪಾಳವನ್ನು ಎದುರಿಸಲಿದೆ.  ಡಿಸೆಂಬರ್ 8 ರಂದು ಐಸಿಸಿ ಅಕಾಡೆಮಿ ಓವಲ್-1 ನಲ್ಲಿ ಆಫ್ಘನ್ ವಿರುದ್ಧದ ಪಂದ್ಯದೊಂದಿಗೆ ಏಷ್ಯಾಕಪ್ ಅಭಿಯಾನವನ್ನು ಭಾರತ ಆರಂಭಿಸಲಿದೆ.ಡಿಸೆಂಬರ್ 10 ರಂದು ಅದೇ ಸ್ಥಳದಲ್ಲಿ ಬಹುನಿರೀಕ್ಷಿತ ಪಾಕಿಸ್ತಾನವನ್ನು ಎದುರಿಸಲಿದೆ ಮತ್ತು ಡಿಸೆಂಬರ್ 12 ರಂದು ನೇಪಾಳವನ್ನು ಎದುರಿಸಲಿದೆ. ಡಿಸೆಂಬರ್ 17 ರಂದು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

ಭಾರತ  ತಂಡ ಇಂತಿದೆ: ಉದಯ್ ಸಹರಾನ್ (ನಾಯಕ), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಧನುಷ್ ಗೌಡ, ಅವಿನಾಶ್ ರಾವ್( ವಿಕೆಟ್ ಕೀಪರ್) ಎಂ ಅಭಿಷೇಕ್, ಇನ್ನೇಶ್ ಮಹಾಜನ್ (ವಾಕ್), ಆರಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT